ಕಡಬ : ರಬ್ಬರ್ ತೋಟದಲ್ಲಿ ಕೆಲಸ ನಿರ್ವಹಿಸುತ್ತಿದ್ದ ಯುವಕನೊಬ್ಬ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ವೆಸಗಿದ ಘಟನೆ ನೂಜಿಬಾಳ್ತಿಲ ಗ್ರಾಮದಲ್ಲಿ ನಡೆದಿದ್ದು, ದೂರಿನ ಹಿನ್ನಲೆ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿಯನ್ನು ನೆಲ್ಯಾಡಿ ಗ್ರಾಮದ ಮಾದೇರಿ ನಿವಾಸಿ ಸುನಿಲ್ ಎಂದು ಗುರುತಿಸಲಾಗಿದೆ.
ಈತ ನೂಜಿಬಾಳ್ತಿಲದ ಖಾಸಗಿ ಶಾಲೆಯ ಹತ್ತನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಅಪ್ರಾಪ್ತ ಬಾಲಕಿಯನ್ನು ಬಲತ್ಕಾರವಾಗಿ ಅತ್ಯಾಚಾರಗೈದಿರುವ ಬಗ್ಗೆ ಬಾಲಕಿಯ ತಂದೆ ದೂರು ನೀಡಿದ ಹಿನ್ನೆಲೆಯಲ್ಲಿ ಕಡಬ ಪೋಲೀಸರು ಪೋಕ್ಸೋ ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನು ಬಂಧಿಸಿದ್ದಾರೆ.
ಕಟೀಲು ಮೇಳದಲ್ಲಿ ಸೇವೆ ಸಲ್ಲಿಸುತ್ತಿದ್ದ ಸುಳ್ಯದ ಪ್ರಸಿದ್ಧ ಕಲಾವಿದ ಚಿದಾನಂದ ಜಾಂಡೀಸ್ ಗೆ ಬಲಿ – Vishwanews24
ಬಾಲಕಿಯ ಮನೆಯ ಪಕ್ಕದಲ್ಲಿ ರಬ್ಬರ್ ತೋಟಕ್ಕೆ ಟ್ಯಾಪಿಂಗ್ ಕೆಲಸಕ್ಕೆ ಆರೋಪಿ ಬರುತ್ತಿದ್ದನಂತೆ. ಬಾಲಕಿಯ ಅಜ್ಜನ ಜೊತೆ ಮಾತನಾಡುವ ನೆಪದಲ್ಲಿ ಆಗಾಗ ಮನೆಗೆ ಬರುತ್ತಿದ್ದು, ಆರೋಪಿಯು ಬಾಲಕಿಯ ಮನೆಗೆ ಬಂದು ಬಾಲಕಿಯ ಅಜ್ಜನಿಗೆ ಮದ್ಯಪಾನ ಮಾಡಿಸಿ ಬಾಲಕಿಯನ್ನು ಬಲವಂತವಾಗಿ ರೂಮಿಗೆ ಎಳೆದೊಯ್ದು ಅತ್ಯಾಚಾರ ಮಾಡಿದ್ದಾನೆ. ಅಲ್ಲದೆ ಈ ವಿಚಾರವನ್ನು ಯಾರಲ್ಲಾದರೂ ಹೇಳಿದರೆ ಕೊಂದು ಹಾಕುತ್ತೇನೆ ಎಂದು ಜೀವ ಬೆದರಿಕೆ ಹಾಕಿದ್ದಾನೆ.
ಅಲ್ಲದೆ ಬಳಿಕ ಸೆಪ್ಟೆಂಬರ್ 26ರಂದು ಮನೆಯಲ್ಲಿ ಬಾಲಕಿಯ ತಾತ ಇಲ್ಲದಿರುವುದನ್ನು ಖಚಿತಪಡಿಸಿಕೊಂಡು ಮತ್ತೊಮ್ಮೆ ಮನೆಗ ಬಂದು ಬಲವಂತವಾಗಿ ಅತ್ಯಾಚಾರ ನಡೆಸಿದ್ದಾನೆ ಎಂದು ದೂರಿನಲ್ಲಿ ತಿಳಿಸಲಾಗಿದೆ.
ಈ ಬಗ್ಗೆ ಕ್ರಮ ಕೈಗೊಂಡಿರುವ ಕಡಬ ಪೊಲೀಸರು ಪೋಕ್ಸೋ ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.
ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ ಹೊಸದಿಲ್ಲಿ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಮುನ್ನ ಟೆನಿಸ್ ಆಟಗಾರ…
ಬೀದರ್ : ಮಳೆ ಆರ್ಭಟ - ಸಿಡಿಲು ಬಡಿದು ಯುವಕ ಸಾವು ಬೀದರ್: ಸಿಡಿಲು ಬಡಿದು ಯುವಕನೊಬ್ಬ ಮೃತಪಟ್ಟ ಘಟನೆ ಔರಾದ್…
ಬೆಳ್ತಂಗಡಿ: ಏಕಾಏಕಿ ತೆರೆಯಲ್ಪಟ್ಟ ಬಸ್ಸಿನ ಬಾಗಿಲು ; ನಿಯಂತ್ರಣ ತಪ್ಪಿ ರಸ್ತೆಗೆ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ ಬೆಳ್ತಂಗಡಿ: ಚಲಿಸುತ್ತಿದ್ದ ಬಸ್ಸಿನಿಂದ…
ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿಯಲು ಯತ್ನ; ಯುವಕನ ರಕ್ಷಣೆ ಉಡುಪಿ: ಟಿಕೆಟ್ ಇಲ್ಲದೆ ಪ್ರಯಾಣಿಸುತ್ತಿದ್ದ ಯುವಕನೊಬ್ಬ ರೈಲಿನಿಂದ ಜಿಗಿಯಲು ಯತ್ನಿಸುತ್ತಿದ್ದ…
ಕಾಸರಗೋಡು : ಕೆಟ್ಟು ನಿಂತಿದ್ದ ಪಿಕಪ್ ವ್ಯಾನ್ ಗೆ ಬೈಕ್ ಢಿಕ್ಕಿ: ಸವಾರ ಮೃತ್ಯು ಕಾಸರಗೋಡು : ರಾಷ್ಟ್ರೀಯ ಹೆದ್ದಾರಿಯ ಬದಿಯಲ್ಲಿ…
ಪ್ರಥಮ ಪಿಯುಸಿ ಫಲಿತಾಂಶ ಪ್ರಕಟ ; ಆನ್ಲೈನ್ನಲ್ಲಿ ವೀಕ್ಷಿಸುವುದು ಹೇಗೆ? ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು…