Featured

ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಜಲಕ್ಷಾಮ ; ಸಂಪೂರ್ಣ ಬತ್ತಿ ಹೋದ ನಂದಿನಿ ನದಿ – Vishwanews24

ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಜಲಕ್ಷಾಮ ; ಸಂಪೂರ್ಣ ಬತ್ತಿ ಹೋದ ನಂದಿನಿ ನದಿ

ಮಂಗಳೂರು : ಮುಂಗಾರು ಮಳೆ ಆರಂಭಲಾಗದ ಹಿನ್ನಲೆ ದಕ್ಷಿಣಕನ್ನಡ ಇದೀಗ ಭೀಕರ ಜಲಕ್ಷಾಮ ಎದುರಿಸುವ ಹಂತಕ್ಕೆ ತಲುಪಿದ್ದು, ಜಿಲ್ಲೆಯ ಬಹುತೇಕ ನದಿಗಳು ಬರಡಾಗಿದ್ದು, ಮಳೆ ಬರೆದಿದ್ದರೆ ಪರಿಸ್ಥಿತಿ ವಿಕೋಪಕ್ಕೆ ಹೋಗುವ ಸಾಧ್ಯತೆ ಇದೆ.

ಈಗಾಗಲೇ ಮಳೆ ಇಲ್ಲದ ಕಾರಣ ಕಟೀಲು ದೇವಸ್ಥಾನದ ಬಳಿ ಹರಿಯುವ ನಂದಿನಿ ನದಿ ಸಂಪೂರ್ಣ ಬತ್ತಿದ್ದು, ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಜಲಕ್ಷಾಮ ಉಂಟಾಗಿದೆ. ದೇವಸ್ಥಾನದ ದೈನಂದಿನ ಚಟುವಟಿಕೆಗೆ ಅಡ್ಡಿಯಾಗಿದ್ದು, ಕ್ಷೇತ್ರದ ಶಿಕ್ಷಣ ಸಂಸ್ಥೆಗಳ ಪ್ರಾಥಮಿಕ–ಪ್ರೌಢ ವಿಭಾಗಗಳಲ್ಲಿ ಬೆಳಿಗ್ಗೆ ಮಾತ್ರ ತರಗತಿ ನಡೆಸಿ ಮಧ್ಯಾಹ್ನದ ನಂತರ ರಜೆ ನೀಡಲಾಗುತ್ತಿದೆ.

ಭಕ್ತರು ದೇವಸ್ಥಾನದ ಒಳಗೆ ಪ್ರವೇಶಿಸುವಾಗ ಕೈ-ಕಾಲು ತೊಳೆಯುವ ನೀರನ್ನು ಬಂದ್ ಮಾಡಲಾಗಿದೆ. ಬೆಳಿಗ್ಗೆ ಗಂಜಿ, ಮಧ್ಯಾಹ್ನ ಹಾಗೂ ರಾತ್ರಿ ಸಮಯದಲ್ಲಿ ಅನ್ನಪ್ರಸಾದಕ್ಕೆ ಸ್ಟೀಲ್ ತಟ್ಟೆಗಳ ಬದಲಿಗೆ ಹಾಳೆತಟ್ಟೆ ಬಳಸಲಾಗುತ್ತಿದೆ. ದೇವಸ್ಥಾನದ ಆವರಣದಲ್ಲಿನ ಮೂರು ಕೊಳವೆಬಾವಿಗಳು ಹಾಗೂ ಮೂರು ಬಾವಿಗಳು ಬತ್ತಿವೆ. ದೇವಸ್ಥಾನ, ಅನ್ನಪ್ರಸಾದ ತಯಾರಿ ಹಾಗೂ ಗೋಶಾಲೆಗೆ ನಿತ್ಯ 7 ಲಕ್ಷ ಲೀಟರ್‌ ನೀರಿನ ಅವಶ್ಯಕತೆ ಇದೆ. ಈಗ 4 ಲಕ್ಷ ಲೀಟರ್‌ ನೀರು ಸುತ್ತಮುತ್ತಲಿನ ದಾನಿಗಳ ಸಹಾಯದಿಂದ ಸಿಗುತ್ತಿದ್ದು, ಅದರಲ್ಲಿಯೇ ಎಲ್ಲವನ್ನು ಹೊಂದಿಸಿಕೊಳ್ಳಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ನೀರು ಸಂಗ್ರಹಿಸಲೆಂದೇ ನಿತ್ಯ ನಾಲ್ವರು ಸಿಬ್ಬಂದಿ ಕೆಲಸ ಮಾಡುತ್ತಿದ್ದಾರೆ.

Vishwa News 24

Recent Posts

ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ – vishwanews24

ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ ಉಡುಪಿ: ತಾಯಿಯ ಹೆಸರಿನಲ್ಲಿದ್ದ ಆಸ್ತಿಯನ್ನು…

17 hours ago

ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು – vishwanews24

ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು ವಿಟ್ಲ: ಮರ ಹಾಗೂ…

18 hours ago

ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ – vishwanews24

ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ ಮಂಗಳೂರು: ಕೇರಳ ಮೂಲದ ಉದ್ಯಮಿಯೊಬ್ಬರ ಕಾರನ್ನು ಅಡ್ಡಗಟ್ಟಿ ಕಾರು…

18 hours ago

ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ – vishwanews24

ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ ಜಿ…

19 hours ago

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ‘ನುವಾ’ ವಜ್ರಾಭರಣ ಅನಾವರಣ – vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ‘ನುವಾ’ ವಜ್ರಾಭರಣ ಅನಾವರಣ ಉಡುಪಿ: ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ಮೈನ್ ಬ್ರಾಂಡಿನ…

19 hours ago

ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ವಿರುದ್ಧ ಅವಹೇಳನಕಾರಿ ಹೇಳಿಕೆ: ವಿಠಲ ಗೌಡ ವಿರುದ್ಧ ಅರೆಸ್ಟ್​​​​​​ ವಾರಂಟ್ – vishwanews24

ಧರ್ಮಸ್ಥಳ ಪ್ರಕರಣ : ವಿಠಲ್‌ ಗೌಡ ವಿರುದ್ಧ ಅರೆಸ್ಟ್‌ ವಾರಂಟ್:‌ ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…

3 days ago