ಹಾಸನ, : ಕಾರೊಂದು ನಿಯಂತ್ರಣ ಕಳೆದುಕೊಂಡು ರಸ್ತೆ ಬದಿಯ ಕಟ್ಟಡಕ್ಕೆ ಅಪ್ಪಳಿಸಿ ಬೆಂಕಿ ಹೊತ್ತಿಕೊಂಡ ಪರಿಣಾಮ ಒಂದೇ ಕುಟುಂಬದ ನಾಲ್ವರು ದಾರುಣವಾಗಿ ಸಾವನ್ನಪ್ಪಿರುವ ಹೃದಯ ವಿದ್ರಾವಕ ಘಟನೆ ಚನ್ನರಾಯಪಟ್ಟಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಇಂದು ಬೆಳಗ್ಗೆ ಸಂಭವಿಸಿದೆ.
ಅಪಘಾತದಿಂದಾಗಿ ಚಿಕ್ಕಬಾಣವಾರ ಮೂಲದವರು ಎನ್ನಲಾದ ವಿವೇಕ್ ನಾಯಕ್ (45), ಪತ್ನಿ ರೇಷ್ಮಾ ನಾಯಕ್ (38), ಪುತ್ರಿ ವಿನಂತಿ (10) ಹಾಗೂ ಎಂಟು ವರ್ಷದ ಪುತ್ರ ಸಾವನ್ನಪ್ಪಿರುವ ದುರ್ದೈವಿಗಳು.
ಬೆಂಗಳೂರಿನ ಸ್ಪೈಕರ್ ಕಂಪೆನಿಯ ಉದ್ಯೋಗಿಯಾಗಿದ್ದ ವಿವೇಕ್ನಾಯಕ್ ಇಂದು ಬೆಳಗ್ಗೆ 8.30ರಲ್ಲಿ ಕುಟುಂಬದವರನ್ನು ಕಾರಿನಲ್ಲಿ ಕರೆದುಕೊಂಡು ಬೆಂಗಳೂರಿನಿಂದ ಹಾಸನ ಕಡೆಗೆ ಹೋಗುತ್ತಿದ್ದರು.
ವಿವೇಕ್ ನಾಯಕ್ ತಮ್ಮ ಕುಟುಂಬದೊಂದಿಗೆ ಕಾರ್ ನಲ್ಲಿ ಬೆಂಗಳೂರಿನತ್ತ ಪ್ರಯಾಣಿಸುತ್ತಿದ್ದರು. ಈ ಸಂದರ್ಭ ಕಾರು ನಿಯಂತ್ರಣ ತಪ್ಪಿ ರಸ್ತೆಬದಿಯಲ್ಲಿದ್ದ ಕಟ್ಟಡಕ್ಕೆ ಢಿಕ್ಕಿ ಹೊಡೆದಿದೆ. ಪರಿಣಾಮ ಕಾರಿನ ಬೆಂಕಿ ಹೊತ್ತಿಕೊಂಡು ನಾಲ್ವರು ಸಜೀವ ದಹನವಾಗಿದ್ದಾರೆ ಎನ್ನಲಾಗಿದೆ. ಚನ್ನರಾಯಪಟ್ಟಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ನೋಡನೋಡುತ್ತಿದ್ದಂತೆ ಕಾರು ಅಪಘಾತಕ್ಕೀಡಾದಾಗ ಸ್ಥಳೀಯರು ಕಾರಿನಲ್ಲಿದ್ದವರನ್ನು ರಕ್ಷಿಸಲು ಓಡಿ ಬಂದರಾದರೂ ಪ್ರಯೋಜನವಾಗಿಲ್ಲ.
