ಬೆಂಗಳೂರು: ವಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ದ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದು, “ಕಟ್ಟುವುದು ಮನುಷ್ಯತ್ವ, ಕೆಡವೋದು ರಾಕ್ಷಸತ್ವ. ನಿಮಗೆ ಕೆಡವಿ ಗೊತ್ತೇ ವಿನಾ ಕಟ್ಟಿ ಗೊತ್ತಿಲ್ಲ” ಎಂದಿದ್ದಾರೆ.
ಈ ಕುರಿತು ಸರಣಿ ಟ್ವೀಟ್ ಮಾಡಿರುವ ಅವರು, “ಕಟ್ಟುವುದು ಮನುಷ್ಯತ್ವ, ಕೆಡವೋದು ರಾಕ್ಷಸತ್ವ. ನಿಮಗೆ ಕೆಡವಿ ಗೊತ್ತೇ ವಿನಾ ಕಟ್ಟಿ ಗೊತ್ತಿಲ್ಲ. ಬಿಜೆಪಿಯನ್ನು ಅಧಿಕಾರದಿಂದ ದೂರ ಇಡಬೇಕೆಂದು ಹೇಳಿ ನಮ್ಮ ಮನೆ ಬಾಗಿಲಿಗೆ ಬಂದ ಕಾಂಗ್ರೆಸ್ ನಾಯಕರು ಸರಕಾರದ ನೇತೃತ್ವ ವಹಿಸಿ ಎಂದರು. ಹಾಗಾದರೆ, ಪಕ್ಷದ ನಿರ್ಧಾರಕ್ಕೂ ನಿಮಗೂ ಸಂಬಂಧ ಇಲ್ಲವಾ ಮಿಸ್ಟರ್ ಸಿದ್ದಸೂತ್ರಧಾರ” ಎಂದು ಪ್ರಶ್ನಿಸಿದ್ದಾರೆ.
“ನಾನು ಜೆಡಿಎಸ್ʼನವರ ಮನೆ ಬಾಗಿಲಿಗೆ ಹೋಗಿಲ್ಲ ಎನ್ನುತ್ತೀರಿ, ನಿಮ್ಮನ್ನು ಕರೆದವರು ಯಾರು? ನಾವೇನು ಎಲೆ-ಅಡಿಕೆ ಕೊಟ್ಟು ಆಹ್ವಾನ ಕೊಟ್ಟೆವಾ? ಬಂದು ಬೆಂಬಲದ ಭಿಕ್ಷೆ ಬೇಡಿದವರು ಯಾರು? ದೆಹಲಿ ನಾಯಕರು ನಮ್ಮ ಮನೆ ಬಾಗಿಲಲ್ಲಿ ನಿಂತಿದ್ದಾಗಲೇ ಮೈತ್ರಿಗೆ ಕುಣಿಕೆ ಬಿಗಿಯಲು ಯತ್ನಿಸಿದವರು ಯಾರು ಮಿಸ್ಟರ್ ಟರ್ಮಿನೇಟರ್?” ಎಂದು ಕೇಳಿದ್ದಾರೆ.
ಹೈಕಮಾಂಡ್ ಮಟ್ಟದಲ್ಲಿ ಮಾತುಕತೆ ನಡೆದಿದೆ, ನನ್ನ ಹಂತದಲ್ಲಿ ಅಲ್ಲ ಅನ್ನುತ್ತೀರಿ! ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಅವರ ಮಾತಿಗೇ ನಿಮ್ಮಲ್ಲಿ ಕಿಮ್ಮತ್ತಿಲ್ಲಾ? ಹಾಗಾದರೆ, ಸಿಎಲ್ಪಿಯನ್ನೇ ಅಡ್ಡಡ್ಡ ʼಸೀಳಿʼ ಬೆಂಬಲಿಗ ಶಾಸಕರು ಬಿಜೆಪಿಗೆ ಹೋಗಲು ದುಷ್ಪ್ರೇರಣೆ ಕೊಟ್ಟವರು ಯಾರು? ಎಂದು ಪ್ರಶ್ನಿಸಿದ್ದಾರೆ.
ವರಿಷ್ಠರು ತಂದ ಸರಕಾರವನ್ನೇ ತೆಗೆದಿರಿ, ಬಿಜೆಪಿ ಸರಕಾರ ಬರಲು ಕಾರಣರಾದಿರಿ. ಈಗ ಸುಳ್ಳಿಗೆ ಸುಳ್ಳು ಪೋಣಿಸುತ್ತಿದ್ದೀರಿ. ಬಿಜೆಪಿ ಸರಕಾರ ಬರಲು ಶಾಸಕರ ಟೀಂ ರೆಡಿ ಮಾಡಿದವರು ಯಾರು? ಇಷ್ಟೆಲ್ಲಾ ʼಸಿದ್ದಕಲೆʼ ಎಲ್ಲಿಂದ ಬಂತು ಮಿಸ್ಟರ್ ಸಿದ್ದಕಲಾನಿಪುಣಪ್ಪಾ!? ಎಂದು ಕೇಳಿದ್ದಾರೆ.
