ಕಟೀಲು: ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ನವರಾತ್ರಿ ಲಲಿತಾ ಪಂಚಮಿ ಪ್ರಯುಕ್ತ ಗುರುವಾರ ರಾತ್ರಿ ಅನ್ನಪ್ರಸಾದ ಸ್ವೀಕರಿಸಿದ ಸುಮಾರು 18 ಸಾವಿರ ಮಹಿಳಾ ಭಕ್ತರಿಗೆ ದೇವರ ಶೇಷ ವಸ್ತ್ರ ನೀಡಲಾಯಿತು.,
ಸಂಜೆ 6.30ಕ್ಕೆ ಅನ್ನಪ್ರಸಾದ ವಿತರಣೆ ಪ್ರಾರಂಭವಾಗಿದ್ದು, ಭಕ್ತರಿಗೆ ಸೂಕ್ತ ವ್ಯವಸ್ಥೆ ಕಲ್ಪಿಸಲಾಗಿತ್ತು. ಸುಮಾರು 18 ಸಾವಿರ ಶೇಷವಸ್ತ್ರ ಸಿದ್ಧಪಡಿಸಲಾಗಿದ್ದು, ತಡರಾತ್ರಿಯವರೆಗೂ ವಿತರಣೆ ಕಾರ್ಯ ನಡೆಯಿತು. ಮಧ್ಯಾಹ್ನ ಮತ್ತು ರಾತ್ರಿ ಸುಮಾರು 30 ಸಾವಿರ ಮಂದಿಗೆ ಊಟದ ವ್ಯವಸ್ಥೆ ಮಾಡಲಾಗಿತ್ತು.
ಅನ್ನಪ್ರಸಾದ ಹಾಗೂ ಶೇಷವಸ್ತ್ರ ಪಡೆಯಲು ಸಮರ್ಪಕ ಸರದಿಸಾಲಿನ ವ್ಯವಸ್ಥೆ ಮಾಡಲಾಗಿತ್ತು. ಬಸ್ ನಿಲ್ದಾಣ ಪರಿಸರ, ಕುದುರು ಪ್ರದೇಶ ಹಾಗೂ ಸೇತುವೆಯ ಮೇಲೆ ಪ್ರತ್ಯೇಕ ಸಾಲುಗಳಿದ್ದವು. ದೇವರ ದರ್ಶನ ಹಾಗೂ ಅನ್ನಪ್ರಸಾದ ವಿತರಣೆಗೆ ಪ್ರತ್ಯೇಕ ವ್ಯವಸ್ಥೆ ಮಾಡಲಾಗಿತ್ತು.
ಭದ್ರತಾ ವ್ಯವಸ್ಥೆಗೆ 100 ಪೊಲೀಸರನ್ನು ನಿಯೋಜಿಸಲಾಗಿತ್ತು. ಶಾಲಾ ಕಾಲೇಜಿನ ವಿದ್ಯಾರ್ಥಿಗಳು ಹಾಗೂ ಅಧ್ಯಾಪಕ ವೃಂದದ 300 ಮಂದಿ ಸ್ವಯಂ ಸೇವಕರಿದ್ದರು. 30 ಸಾವಿರಕ್ಕೂ ಹೆಚ್ಚು ಮಂದಿಗೆ ಅನ್ನಪ್ರಸಾದ ವ್ಯವಸ್ಥೆ ಮಾಡಲಾಗಿತ್ತು.
ಉಡುಪಿ: ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ - 1,52,000 ಮೌಲ್ಯದ…
ಮಂಗಳೂರು: ಎಂಡಿಎಂಎ ಮಾರಾಟ ; ರೂ.2.10 ಲಕ್ಷ ಮೌಲ್ಯದ ಮಾದಕ ವಸ್ತು ಸಹಿತ ಆರೋಪಿ ಬಂಧನ ಮಂಗಳೂರು: ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳನ್ನು…
ರಾಮಮಂದಿರ ದೇಣಿಗೆ ಕಳ್ಳತನ ವಿವಾದ: ಟ್ರಸ್ಟ್ನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಚಂಪತ್ ರಾಯ್ ರಾಜೀನಾಮೆ ಲಕ್ನೋ: ಅಯೋಧ್ಯೆ ರಾಮಮಂದಿರದಲ್ಲಿ ದೇಣಿಗೆ…
ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಎಫ್ಐಆರ್ ಕಡ್ಡಾಯ: ಪೊಲೀಸರಿಗೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸೂಚನೆ ಬೆಂಗಳೂರು: ಪ್ರತೀಕಾರಾತ್ಮಕ ಅಶ್ಲೀಲತೆ ಹಾಗೂ…
ರಾಮಭಕ್ತರ ಅಗ್ನಿಪರೀಕ್ಷೆ ಮಾಡಬೇಡಿ, ಭಕ್ತರು ತಮ್ಮ ನಂಬಿಕೆ ಮತ್ತು ಭಕ್ತಿಯಿಂದ ಕಾಣಿಕೆ ನೀಡುತ್ತಾರೆ : ಯೋಗಿ ಆದಿತ್ಯನಾಥ್ ಲಕ್ನೋ: ರಾಮಭಕ್ತರ…
ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ ; ಇನ್ನು ಮುಂದೆ ಶನಿವಾರ ಅರ್ಧದಿನ ಮಾತ್ರ ಶಾಲೆ ಬೆಂಗಳೂರು: ಶಾಲಾ…