ಪರಿಣಾಮವಾಗಿ ಕಾರಿನ ಮುಂಭಾಗ ಸಂಪೂರ್ಣ ಜಖಂಗೊಂಡು ಬೆಂಕಿ ಹೊತ್ತಿಕೊಂಡಿದ್ದರಿಂದ ಕಾರಿನಲ್ಲಿದ್ದ ದಂಪತಿ ಹಾಗೂ ಪುತ್ರಿ ಸಜೀವ ದಹನವಾಗಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಪುತ್ರನ ಸ್ಥಿತಿ ಚಿಂತಾಜನಕವಾಗಿತ್ತು. ತಕ್ಷಣ ಈತನನ್ನು ಆಸ್ಪತ್ರೆಗೆ ಕರೆದೊಯ್ಯುತ್ತಿದ್ದಾಗ ಮಾರ್ಗ ಮಧ್ಯೆ ಕೊನೆಯುಸಿರೆಳೆದಿದ್ದಾನೆ. ಸುದ್ದಿ ತಿಳಿದ ಚನ್ನರಾಯಪಟ್ಟಣ ಠಾಣೆ ಎಸ್ಪಿ ಪ್ರಕಾಶ್ಗೌಡ ಹಾಗೂ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ.
ಪಡುಬಿದ್ರಿ : ವ್ಯಕ್ತಿ ನಾಪತ್ತೆ ; ಪತ್ತೆಗೆ ಮನವಿ ಪಡುಬಿದ್ರಿ : ಕಂಚಿನಡ್ಕದ ನಿವಾಸಿ ರವೀಂದ್ರ (35) ಪಡುಬಿದ್ರಿ ಪೇಟೆಗೆ…
ಪಡುಬಿದ್ರಿ ಪೊಲೀಸರ ವಿಶೇಷ ಕಾರ್ಯಾಚರಣೆ :ರಸ್ತೆ ಅಪಘಾತ ಪ್ರಕರಣದಲ್ಲಿ 23 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಲಾರಿ ಚಾಲಕ ಅರೆಸ್ಟ್ ಉಡುಪಿ: 2002ರಲ್ಲಿ…
ಬೆಂಗಳೂರು : ಸ್ವಾಮೀಜಿ ವೇಷದಲ್ಲಿ ಬಂದು ಕೈಚಳಕ; ಮನೆಯಲ್ಲಿ ದೋಷ, ಸಾವಿನ ಕಂಟಕ ಎಂದು ಹೆದರಿಸಿ ಚಿನ್ನಾಭರಣ ದೋಚಿ ಪರಾರಿ…
ಬೆಳ್ತಂಗಡಿ: ಅಪ್ರಾಪ್ತ ಬಾಲಕಿ ಗರ್ಭಿಣಿ ಪ್ರಕರಣ ; ಆರೋಪಿ ಅರೆಸ್ಟ್ ಬೆಳ್ತಂಗಡಿ : ಬಾಲಕಿಯನ್ನು ಪುಸಲಾಯಿಸಿ ಅತ್ಯಾಚಾರ ಮಾಡಿ ಬಾಲಕಿ…
ಮಂತ್ರಾಲಯ ಬಳಿ ಅಪಘಾತ: ಮಂಗಳೂರಿನ ಹಾಪ್ಕಾಮ್ಸ್ ನ ಪ್ರಧಾನ ವ್ಯವಸ್ಥಾಪಕ ರವಿ ಶೆಟ್ಟಿ ನಿಧನ ಕರ್ನೂಲು: ಕರ್ನೂಲು ಜಿಲ್ಲೆಯ ಮಂತ್ರಾಲಯದ…
ಉಡುಪಿ ಬಡಗುಬೆಟ್ಟು ಕಂಬಳಕ್ಕೆ ತಡೆ: ಆದೇಶ ತಕ್ಷಣ ಹಿಂಪಡೆಯಲು ಶಾಸಕ ಗುರ್ಮೆ ಆಗ್ರಹ ಉಡುಪಿ: ಉಡುಪಿ ಬಡಗುಬೆಟ್ಟು ಕೋಟಿ–ಚೆನ್ನಯ ಕಂಬಳಕ್ಕೆ…