ಕಟೀಲು ಶ್ರೀ ದುರ್ಗಾಪರಮೇಶ್ವರೀ ಸನ್ನಿಧಿಯಲ್ಲಿ ಆರಂಭಗೊಂಡ ಬ್ರಹ್ಮಕಲಶೋತ್ಸವ, ಸಹಸ್ರಾರು ಭಕ್ತರಿಂದ ದೇವಿಯ ದರ್ಶನ -Vishwanews24

ಮಂಗಳೂರು: ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವದ ಕಾರ್ಯಕ್ರಮಗಳು ಆರಂಭಗೊಂಡಿದ್ದು, ಫೆ. 3ರ ವರೆಗೆ ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳು ನೆರವೇರಲಿವೆ. ಸುಮಾರು 20 ಲಕ್ಷಕ್ಕೂ ಅಧಿಕ ಭಕ್ತರು ಕಾರ್ಯಕ್ರಮದಲ್ಲಿ ಭಾಗವಹಿಸುವ ನಿರೀಕ್ಷೆ ಇದೆ ಎಂದು ಸಂಸದ, ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ನಳಿನ್‌ ಕುಮಾರ್‌ ಕಟೀಲು ಹೇಳಿದರು.

ಕಟೀಲು ದೇವಸ್ಥಾನದಲ್ಲಿ ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸಾಮಾನ್ಯವಾಗಿ 12 ವರ್ಷಕ್ಕೊಮ್ಮೆ ಅಷ್ಟಬಂಧ ಬ್ರಹ್ಮಕಲಶೋತ್ಸವ ನಡೆಯಬೇಕು. ಕಟೀಲಿನಲ್ಲಿ 2007ರಲ್ಲಿ ಅಷ್ಟಬಂಧ ಬ್ರಹ್ಮಕಲಶೋತ್ಸವ ನಡೆದಿತ್ತು. ಆ ಪ್ರಯುಕ್ತ ಕಳೆದ ವರ್ಷ ಅಷ್ಟಬಂಧ ಬ್ರಹ್ಮಕಲಶೋತ್ಸವ ನಡೆಯಬೇಕಿತ್ತು. ಆದರೆ ಕೆಲವೊಂದು ಕಾರಣದಿಂದ ಕಳೆದ ವರ್ಷ ಅಷ್ಟಬಂಧ ಮಾತ್ರ ಮಾಡಲಾಗಿದ್ದು, ಒಂದು ವರ್ಷ ತಡವಾಗಿ ಈಗ ಬ್ರಹ್ಮಕಲಶ ನಡೆಸಲಾಗುತ್ತಿದೆ ಎಂದರು. ದೇವಾಲಯದ ಒಳಗಿನ ಕಾರ್ಯ ಈಗಾಗಲೇ ಪೂರ್ಣಗೊಳಿಸಲಾಗಿದ್ದು, ಎರಡು ಗ್ರಾಮಗಳಿಗೆ ಪೂರಕವಾದ ಕುಡಿಯುವ ನೀರಿನ ಯೋಜನೆ, ರಸ್ತೆ ಕಾಮಗಾರಿಗಳು ನಡೆದಿದೆ ಎಂದರು.

 

ದೇವಸ್ಥಾನದಲ್ಲಿ ಸ್ವರ್ಣ ಲೇಪಿತ ಧ್ವಜಸ್ತಂಭ ನಿರ್ಮಾಣವಾಗಿದ್ದು, ಜ. 24ರಂದು ಪ್ರತಿಷ್ಠೆ ನಡೆಯಲಿದೆ. ಸದ್ಯ ಸುತ್ತು ಪೌಳಿಯ ಸುಂದರೀಕರಣ ನಡೆಯುತ್ತಿದೆ. ದೇವಸ್ಥಾನದ ಸುತ್ತ ವಿಸ್ತರಣೆ ಮಾಡಲಾಗ್ತಿದೆ ಎಂದರು. ದೇವಸ್ಥಾನದ ಎದುರಿನ ರಸ್ತೆಯ ಅಗಲೀಕರಣಕ್ಕೆ ಈ ಹಿಂದೆ ಕಾನೂನಾತ್ಮಕ ತೊಡಕು ಎದುರಾಗಿತ್ತು. ಸದ್ಯ ಅಂಗಡಿಗಳನ್ನು ತೆರವು ಮಾಡಲಾಗಿದ್ದು, ದೇವಸ್ಥಾನದ ಮುಂಭಾಗ ಸುಂದರ ರಥಬೀದಿ ಆಗಲಿದೆ. ಕಟೀಲು ಕ್ಷೇತ್ರದ ಅಭಿವೃದ್ಧಿಗೆಂದು ರಾಜ್ಯದಲ್ಲಿರುವ ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರಕಾರವು 25 ಕೋಟಿ ರೂ. ಈಗಾಗಲೇ ಬಿಡುಗಡೆ ಮಾಡಿದ್ದು, ಅಭಿವೃದ್ಧಿ ಕೆಲಸ ನಡೆಯುತ್ತಿದೆ ಎಂದರು.

