Featured

ಕಡಬ : ಅಜ್ಜನಿಗೆ ಮದ್ಯಪಾನ ಮಾಡಿಸಿ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ; ಆರೋಪಿ ಬಂಧನ – Vishwanews24

ಕಡಬ : ಅಜ್ಜನಿಗೆ ಮದ್ಯಪಾನ ಮಾಡಿಸಿ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ; ಆರೋಪಿ ಬಂಧನ

ಕಡಬ : ರಬ್ಬರ್ ತೋಟದಲ್ಲಿ ಕೆಲಸ ನಿರ್ವಹಿಸುತ್ತಿದ್ದ ಯುವಕನೊಬ್ಬ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ವೆಸಗಿದ ಘಟನೆ ನೂಜಿಬಾಳ್ತಿಲ ಗ್ರಾಮದಲ್ಲಿ ನಡೆದಿದ್ದು, ದೂರಿನ ಹಿನ್ನಲೆ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಆರೋಪಿಯನ್ನು ನೆಲ್ಯಾಡಿ ಗ್ರಾಮದ ಮಾದೇರಿ ನಿವಾಸಿ ಸುನಿಲ್ ಎಂದು ಗುರುತಿಸಲಾಗಿದೆ.

ಈತ ನೂಜಿಬಾಳ್ತಿಲದ ಖಾಸಗಿ ಶಾಲೆಯ ಹತ್ತನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಅಪ್ರಾಪ್ತ ಬಾಲಕಿಯನ್ನು ಬಲತ್ಕಾರವಾಗಿ ಅತ್ಯಾಚಾರಗೈದಿರುವ ಬಗ್ಗೆ ಬಾಲಕಿಯ ತಂದೆ ದೂರು ನೀಡಿದ ಹಿನ್ನೆಲೆಯಲ್ಲಿ ಕಡಬ ಪೋಲೀಸರು ಪೋಕ್ಸೋ ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನು ಬಂಧಿಸಿದ್ದಾರೆ.

ಕಟೀಲು ಮೇಳದಲ್ಲಿ ಸೇವೆ ಸಲ್ಲಿಸುತ್ತಿದ್ದ ಸುಳ್ಯದ ಪ್ರಸಿದ್ಧ ಕಲಾವಿದ ಚಿದಾನಂದ ಜಾಂಡೀಸ್ ಗೆ ಬಲಿ – Vishwanews24

ಬಾಲಕಿಯ ಮನೆಯ ಪಕ್ಕದಲ್ಲಿ ರಬ್ಬರ್ ತೋಟಕ್ಕೆ ಟ್ಯಾಪಿಂಗ್ ಕೆಲಸಕ್ಕೆ ಆರೋಪಿ ಬರುತ್ತಿದ್ದನಂತೆ. ಬಾಲಕಿಯ ಅಜ್ಜನ ಜೊತೆ ಮಾತನಾಡುವ ನೆಪದಲ್ಲಿ ಆಗಾಗ ಮನೆಗೆ ಬರುತ್ತಿದ್ದು, ಆರೋಪಿಯು ಬಾಲಕಿಯ ಮನೆಗೆ ಬಂದು ಬಾಲಕಿಯ ಅಜ್ಜನಿಗೆ ಮದ್ಯಪಾನ ಮಾಡಿಸಿ ಬಾಲಕಿಯನ್ನು ಬಲವಂತವಾಗಿ ರೂಮಿಗೆ ಎಳೆದೊಯ್ದು ಅತ್ಯಾಚಾರ ಮಾಡಿದ್ದಾನೆ. ಅಲ್ಲದೆ ಈ ವಿಚಾರವನ್ನು ಯಾರಲ್ಲಾದರೂ ಹೇಳಿದರೆ ಕೊಂದು ಹಾಕುತ್ತೇನೆ ಎಂದು ಜೀವ ಬೆದರಿಕೆ ಹಾಕಿದ್ದಾನೆ.

ಅಲ್ಲದೆ ಬಳಿಕ ಸೆಪ್ಟೆಂಬರ್ 26ರಂದು ಮನೆಯಲ್ಲಿ ಬಾಲಕಿಯ ತಾತ ಇಲ್ಲದಿರುವುದನ್ನು ಖಚಿತಪಡಿಸಿಕೊಂಡು ಮತ್ತೊಮ್ಮೆ ಮನೆಗ ಬಂದು ಬಲವಂತವಾಗಿ ಅತ್ಯಾಚಾರ ನಡೆಸಿದ್ದಾನೆ ಎಂದು ದೂರಿನಲ್ಲಿ ತಿಳಿಸಲಾಗಿದೆ.
ಈ ಬಗ್ಗೆ ಕ್ರಮ ಕೈಗೊಂಡಿರುವ ಕಡಬ ಪೊಲೀಸರು ಪೋಕ್ಸೋ ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

Vishwa News 24

Recent Posts

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

1 day ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

1 day ago

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

3 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

4 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

4 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

4 days ago