Featured

ಕಟ್ಟುವುದು ಮನುಷ್ಯತ್ವ, ಕೆಡವೋದು ರಾಕ್ಷಸತ್ವ. ನಿಮಗೆ ಕೆಡವಿ ಗೊತ್ತೇ ವಿನಾ ಕಟ್ಟಿ ಗೊತ್ತಿಲ್ಲ : ಸಿದ್ದರಾಮಯ್ಯ ವಿರುದ್ದ ಕುಮಾರಸ್ವಾಮಿ ವಾಗ್ದಾಳಿ – Vishwanews24

ಕಟ್ಟುವುದು ಮನುಷ್ಯತ್ವ, ಕೆಡವೋದು ರಾಕ್ಷಸತ್ವ. ನಿಮಗೆ ಕೆಡವಿ ಗೊತ್ತೇ ವಿನಾ ಕಟ್ಟಿ ಗೊತ್ತಿಲ್ಲ : ಸಿದ್ದರಾಮಯ್ಯ ವಿರುದ್ದ ಕುಮಾರಸ್ವಾಮಿ ವಾಗ್ದಾಳಿ – Vishwanews24

ಬೆಂಗಳೂರು: ವಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ದ ಮಾಜಿ ಸಿಎಂ ಹೆಚ್‌ ಡಿ ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದು, “ಕಟ್ಟುವುದು ಮನುಷ್ಯತ್ವ, ಕೆಡವೋದು ರಾಕ್ಷಸತ್ವ. ನಿಮಗೆ ಕೆಡವಿ ಗೊತ್ತೇ ವಿನಾ ಕಟ್ಟಿ ಗೊತ್ತಿಲ್ಲ” ಎಂದಿದ್ದಾರೆ.

ಈ ಕುರಿತು ಸರಣಿ ಟ್ವೀಟ್‌ ಮಾಡಿರುವ ಅವರು, “ಕಟ್ಟುವುದು ಮನುಷ್ಯತ್ವ, ಕೆಡವೋದು ರಾಕ್ಷಸತ್ವ. ನಿಮಗೆ ಕೆಡವಿ ಗೊತ್ತೇ ವಿನಾ ಕಟ್ಟಿ ಗೊತ್ತಿಲ್ಲ. ಬಿಜೆಪಿಯನ್ನು ಅಧಿಕಾರದಿಂದ ದೂರ ಇಡಬೇಕೆಂದು ಹೇಳಿ ನಮ್ಮ ಮನೆ ಬಾಗಿಲಿಗೆ ಬಂದ ಕಾಂಗ್ರೆಸ್‌ ನಾಯಕರು ಸರಕಾರದ ನೇತೃತ್ವ ವಹಿಸಿ ಎಂದರು. ಹಾಗಾದರೆ, ಪಕ್ಷದ ನಿರ್ಧಾರಕ್ಕೂ ನಿಮಗೂ ಸಂಬಂಧ ಇಲ್ಲವಾ ಮಿಸ್ಟರ್ ಸಿದ್ದಸೂತ್ರಧಾರ” ಎಂದು ಪ್ರಶ್ನಿಸಿದ್ದಾರೆ.

“ನಾನು ಜೆಡಿಎಸ್‌ʼನವರ ಮನೆ ಬಾಗಿಲಿಗೆ ಹೋಗಿಲ್ಲ ಎನ್ನುತ್ತೀರಿ, ನಿಮ್ಮನ್ನು ಕರೆದವರು ಯಾರು? ನಾವೇನು ಎಲೆ-ಅಡಿಕೆ ಕೊಟ್ಟು ಆಹ್ವಾನ ಕೊಟ್ಟೆವಾ? ಬಂದು ಬೆಂಬಲದ ಭಿಕ್ಷೆ ಬೇಡಿದವರು ಯಾರು? ದೆಹಲಿ ನಾಯಕರು ನಮ್ಮ ಮನೆ ಬಾಗಿಲಲ್ಲಿ ನಿಂತಿದ್ದಾಗಲೇ ಮೈತ್ರಿಗೆ ಕುಣಿಕೆ ಬಿಗಿಯಲು ಯತ್ನಿಸಿದವರು ಯಾರು ಮಿಸ್ಟರ್‌ ಟರ್ಮಿನೇಟರ್?‌” ಎಂದು ಕೇಳಿದ್ದಾರೆ.

