ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇಗುಲದ ಆರು ಯಕ್ಷಗಾನ ಮೇಳಗಳ ತಿರುಗಾಟ ಆರಂಭ – vishwanews24
ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇಗುಲದ ಆರು ಯಕ್ಷಗಾನ ಮೇಳಗಳ ತಿರುಗಾಟ ಆರಂಭ
ಕಟೀಲು: ಕಟೀಲು ಶ್ರೀ ದುರ್ಗಾಪರಮೇಶ್ವರೀ ಪ್ರಸಾದಿತ ದಶಾವತಾರ, ಯಕ್ಷಗಾನ ಮಂಡಳಿಯ ಆರೂ ಮೇಳಗಳ ಸೇವೆಯಾಟ ದೇವಳದ ರಥಬೀದಿಯಲ್ಲಿ ನಡೆಯಿತು. ನಿನ್ನೆ (ನ.25) ಸಂಜೆ ದೇವಳದ ಗೋಪುರದಲ್ಲಿ ಆರೂ ಮೇಳಗಳ ಪ್ರಧಾನ ಭಾಗವತರಿಂದ ತಾಳಮದ್ದಳೆ ಮತ್ತು ಗೆಜ್ಜೆ ಹಸ್ತಾಂತರ ನಂತರ ಚೌಕಿ ಪೂಜೆ, ಸೇವೆಯಾಟ ‘ಪಾಂಡಾಶ್ವಮೇಧ’ ನಡೆಯಿತು.
ಈ ಸಂದರ್ಭ ವೇದವ್ಯಾಸ ತಂತ್ರಿ, ಮೊಕ್ತೇಸರರಾದ ವಾಸುದೇವ ಆಸ್ರಣ್ಣ, ಸನತ್ ಕುಮಾರ್ ಶೆಟ್ಟಿ ಕೊಡೆತ್ತೂರುಗುತ್ತು, ಮೇಳದ ಸಂಚಾಲಕ ಕಲ್ಲಾಡಿ ದೇವಿಪ್ರಸಾದ್ ಶೆಟ್ಟಿ, ಲಕ್ಷೀನಾರಾಯಣ ಆಸ್ರಣ್ಣ, ವೆಂಕಟರಮಣ ಆಸ್ರಣ್ಣ, ಅನಂತಪದ್ಮನಾಭ ಆಸ್ರಣ್ಣ, ಕಮಲಾದೇವಿ ಪ್ರಸಾದ್ ಆಸ್ರಣ್ಣ, ಹರಿನಾರಾಯಣ ದಾಸ ಆಸ್ರಣ್ಣ, ಅತ್ತೂರು ಬೈಲು ವೆಂಕಟರಾಜ ಉಡುಪ, ಹರಿ ಉಡುಪ ಮೂಡುಮನೆ, ಶಾಸಕ ಉಮಾನಾಥ ಕೋಟ್ಯಾನ್, ವಿಧಾನ ಪರಿಷತ್ ಸದಸ್ಯ ಐವನ್ ಡಿ’ಸೋಜಾ, ಮಾಜಿ ಸಚಿವ ರಮಾನಾಥ ರೈ, ದೇವಸ್ಯ ಹಾಗೂ ಕೊಡೆತ್ತೂರುಗುತ್ತು ಫ್ಯಾಮಿಲಿ ಟ್ರಸ್ಟ್ ಅಧ್ಯಕ್ಷರಾದ ನಿತಿನ್ ಶೆಟ್ಟಿ ಕೊಡೆತ್ತೂರುಗುತ್ತು, ಗಣೇಶ್ ವಿ. ಶೆಟ್ಟಿ ಐಕಳ, ಎಕ್ಕಾರು ಕೊಡಮಣಿತ್ತಾಯ ದೈವಸ್ಥಾನದ ಆಡಳಿತ ಮೊಕ್ತೇಸರ ನಿತಿನ್ ಹೆಗ್ಡೆ ಕಾವರಮನೆ ಎಕ್ಕಾರು, ಪ್ರದೀಪ್ ಕುಮಾರ್ ಶೆಟ್ಟಿ ಎಕ್ಕಾರು, ಪುನರೂರು ಪ್ರತಿಷ್ಠಾನದ ಅಧ್ಯಕ್ಷ ದೇವಪ್ರಸಾದ್ ಪುನರೂರು ಮತ್ತಿತರ ಹಿರಿಯ ಗಣ್ಯರು ಉಪಸ್ಥಿತರಿದ್ದರು. ಈ ಬಾರಿಯೂ ಕಟೀಲು ಮೇಳದ ಯಕ್ಷಗಾನ ಬಯಲಾಟಗಳು ಕಾಲಮಿತಿಯಲ್ಲಿ ನಡೆಯಲಿವೆ.
ಬೆಳ್ತಂಗಡಿ : ಗ್ರಾಪಂ ಉಪಚುನಾವಣೆ – 3 ಸ್ಥಾನಗಳಲ್ಲೂ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳಿಗೆ ಜಯ – vishwanews24
