ಕಟೀಲು: ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನಕ್ಕೆ ಚಿತ್ರ ನಟ ಶ್ರೀಮುರಳಿ ಭೇಟಿ ನೀಡಿದರು. ಕ್ಷೇತ್ರದ ವತಿಯಿಂದ ಮುರಳಿ ಅವರನ್ನು ವೆಂಕಟರಮಣ ಆಸ್ರಣ್ಣ ದೇವರ ಶೇಷ ವಸ್ತ್ರ ಪ್ರಸಾದ ನೀಡಿ ಗೌರವಿಸಿದರು.
ನಂತರ ಮಾಧ್ಯಮದ ಜೊತೆ ಶ್ರೀಮುರಳಿ ಮಾತನಾಡಿ, ನವರಾತ್ರಿ ಶುಭ ಸಂದರ್ಭದಲ್ಲಿ ಕರಾವಳಿಯ ದೇವಸ್ಥಾನಗಳಿಗೆ ಭೇಟಿ ನೀಡುತ್ತಿದ್ದೇನೆ, ನಾನು ಬಾಲ್ಯದಲ್ಲಿ ಕಟೀಲಿಗೆ ಭೇಟಿ ನೀಡಿದ್ದೇನೆ ಇದೀಗ ಮತ್ತೆ ಅವಕಾಶ ಸಿಕ್ಕಿದೆ.
ಭಗೀರ ಚಿತ್ರ ಬಿಡುಗಡೆಯಾಗುತ್ತದೆ, ಕರಾವಳಿಯ ನಟರು ಕನ್ನಡ ಚಿತ್ರರಂಗದಲ್ಲಿ ಮಿನುಗುತ್ತಿದ್ದಾರೆ. ಈ ಬಗ್ಗೆ ಅತೀವ ಸಂತಸವಿದೆ, ತುಳು ಚಿತ್ರರಂಗ ಬೆಳೆಯುತ್ತಿದೆ ಇನ್ನಷ್ಟು ಎತ್ತರಕ್ಕೆ ಬೆಳೆಯಬೇಕು. ಕನ್ನಡ ಚಿತ್ರರಂಗದಂತೆ ತುಳು ಚಿತ್ರರಂಗವೂ ಮುಂದುವರಿಯಬೇಕು ಎಂದರು.
ಈ ಸಂದರ್ಭ ಅಭಿಲಾಷ್ ಶೆಟ್ಟಿ ಕಟೀಲು, ವಿಕೇಶ್ ಕೋಟ್ಯಾನ್ ಜಲ್ಲಿಗುಡ್ಡೆ, ಕಾರ್ತಿಕ್ ರಾವ್, ಮತ್ತಿತರರು ಇದ್ದರು.
ತುಳುನಾಡಿನ ಸಾಂಪ್ರದಾಯಿಕ ಆಚರಣೆಗಳಲ್ಲಿ ಒಂದಾದ ಪ್ರೇತ ಮದುವೆ : ಸತ್ತು 25 ವರ್ಷ ಆದ್ಮೇಲೆ ಒಂದಾದ ಜೋಡಿ ತುಳುನಾಡಿನ ಸಾಂಪ್ರದಾಯಿಕ…
ಮಂಗಳೂರಿಗೆ ಆಗಮಿಸಿದ ಬಾಲಿವುಡ್ ನಟ ಶಾರುಖ್ ಖಾನ್ ಮಂಗಳೂರು: ನಗರದಲ್ಲಿ ಆಯೋಜಿಸಲಾಗಿರುವ ಕಾರ್ಯಕ್ರಮದಲ್ಲಿ ಭಾಗವಹಿಸಲು ಬಾಲಿವುಡ್ ನಟ ಶಾರುಖ್ ಖಾನ್…
ರಾಜ್ಯದ 13 ಸಚಿವರಿಗೆ ಜಿಲ್ಲಾ ಉಸ್ತುವಾರಿ ಹಂಚಿಕೆ.. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಕೊಡಗು ಜಿಲ್ಲೆಗಳ ಉಸ್ತುವಾರಿಯಾಗಿ…
ಪಠ್ಯಪುಸ್ತಕ ವಿವಾದದ ಬೆನ್ನಲ್ಲೇ NCERT ಸ್ಪಷ್ಟನೆ ನವದೆಹಲಿ: 6ನೇ ತರಗತಿಯ ಕನ್ನಡ ಪಠ್ಯಪುಸ್ತಕ ‘ಕೃಷ್ಣ’ ಕುರಿತು ಎದ್ದಿರುವ ವಿವಾದಕ್ಕೆ NCERT(ರಾಷ್ಟ್ರೀಯ…
ಮುಲ್ಕಿ : ಗಾಂಜಾ ಮಾರಾಟ ಹಾಗೂ ಸಾಗಾಟ ಮಾಡುತ್ತಿದ್ದ ಆರೋಪಿಯ ಬಂಧನ ; 4 ಕೆ.ಜಿ ಗಾಂಜಾ ವಶ ಮುಲ್ಕಿ:…
ಎನ್ಸಿಇಆರ್ಟಿ ಬಿಡುಗಡೆ ಮಾಡಿದ ಕನ್ನಡ ಪಠ್ಯಪುಸ್ತಕಕ್ಕೆ ಮಧು ಬಂಗಾರಪ್ಪ ವಿರೋಧ ಬೆಂಗಳೂರು: 6ನೇ ತರಗತಿಗಾಗಿ ಎನ್ಸಿಇಆರ್ಟಿ (ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ…