Featured

ಕಟೀಲು ಶ್ರೀ ದುರ್ಗಾಪರಮೇಶ್ವರೀ ಯಕ್ಷಗಾನ: ನ.16 ರಂದು ಏಳನೇ ಮೇಳದ ಪಾದಾರ್ಪಣೆ – vishwanews24

ಕಟೀಲು ಯಕ್ಷಗಾನ:  ನ.16 ರಂದು ಏಳನೇ ಮೇಳದ ಪಾದಾರ್ಪಣೆ

ಮಂಗಳೂರು : ದಶಾವತಾರ ಯಕ್ಷಗಾನ ಮಂಡಳಿಯ ಈ ವರುಷದ ತಿರುಗಾಟದ ಆರಂಭೋತ್ಸವದಂದು ಏಳನೆಯ ಮೇಳದ ಪಾದಾರ್ಪಣೆ ನವೆಂಬರ್ 16ರ ಭಾನುವಾರದಂದು ನಡೆಯಲಿದೆ.

ಚಿನ್ನ ಬೆಳ್ಳಿಗಳ ಕಿರೀಟ ಇತ್ಯಾದಿ ಪರಿಕರಗಳನ್ನು ವೈಭವದ ಮೆರವಣಿಗೆಯಲ್ಲಿ ಬಜಪೆಯಿಂದ ಕಟೀಲಿಗೆ ತಂದು ದೇವರಿಗೆ ಒಪ್ಪಿಸಲಾಗುವುದು. ಏಳನೆಯ ಮೇಳಕ್ಕೆ ಭಕ್ತರು ಸುಮಾರು ಒಂದು ಕೋಟಿ ರೂಪಾಯಿ ವೆಚ್ಚದಲ್ಲಿ ನೀಡಿರುವ ದೇವರ ಕಿರೀಟಗಳು, ತೊಟ್ಟಿಲು, ಚಿನ್ನಬೆಳ್ಳಿಗಳ ಆಯುಧ, ಅಪರಣಗಳು ಸೇರಿವೆ.

ಈ ಸಂದರ್ಭ ಬಜಪೆಯಲ್ಲಿ ನಡೆಯುವ ಸಮಾರಂಭದಲ್ಲಿ ಕೇಂದ್ರ ಸಚಿವ ಪ್ರಹ್ಲಾದ ಜೋಷಿಯವರು ಮೆರವಣಿಗೆಯನ್ನು ಉದ್ಘಾಟಿಸಲಿದ್ದು, ಮಾನವ ಹಕ್ಕು ಆಯೋಗದ ಅಧ್ಯಕ್ಷರಾದ ಶ್ಯಾಂ ಭಟ್, ವಜ್ರದೇಹಿ ಮಠದ ಶ್ರೀ ರಾಜಶೇಖರಾನಂದ ಸ್ವಾಮೀಜಿ, ಅಭಯಚಂದ್ರ ಜೈನ್, ಕೃಷ್ಣ ಪಾಲೇಮಾರ್, ಶಾಸಕರಾದ ಶ್ರೀ ಉಮಾನಾಥ ಕೋಟ್ಯಾನ್, ಶ್ರೀ ಮಿಥುನ್ ರೈ ಮತ್ತು ಮೊದಲಾದ ಗಣ್ಯರು ಈ ಸಂದರ್ಭ ಉಪಸ್ಥಿತರಿರುತ್ತಾರೆ.

ಅಲ್ಲದೆ ಸ್ತಬ್ಧ  ಚಿತ್ರಗಳಲ್ಲಿ ಮೇಳಗಳ ದೇವರು, ಪರಿಕರಗಳೊಂದಿಗೆ ವೇದಘೋಷ, ಮೂರು ಸಾವಿರದಷ್ಟು ಮಂದಿ ಭಜನೆಯಲ್ಲಿ, ನಾಲ್ಕಕ್ಕೂ ಹೆಚ್ಚು ಚೆಂಡೆ ತಂಡಗಳು, ವಾದ್ಯ, ಡೋಲು, ಕೊಂಬು, ಸ್ಯಾಕ್ರೋಫೋನ್, ನಾಗಸ್ವರ, ಬೇತಾಳ, ಕೀಲುಕುದುರೆ, ಹುಲಿವೇಷ ಇತ್ಯಾದಿಗಳು ಇರಲಿವೆ ಸುಮಾರು ಹದಿನೈದರಿಂದ ಇಪ್ಪತ್ತು ಸಾವಿರ ಮಂದಿ ಈ ಮೆರವಣಿಗೆಯಲ್ಲಿ ಭಾಗವಹಿಸುವ ನಿರೀಕ್ಷೆಯಿದ್ದು, ಎಕ್ಕಾರಿನಿಂದ ಕಟೀಲುವರೆಗೆ ಕಾಲ್ನಡಿಗೆಯಲ್ಲಿ ಬಂದು ಮೇಳದ ಸ್ವತ್ತುಗಳನ್ನು ದೇವರಿಗೆ ಸಮರ್ಪಿಸಲಾಗುವುದು. ದೇವಸ್ಥಾನ ಬಳಿ, ಬಸ್ ನಿಲ್ದಾಣದಲ್ಲಿ ಉಪಾಹಾರದ ವ್ಯವಸ್ಥೆ ಮಾಡಲಾಗಿದೆ. ಭಜನೆಯಿಂದ ಕಟೀಲುವರೆಗೆ ಹಾದಿಯುದ್ದಕ್ಕೂ ಭಕ್ತಾದಿಗಳು ಪಾನೀಯದ ವ್ಯವಸ್ಥೆ ಮಾಡಿರುತ್ತಾರೆ.

ತಾ. 14ರಂದು ಚಂಡಿಕಾಹೋಮ, ಅಷ್ಟೋತ್ತರಶತ ನಾರಿಕೇಲ ಗಣಯಾಗ, ಆಗುತ್ತಾರಣ. ತಾ. 16ರಂದು ಬೆಳಿಗ್ಗೆ 10.30ಕ್ಕೆ ಪೂಜಾ ಕಿರೀಟಗಳ ಸ್ಥಾಪನೆ, ಆವಾಹನೆ, ಸಂಜೆ 3 ಗಂಟೆಗೆ ತಾಳಮದ್ದಲೆ ಇಡುವುದು. 5 ಗಂಟೆಗೆ ಗೆಜ್ಜೆ ಕಟ್ಟುವುದು, ಬಯಲಾಟ ಪಾಂಡವಾಶ್ವಮೇಧ ನಡೆಯಲಿದೆ. ಸಂಜೆ 6ಕ್ಕೆ ನಡೆಯುವ ಸಭಾಕಾರಕ್ರಮದಲ್ಲಿ ಫಲಿಮಾರು ಮಠದ ಶ್ರೀ ವಿದ್ಯಾಧೀಶತೀರ್ಥ ಸ್ವಾಮೀಜಿ, ಸಾರಿಗೆ ಮತ್ತು ಮುಜರಾಯಿ ಸಚಿವ ಶ್ರೀ ರಾಮಲಿಂಗಾರೆಡ್ಡಿ, ಮಾಜಿ ಮುಖ್ಯಮಂತ್ರಿಗಳಾದ ವೀರಪ್ಪ ಮೊಯ್ಲಿ, ಕನ್ನಡ ಸಂಸ್ಕೃತಿ ಇಲಾಖೆಯ ಸಚಿವರಾದ ಶ್ರೀ ಶಿವರಾಜ ತಂಗದಡಿ, ಶ್ರೀ ದಿನೇಶ್ ಗುಂಡೂರಾವ್, ಸಾಂಸದ ಶ್ರೀ ಬ್ರಿಜೇಶ್ ಚೌಟ, ಶಾಸಕರಾದ ಶ್ರೀ ಉಮನಾಥ ಕೋಟ್ಯಾನ್ ಮತ್ತು ಮುಂತಾದ ಗಣ್ಯರು ಭಾಗವಹಿಸಲಿದ್ದಾರೆ. ಅಂದು ಇಪ್ಪತ್ತೈದು ಸಾವಿರಕ್ಕೂ ಹೆಚ್ಚು ಮಂದಿ ಕ್ಷೇತ್ರಕ್ಕೆ ಬರುವ ನಿರೀಕ್ಷೆ ಇದೆ.

ಆಟ ಪಾಠ ಊಟಗಳಿಗೆ ಪ್ರಸಿದ್ಧವಾದ ಕಟೀಲು ಕ್ಷೇತ್ರದಲ್ಲಿ ಶಿಕ್ಷಣಕ್ಕಾಗಿ ವಾರ್ಷಿಕ ರೂ. 10 ಕೋಟಿ ವಿನಿಯೋಗಿಸಲಾಗುತ್ತಿದೆ. ಬೆಳಿಗ್ಗೆ ಗಂಜಿ ಊಟ ಸೇರಿದಂತೆ ಮೂರೂ ಹೊತ್ತು ಅನ್ನಪ್ರಸಾದ ನೀಡಲಾಗುತ್ತಿದೆ. ಮೂರು ಗೋಶಾಲೆ ನಡೆಸಲಾಗುತ್ತಿದೆ. ಭರತನಾಟ್ಯ, ಸಂಗೀತ ಕಲಾವಿದರಿಗೆ ಸೇವೆ ಸಲ್ಲಿಸಲು ದೇವಳದಲ್ಲಿ ಅವಕಾಶ ಮಾಡಲಾಗಿದ್ದು, ಇತ್ತೀಚಿನ ದಿನಗಳಲ್ಲಿ ನೂರಾರು ಮಂದಿ ಸೇವೆ ಸಲ್ಲಿಸಿ ಧನ್ಯತೆಯನ್ನು ಪಡೆಯುತ್ತಿದ್ದಾರೆ.

ಖಾಯಂ ಸೇವಾದಾರರ ಸಮಾವೇಶ, ಕಲಾವಿದರ ಸಮಾವೇಶ, ಕಟೀಲು ಮೇಳಗಳ ಇತಿಹಾಸ ದಾಖಲೀಕರಣಕ್ಕೆ ಚಾಲನೆ ನೀಡಿ, ಶೈಕ್ಷಣಿಕವಾಗಿ (ಆಕಡೆಮಿಕ್) ವಿಚಾರ ಸಂಕಿರಣ ಮಾಡಲಾಗಿದೆ. ಕಟೀಲು ಮೇಳಗಳಿಗೆ ಸಂಬಂಧಿಸಿಯೇ ಸಾಮಾಜಿಕ ಜಾಲತಾಣಗಳನ್ನು ನಡೆಸುತ್ತಿರುವವರನ್ನು ಒಂದು ಗೂಡಿಸಿ ಸಂವಾದ ನಡೆಸಲಾಗಿದೆ. ಇದರಲ್ಲಿ ಸಾವಿರಾರು ಅಲ್ಲ ಲಕ್ಷ ಸಂಖ್ಯೆಯಲ್ಲಿ ವಿಡೀಯೋ, ಛಾಯಾಚಿತ್ರಗಳನ್ನು ಮಾಡಿದವರೂ ಭಾಗವಹಿಸಿದ್ದರು ಎನ್ನುವುದು ವಿಶೇಷ.

ತೆಂಕುತಿಟ್ಟಿನ ಯಕ್ಷಗಾನಕ್ಕಾಗಿಯೇ ಪ್ರಸ್ತುತ ಇರುವ ಏಕೈಕ ಮಾಸಪತ್ರಿಕೆಯನ್ನು ಕಟೀಲು ದೇವಸ್ಥಾನ ನಡೆಸುತ್ತಿದ್ದು, ಬರಹಗಾರರ ಓದುಗರ ಸಮಾವೇಶ, ಎಳೂ ಮೇಳಗಳ ಕಲಾವಿದರ ಸಮಾವೇಶ, ಕಟೀಲು ಮೇಳಗಳಿಗೆ ಸಂಬಂಧಿಸಿ ಛಾಯಾಚಿತ್ರಗಳ ಪ್ರದರ್ಶನ, ಬಜಪೆಯಿಂದ ದೇವರ ವೈಭವದ ಮೆರವಣಿಗೆ ಬಳಿಕ ಮೇಳಗಳ ತಿರುಗಾಟಕ್ಕೆ ಚಾಲನೆ ನೀಡಲಾಗುವುದು ಎಂದು ಶ್ರೀಹರಿನಾರಾಯಣದಾಸ ಆಸ್ರಣ್ಣ, ಅನುವಂಶಿಕ ಅರ್ಚಕರು ಪತ್ರಿಕಾಗೋಷ್ಠಿಯಲ್ಲಿ ಮಾಹಿತಿಯನ್ನ ನೀಡಿದರು ಈ ಸಂದರ್ಭದಲ್ಲಿ ಕೊಡೆತ್ತೂರುಗುತ್ತು ಸನತ್ ಕುಮಾರ ಶೆಟ್ಟಿ, ಅಧ್ಯಕ್ಷರು, ಆಡಳಿತ ಸಮಿತಿ.

ವಾಸುದೇವ ಆಸ್ರಣ್ಣ, ಅನುವಂಶಿಕ ಮೊತ್ತೇಸರರು ಹಾಗೂ ಆನುವಂಶಿಕ ಅರ್ಚಕರು , ಲಕ್ಷ್ಮೀನಾರಾಯಣ ಆಸ್ರಣ್ಣ, ಆನುವಂಶಿಕ ಆರ್ಚಕರು , ಆನಂತಪದ್ಮನಾಭ ಆಸ್ರಣ್ಣ, ಅನುವಂಶಿಕ ಅರ್ಚಕರು , ಬಿಪಿನ್‌ಚಂದ್ರ ಶೆಟ್ಟಿ, ಕೊಡೆತ್ತೂರುಗುತ್ತು      ಕಲ್ಲಾಡಿ ದೇವೀಪ್ರಸಾದ ಶೆಟ್ಟಿ, ಸಂಚಾಲಕರು, ಕಟೀಲು ಮೇಳಗಳುಸುದ್ದಿಗೋಷ್ಠಿಯಲ್ಲಿ ಉಪಸ್ಥಿತರಿದ್ದರು

Vishwa News 24

Recent Posts

50 ಸಾವಿರ ರೂ. ವರೆಗಿನ ಬೆಳೆ ಸಾಲ ಮನ್ನಾ ಘೋಷಿಸಿದ ವಿಜಯ್‌ – vishwanews24

50 ಸಾವಿರ ರೂ. ವರೆಗಿನ ಬೆಳೆ ಸಾಲ ಮನ್ನಾ ಘೋಷಿಸಿದ ವಿಜಯ್‌ ಚೆನ್ನೈ: ರೈತರಿಗೆ ಭಾರಿ ನೆರವು ಘೋಷಿಸಿರುವ ತಮಿಳುನಾಡು…

7 minutes ago

ನಟ ಧರ್ಮೇಂದ್ರಗೆ ಮರಣೋತ್ತರ ಪದ್ಮವಿಭೂಷಣ : ಪ್ರಶಸ್ತಿ ಸ್ವೀಕರಿಸಿದ ಪತ್ನಿ ಹೇಮಾ ಮಾಲಿನಿ – vishwanews24