ಹೈಕಮಾಂಡ್ ಮಟ್ಟದಲ್ಲಿ ಮಾತುಕತೆ ನಡೆದಿದೆ, ನನ್ನ ಹಂತದಲ್ಲಿ ಅಲ್ಲ ಅನ್ನುತ್ತೀರಿ! ಸೋನಿಯಾ ಗಾಂಧಿ, ರಾಹುಲ್‌ ಗಾಂಧಿ ಅವರ ಮಾತಿಗೇ ನಿಮ್ಮಲ್ಲಿ ಕಿಮ್ಮತ್ತಿಲ್ಲಾ? ಹಾಗಾದರೆ, ಸಿಎಲ್‌ಪಿಯನ್ನೇ ಅಡ್ಡಡ್ಡ ʼಸೀಳಿʼ ಬೆಂಬಲಿಗ ಶಾಸಕರು ಬಿಜೆಪಿಗೆ ಹೋಗಲು ದುಷ್ಪ್ರೇರಣೆ ಕೊಟ್ಟವರು ಯಾರು? ಎಂದು ಪ್ರಶ್ನಿಸಿದ್ದಾರೆ.

ವರಿಷ್ಠರು ತಂದ ಸರಕಾರವನ್ನೇ ತೆಗೆದಿರಿ, ಬಿಜೆಪಿ ಸರಕಾರ ಬರಲು ಕಾರಣರಾದಿರಿ. ಈಗ ಸುಳ್ಳಿಗೆ ಸುಳ್ಳು ಪೋಣಿಸುತ್ತಿದ್ದೀರಿ. ಬಿಜೆಪಿ ಸರಕಾರ ಬರಲು ಶಾಸಕರ ಟೀಂ ರೆಡಿ ಮಾಡಿದವರು ಯಾರು? ಇಷ್ಟೆಲ್ಲಾ ʼಸಿದ್ದಕಲೆʼ ಎಲ್ಲಿಂದ ಬಂತು ಮಿಸ್ಟರ್ ಸಿದ್ದಕಲಾನಿಪುಣಪ್ಪಾ!? ಎಂದು ಕೇಳಿದ್ದಾರೆ.

ಹೈಕಮಾಂಡ್ ನಿರ್ಧಾರಕ್ಕೂ ಗುನ್ನ, ಅಹಿಂದದ ಹೆಸರಿನಲ್ಲಿ ದಲಿತ ನಾಯಕರಾದ ಖರ್ಗೆ ಅವರಿಗೂ ಖೆಡ್ಡಾ, ಡಾ,ಪರಮೇಶ್ವರ ಅವರಿಗೆ ಸೋಲಿನ ಸುಳಿ, ಈಗ ನೋಡಿದರೆ; ʼಬಂಡೆʼಯ ಕೆಳಗೂ ಡೈನಾಮೈಟ್ ಇಡುತ್ತಿರುವ ಅನೈತಿಕ, ನೀಚ, ನಿಕೃಷ್ಟ, ಹೀನ ರಾಜಕಾರಣಕ್ಕೆ ನಾಂದಿ ಹಾಡಿರುವ ʼಪರಮಪಾತಕ ಪರಾಕಾಷ್ಠೆ ಯಾರು? ಎಂದು ಪ್ರಶ್ನಿಸಿದ್ದಾರೆ.

ಜೆಡಿಎಸ್‌ ಬಿಜೆಪಿಯ ಬಿ ಟೀಂ ಅನ್ನುತ್ತೀರಿ. ಹಾಗಾದರೆ; ಆಡಳಿತ ಪಕ್ಷದಲ್ಲೇ ಕೂತು ವಿರೋಧಿಗಳೊಂದಿಗೆ ಕುಮ್ಮಕ್ಕಾಗಿ ಬೆನ್ನಿಗಿರಿದ ʼಬ್ರೂಟಸ್‌ʼ ಯಾರು? ಮೈತ್ರಿ ಸರಕಾರಕ್ಕೆ ಮೊದಲ ದಿನದಿಂದಲೇ ಮಹೂರ್ತ ಇಟ್ಟವರು ಯಾರು? ಸ್ವಯಂಘೋಷಿತ ಅಹಿಂದ ನಾಯಕರೇ ನಿಮ್ಮೊಳಗಿದೆ ಕಾರ್ಕೋಟಕ ʼವಿಷʼ. ಆ ವಿಷವೇ ನಿಮಗೆ ಮುಳುವು ಎಂದು ಟೀಕಿಸಿದ್ದಾರೆ.