1 ಗಂಟೆಯಲ್ಲಿ 25,000 ಮಂದಿಗೆ ಊಟ!
1 ಗಂಟೆಯಲ್ಲಿ 25 ಸಾವಿರ ಮಂದಿಗೆ ಅಡುಗೆ ಮಾಡಬಹುದಾದ ಹೈಜೆನಿಕ್‌ ಅಡುಗೆ ಶಾಲೆ ನಿರ್ಮಾಣವಾಗಿದೆ. ಸಂಜೀವಿನಿ ಟ್ರಸ್ಟ್‌ ನೇತೃತ್ವದಲ್ಲಿ 1 ಕೋ. ರೂ. ನೆರವಿನಲ್ಲಿ ಶೌಚಾಲಯ ನಿರ್ಮಿಸಲಾಗಿದೆ. 24 ಗಂಟೆ ತಂಪಾದ ನೀರಿನ ವ್ಯವಸ್ಥೆ ಇರಲಿದ್ದು, 19 ಕಡೆ ಪಾರ್ಕಿಂಗ್‌ ವ್ಯವಸ್ಥೆ ಇರಲಿದೆ ಎಂದು ಹೇಳಿದರು. ಮಾಣಿಲದ ಶ್ರೀ ಮೋಹನದಾಸ ಸ್ವಾಮೀಜಿ, ಕಟೀಲಿನ ಅನುವಂಶಿಕ ಮೊಕ್ತೇಸರರಾದ ಹರಿನಾರಾಯಣ ದಾಸ ಆಸ್ರಣ್ಣ ಮತ್ತು ಅನಂತಪದ್ಮನಾಭ ಆಸ್ರಣ್ಣ, ಆಡಳಿತ ಮಂಡಳಿ ಅದ್ಯಕ್ಷ, ಅನುವಂಶಿಕ ಮೊಕ್ತೇಸರ ಸನತ್‌ಕುಮಾರ್‌ ಶೆಟ್ಟಿ ಕೊಡೆತ್ತೂರುಗುತ್ತು ಪತ್ರಿಕಾಗೋಷ್ಠಿಯಲ್ಲಿದ್ದರು.

ಪ್ರಮುಖಾಂಶಗಳು
* ದೇವಸ್ಥಾನದ ಸುತ್ತ 3.5 ಕಿ.ಮೀ. ಬೈಪಾಸ್‌ ರಸ್ತೆ ನಿರ್ಮಾಣ
* ಬ್ರಹ್ಮಕಲಶೋತ್ಸವಕ್ಕೆ 10,000 ಸ್ವಯಂಸೇವಕರು
*ಸಾಂಸ್ಕೃತಿಕ ಕಾರ್ಯಕ್ರಮಕ್ಕೆ 700 ರಾ.-ಅಂ. ರಾಷ್ಟ್ರೀಯ ಕಲಾವಿದರು

ಯಾವುದೇ ಕಠಿಣ ಸಮಸ್ಯೆ ಗಳಿದ್ದರು ಉತ್ತಮ ಸಲಹೆ ಹಾಗೂ ಶಾಶ್ವತ ಪರಿಹಾರ ತಿಳಿಸುತ್ತಾರೆ.

ಇಂದೇ ಸಂಪರ್ಕಿಸಿ ಪಂಡಿತ್ ವೈದಿಕ ಶ್ರೀ ಗಣಪತಿ ಭಟ್

8088827292

Vishwa News 24

Recent Posts

ಕಿರುತೆರೆ ನಟ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ -vishwanews24

ಕಿರುತೆರೆ ನಟ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ ಹಿಟ್ಲರ್ ಕಲ್ಯಾಣ’ ಧಾರವಾಹಿ ಖ್ಯಾತಿಯ ನಟ ದಿಲೀಪ್ ರಾಜ್ ಇಂದು ಬೆಳಗಿನ…

19 hours ago

ಉಡುಪಿ : ಮಲಬಾರ್ ಗೋಲ್ಡ್‌ನಿಂದ 518 ವಿದ್ಯಾರ್ಥಿನಿಯರಿಗೆ 42 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ  -vishwanews24

ಉಡುಪಿ : ಮಲಬಾರ್ ಗೋಲ್ಡ್‌ನಿಂದ 518 ವಿದ್ಯಾರ್ಥಿನಿಯರಿಗೆ 42 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ  ಉಡುಪಿ : ಮಲಬಾರ್…

1 day ago

ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ – vishwanews24

ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ  ಬಿಜೆಪಿ ನಾಯಕ, ನೂತನ ಮುಖ್ಯಮಂತ್ರಿ…

2 days ago

ಭಸ್ಮಾಸುರ ಆಗಿರುವ ನರೇಂದ್ರ ಮೋದಿ ಅವರು ಪ್ರಜಾಪ್ರಭುತ್ವ ಸಂವಿಧಾನದ ಮೇಲೆ ಕೈ ಇಡದಿದ್ದರೆ ಸಾಕು : ಬಿ.ಕೆ ಹರಿಪ್ರಸಾದ್ ವಾಗ್ದಾಳಿ – vishwanews24

ಪ್ರಧಾನಿ  ಮೋದಿಯವರು ತಮ್ಮ ಕುರ್ಚಿ ಗಟ್ಟಿಯಾಗಿದೆಯೇ ನೋಡಿಕೊಳ್ಳಲಿ  .. ಪಂಚಾಯತಿ ಮೇಂಬರ್ ರೀತಿ ರಾಜಕಾರಣ ಮಾಡೋದು ಬಿಡಬೇಕು.. ಇಂದಿರಾ ಗಾಂಧಿ…

2 days ago

ಮಂಗಳೂರು : ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ – vishwanews24

ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ ಮಂಗಳೂರು…

2 days ago

ಮೂಳೂರು ಪರಿಸರದಲ್ಲಿ ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಿಸದಂತೆ ಅಧಿಕಾರಿಗಳಿಗೆ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಮನವಿ – vishwanews24

ಮೂಳೂರು: ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಾಣ ವಿರೋಧಿಸಿ ಪ್ರತಿಭಟನೆ.. STP ತಕ್ಷಣವೇ ಬೇರೆ ಕಡೆಗೆ ಸ್ಥಳಾಂತರಿಸುವಂತೆ ಸಂಬಂದಿಸಿದ ಅಧಿಕಾರಿಗಳಿಗೆ…

2 days ago