ಹೈಕಮಾಂಡ್ ನಿರ್ಧಾರಕ್ಕೂ ಗುನ್ನ, ಅಹಿಂದದ ಹೆಸರಿನಲ್ಲಿ ದಲಿತ ನಾಯಕರಾದ ಖರ್ಗೆ ಅವರಿಗೂ ಖೆಡ್ಡಾ, ಡಾ,ಪರಮೇಶ್ವರ ಅವರಿಗೆ ಸೋಲಿನ ಸುಳಿ, ಈಗ ನೋಡಿದರೆ; ʼಬಂಡೆʼಯ ಕೆಳಗೂ ಡೈನಾಮೈಟ್ ಇಡುತ್ತಿರುವ ಅನೈತಿಕ, ನೀಚ, ನಿಕೃಷ್ಟ, ಹೀನ ರಾಜಕಾರಣಕ್ಕೆ ನಾಂದಿ ಹಾಡಿರುವ ʼಪರಮಪಾತಕ ಪರಾಕಾಷ್ಠೆ ಯಾರು? ಎಂದು ಪ್ರಶ್ನಿಸಿದ್ದಾರೆ.
ಜೆಡಿಎಸ್ ಬಿಜೆಪಿಯ ಬಿ ಟೀಂ ಅನ್ನುತ್ತೀರಿ. ಹಾಗಾದರೆ; ಆಡಳಿತ ಪಕ್ಷದಲ್ಲೇ ಕೂತು ವಿರೋಧಿಗಳೊಂದಿಗೆ ಕುಮ್ಮಕ್ಕಾಗಿ ಬೆನ್ನಿಗಿರಿದ ʼಬ್ರೂಟಸ್ʼ ಯಾರು? ಮೈತ್ರಿ ಸರಕಾರಕ್ಕೆ ಮೊದಲ ದಿನದಿಂದಲೇ ಮಹೂರ್ತ ಇಟ್ಟವರು ಯಾರು? ಸ್ವಯಂಘೋಷಿತ ಅಹಿಂದ ನಾಯಕರೇ ನಿಮ್ಮೊಳಗಿದೆ ಕಾರ್ಕೋಟಕ ʼವಿಷʼ. ಆ ವಿಷವೇ ನಿಮಗೆ ಮುಳುವು ಎಂದು ಟೀಕಿಸಿದ್ದಾರೆ.
ವಿಟ್ಲ: ಕಾರು ಮತ್ತು ದ್ವಿಚಕ್ರ ವಾಹನ ಭೀಕರ ಅಪಘಾತ; ಸವಾರ ಮೃತ್ಯು ವಿಟ್ಲ: ಮಿತ್ತೂರು ಸಮೀಪದ ಪರ್ಲೋಟು ಎಂಬಲ್ಲಿ ಸಂಭವಿಸಿದ…
ಉಡುಪಿ: ಸೆ. 4ರಂದು ಶ್ರೀಕೃಷ್ಣ ಜನ್ಮಾಷ್ಟಮಿ ; ಸೆ.5ರಂದು ವಿಟ್ಲಪಿಂಡಿ ಉತ್ಸವ ಉಡುಪಿ: ಉಡುಪಿ ಶ್ರೀಕೃಷ್ಣಮಠ ಪರ್ಯಾಯ ಶಿರೂರು ಮಠದ…
ರೇಣುಕಾಸ್ವಾಮಿ ಕೊಲೆ ಪ್ರಕರಣ : ಪ್ರದೋಷ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್ ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ…
ಜವಾಬ್ದಾರಿಗಳನ್ನು ಹೊಸ ಪೀಳಿಗೆಗೆ ಹಸ್ತಾಂತರಿಸುವ ಸಮಯ ಬಂದಿದೆ : ನಿತಿನ್ ಗಡ್ಕರಿ ಮುಂಬೈ: ಈ ಹಿಂದೆ ಮಾಡುತ್ತಿದ್ದಷ್ಟು ಕೆಲಸವನ್ನು ಇನ್ನು…
ಹಬ್ಬಗಳ ಹಿನ್ನೆಲೆ : ದಕ್ಷಿಣ ಕನ್ನಡ ಪೊಲೀಸರ ಕಟ್ಟುನಿಟ್ಟಿನ ಮಾರ್ಗಸೂಚಿ ಬಿಡುಗಡೆ ರಾತ್ರಿ 11:30 ಗಂಟೆಯ ನಂತರ ಮೆರವಣಿಗೆ ,…
ಸೆ. 1 ರಿಂದ 10 ರವರೆಗೆ ಬೃಹತ್ ಪಾದಯಾತ್ರೆ : ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಬೆಂಗಳೂರು : ರಾಜ್ಯ ಸರ್ಕಾರದ…