Vishwa News 24

Recent Posts

ಯೋಗೀಶ್‌ ಗೌಡ ಕೊಲೆ ಪ್ರಕರಣ : ವಿನಯ್‌ ಕುಲಕರ್ಣಿ ಸೇರಿ 16 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ – vishwanews24

ಯೋಗೀಶ್‌ ಗೌಡ ಕೊಲೆ ಪ್ರಕರಣ : ವಿನಯ್‌ ಕುಲಕರ್ಣಿ ಸೇರಿ 16 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ಬೆಂಗಳೂರು: ಯೋಗೇಶ್ ಗೌಡ…

26 minutes ago

ಜಮೀರ್ ಅಹ್ಮದ್ ಅವರು ಪಕ್ಷಕ್ಕಾಗಿ ಪ್ರಾಮಾಣಿಕವಾಗಿ ದುಡಿದಿದ್ದಾರೆ : ಯತೀಂದ್ರ ಸಿದ್ದರಾಮಯ್ಯ – vishwanews24

ಜಮೀರ್ ಅಹ್ಮದ್ ಅವರು ಪಕ್ಷಕ್ಕಾಗಿ ಪ್ರಾಮಾಣಿಕವಾಗಿ ದುಡಿದಿದ್ದಾರೆ : ಯತೀಂದ್ರ ಸಿದ್ದರಾಮಯ್ಯ ಬೆಳಗಾವಿ : ಜಮೀರ್ ಅಹ್ಮದ್ ಅವರು ನಮ್ಮ…

2 hours ago

ಮಂಗಳೂರು: 16 ವರ್ಷದ ಬಾಲಕಿ ನಾಪತ್ತೆ; ಪೊಲೀಸರಿಂದ ಲುಕ್‌ಔಟ್ ನೋಟಿಸ್ ಜಾರಿ – vishwanews24

ಮಂಗಳೂರು: 16 ವರ್ಷದ ಬಾಲಕಿ ನಾಪತ್ತೆ; ಪೊಲೀಸರಿಂದ ಲುಕ್‌ಔಟ್ ನೋಟಿಸ್ ಜಾರಿ ಮಂಗಳೂರು: ಕೊಣಜೆ ಪೊಲೀಸ್ ಠಾಣಾ ವ್ಯಾಪ್ತಿಯ ಪಜೀರು…

2 hours ago

ಪಡುಬಿದ್ರಿ ಮಹಾಗಣಪತಿ ದೇವಸ್ಥಾನದ ಬ್ರಹ್ಮಕಲಶೋತ್ಸವ : ಪೂರ್ವಭಾವಿ ಸಭೆ – vishwanews24

ಪಡುಬಿದ್ರಿ ಮಹಾಗಣಪತಿ ದೇವಸ್ಥಾನದ ಬ್ರಹ್ಮಕಲಶೋತ್ಸವ : ಪೂರ್ವಭಾವಿ ಸಭೆ ಪಡುಬಿದ್ರಿ: ಪಡುಬಿದ್ರಿ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವರ ಬ್ರಹ್ಮಕಲಾಶೋತ್ಸವದ ಪ್ರಯುಕ್ತ…

4 hours ago

ಯಾದಗಿರಿ: ಬಸ್- ಕಾರು ಮಧ್ಯೆ ಭೀಕರ ಅಪಘಾತ; 6 ಮಂದಿ ಸಜೀವ ದಹನ – vishwanews24

ಯಾದಗಿರಿ: ಬಸ್- ಕಾರು ಮಧ್ಯೆ ಭೀಕರ ಅಪಘಾತ; 6 ಮಂದಿ ಸಜೀವ ದಹನ ಸುರಪುರ : ಬಸ್ ಮತ್ತು ಕಾರಿನ…

4 hours ago

ಚಿಕನ್ ಪ್ರಿಯರೇ ಎಚ್ಚರ : ರಾಜ್ಯಕ್ಕೆ ಕಾಲಿಟ್ಟ ಹಕ್ಕಿ ಜ್ವರ – vishwanews24

ಚಿಕನ್ ಪ್ರಿಯರೇ ಎಚ್ಚರ : ರಾಜ್ಯಕ್ಕೆ ಕಾಲಿಟ್ಟ ಹಕ್ಕಿ ಜ್ವರ ಬೆಂಗಳೂರು: ಚಿಕನ್ ಪ್ರಿಯರೇ ಎಚ್ಚರವಾಗೀರಿ. ರಾಜ್ಯಕ್ಕೆ H5N1 ವೈರಸ್…

6 hours ago