ಮಂಗಳೂರು : ಮುಂಗಾರು ಮಳೆ ಆರಂಭಲಾಗದ ಹಿನ್ನಲೆ ದಕ್ಷಿಣಕನ್ನಡ ಇದೀಗ ಭೀಕರ ಜಲಕ್ಷಾಮ ಎದುರಿಸುವ ಹಂತಕ್ಕೆ ತಲುಪಿದ್ದು, ಜಿಲ್ಲೆಯ ಬಹುತೇಕ ನದಿಗಳು ಬರಡಾಗಿದ್ದು, ಮಳೆ ಬರೆದಿದ್ದರೆ ಪರಿಸ್ಥಿತಿ ವಿಕೋಪಕ್ಕೆ ಹೋಗುವ ಸಾಧ್ಯತೆ ಇದೆ.
ಈಗಾಗಲೇ ಮಳೆ ಇಲ್ಲದ ಕಾರಣ ಕಟೀಲು ದೇವಸ್ಥಾನದ ಬಳಿ ಹರಿಯುವ ನಂದಿನಿ ನದಿ ಸಂಪೂರ್ಣ ಬತ್ತಿದ್ದು, ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಜಲಕ್ಷಾಮ ಉಂಟಾಗಿದೆ. ದೇವಸ್ಥಾನದ ದೈನಂದಿನ ಚಟುವಟಿಕೆಗೆ ಅಡ್ಡಿಯಾಗಿದ್ದು, ಕ್ಷೇತ್ರದ ಶಿಕ್ಷಣ ಸಂಸ್ಥೆಗಳ ಪ್ರಾಥಮಿಕ–ಪ್ರೌಢ ವಿಭಾಗಗಳಲ್ಲಿ ಬೆಳಿಗ್ಗೆ ಮಾತ್ರ ತರಗತಿ ನಡೆಸಿ ಮಧ್ಯಾಹ್ನದ ನಂತರ ರಜೆ ನೀಡಲಾಗುತ್ತಿದೆ.
ಭಕ್ತರು ದೇವಸ್ಥಾನದ ಒಳಗೆ ಪ್ರವೇಶಿಸುವಾಗ ಕೈ-ಕಾಲು ತೊಳೆಯುವ ನೀರನ್ನು ಬಂದ್ ಮಾಡಲಾಗಿದೆ. ಬೆಳಿಗ್ಗೆ ಗಂಜಿ, ಮಧ್ಯಾಹ್ನ ಹಾಗೂ ರಾತ್ರಿ ಸಮಯದಲ್ಲಿ ಅನ್ನಪ್ರಸಾದಕ್ಕೆ ಸ್ಟೀಲ್ ತಟ್ಟೆಗಳ ಬದಲಿಗೆ ಹಾಳೆತಟ್ಟೆ ಬಳಸಲಾಗುತ್ತಿದೆ. ದೇವಸ್ಥಾನದ ಆವರಣದಲ್ಲಿನ ಮೂರು ಕೊಳವೆಬಾವಿಗಳು ಹಾಗೂ ಮೂರು ಬಾವಿಗಳು ಬತ್ತಿವೆ. ದೇವಸ್ಥಾನ, ಅನ್ನಪ್ರಸಾದ ತಯಾರಿ ಹಾಗೂ ಗೋಶಾಲೆಗೆ ನಿತ್ಯ 7 ಲಕ್ಷ ಲೀಟರ್ ನೀರಿನ ಅವಶ್ಯಕತೆ ಇದೆ. ಈಗ 4 ಲಕ್ಷ ಲೀಟರ್ ನೀರು ಸುತ್ತಮುತ್ತಲಿನ ದಾನಿಗಳ ಸಹಾಯದಿಂದ ಸಿಗುತ್ತಿದ್ದು, ಅದರಲ್ಲಿಯೇ ಎಲ್ಲವನ್ನು ಹೊಂದಿಸಿಕೊಳ್ಳಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ನೀರು ಸಂಗ್ರಹಿಸಲೆಂದೇ ನಿತ್ಯ ನಾಲ್ವರು ಸಿಬ್ಬಂದಿ ಕೆಲಸ ಮಾಡುತ್ತಿದ್ದಾರೆ.
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…
ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್ ಅಹ್ಮದ್ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…
ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…