ನಟ ಧರ್ಮೇಂದ್ರಗೆ ಮರಣೋತ್ತರ ಪದ್ಮವಿಭೂಷಣ: ಪ್ರಶಸ್ತಿ ಸ್ವೀಕರಿಸಿದ ಪತ್ನಿ ಹೇಮಾ ಮಾಲಿನಿ ನವದೆಹಲಿ: ದಿವಂಗತ ಬಾಲಿವುಡ್ ನಟ ಧರ್ಮೇಂದ್ರ  ಅವರಿಗೆ…

17 minutes ago

ಪುತ್ತೂರು: ವಿದ್ಯುತ್ ಶಾಕ್‌ ಹೊಡೆದು ಯುವಕ ಮೃತ್ಯು – vishwanews24

ಪುತ್ತೂರು: ವಿದ್ಯುತ್ ಶಾಕ್‌ ಹೊಡೆದು ಯುವಕ ಮೃತ್ಯು ಪುತ್ತೂರು : ನಿಡಳ್ಳಿ ಗ್ರಾಮದ ಬೋಳುಂಬುಡೆಯಲ್ಲಿ ವಿದ್ಯುತ್ ಶಾಕ್ ಹೊಡೆದು ನೆಲಕ್ಕೆ…

26 minutes ago

2028ಕ್ಕೆ ರಾಜ್ಯದಲ್ಲಿ ಇದೇ ಡಿ.ಕೆ. ಶಿವಕುಮಾರ್ ಹಾಗೂ ಕಾಂಗ್ರೆಸ್ ಪಕ್ಷ  ಅಧಿಕಾರಕ್ಕೆ : ಡಿ.ಕೆ.ಶಿವಕುಮಾರ್  – vishwanews24

2028ಕ್ಕೆ ರಾಜ್ಯದಲ್ಲಿ ಇದೇ ಡಿ.ಕೆ. ಶಿವಕುಮಾರ್ ಹಾಗೂ ಕಾಂಗ್ರೆಸ್ ಪಕ್ಷ  ಅಧಿಕಾರಕ್ಕೆ : ಡಿ.ಕೆ.ಶಿವಕುಮಾರ್ ವಿಶ್ವಾಸ ಬೆಂಗಳೂರು: '2028ಕ್ಕೆ ರಾಜ್ಯದಲ್ಲಿ…

19 hours ago

ಬೆಳ್ತಂಗಡಿ : ಡೋರ್ ಲಾಕ್ ಆಗಿ ಕಾರಿನೊಳಗೆ ಸಿಲುಕಿಕೊಂಡ ಮಗು; ಗ್ಲಾಸ್ ಒಡೆದು ರಕ್ಷಣೆ – vishwanews24

ಬೆಳ್ತಂಗಡಿ : ಡೋರ್ ಲಾಕ್ ಆಗಿ ಕಾರಿನೊಳಗೆ ಸಿಲುಕಿಕೊಂಡ ಮಗು; ಗ್ಲಾಸ್ ಒಡೆದು ರಕ್ಷಣೆ ಬೆಳ್ತಂಗಡಿ: ಕುವೆಟ್ಟು ಗ್ರಾಮದ ಮದ್ದಡ್ಕದಲ್ಲಿ…

19 hours ago

ತೈಲ ದರ ಹೆಚ್ಚಳದಿಂದ ಲಾಭ ಇರೋದು ರಾಜ್ಯಕ್ಕೆ ,ಕೇಂದ್ರಕ್ಕಲ್ಲ: ಆರ್. ಅಶೋಕ್ ಸಮರ್ಥನೆ – vishwanews24

ತೈಲ ದರ ಹೆಚ್ಚಳದಿಂದ ಲಾಭ ಇರೋದು ರಾಜ್ಯಕ್ಕೆ ,ಕೇಂದ್ರಕ್ಕಲ್ಲ: ಆರ್. ಅಶೋಕ್ ಸಮರ್ಥನೆ ಬೆಂಗಳೂರು: ತೈಲ ದರ ಹೆಚ್ಚಳದಿಂದ ಕೇಂದ್ರಕ್ಕೆ…

20 hours ago