ಕಡಬ : ಎದೆಹಾಲು ಉಣಿಸುವ ವೇಳೆ ತನ್ನ ಹೆಣ್ಣುಮಗು ಆಕಸ್ಮಿಕವಾಗಿ ಮೃತಪಟ್ಟ ಕಾರಣದಿಂದ ಮಾನಸಿಕವಾಗಿ ನೊಂದ ತಾಯಿಯೂ ಆತ್ಮಹತ್ಯೆಗೆ ಶರಣಾದ ಘಟನೆ ಕಡಬ ಪೊಲೀಸ್ ಠಾಣಾ ವ್ಯಾಪ್ತಿಯ ರಾಮಕುಂಜ ಗ್ರಾಮದಲ್ಲಿ ನಡೆದಿದೆ.
ಕಡಬ ತಾಲೂಕಿನ ರಾಮಕುಂಜ ಗ್ರಾಮದ ವನಿತಾ (38) ಆತ್ಮಹತ್ಯೆ ಮಾಡಿಕೊಂಡವರು.
ವನಿತಾ ಅವರಿಗೆ ಮೂರು ವರ್ಷದ ಗಂಡು ಮಗು ಇದ್ದು, ಮೂರು ತಿಂಗಳ ಹಿಂದೆ ಹೆಣ್ಣು ಮಗುವಿಗೆ ಜನ್ಮ ನೀಡಿದ್ದರು. ಎದೆಹಾಲು ಕೊಟ್ಟ ತಾಯಿ ವನಿತಾ ಅವರು ಮಗುವನ್ನು ತಕ್ಷಣ ಮಲಗಿಸಿದ ಕಾರಣ ಮಗು ಉಸಿರುಗಟ್ಟಿ ಸಾವನ್ನಪ್ಪಿದೆ ಎಂದು ತಿಳಿದು ಬಂದಿದೆ.
ಇದರಿಂದ ವನಿತಾ ಅವರು ಮಾನಸಿಕವಾಗಿ ನೊಂದುಕೊಂಡು ಖಿನ್ನತೆಗೊಳಗಾಗಿದ್ದರು. ಇದಕ್ಕೆ ಚಿಕಿತ್ಸೆ ಕೊಡಿಸುವ ಸಲುವಾಗಿ ಪತಿಯು, ವನಿತಾ ಅವರನ್ನು ತಾಯಿ ಮನೆಯಾದ ರಾಮಕುಂಜದಲ್ಲಿ ಬಿಟ್ಟು ಹೋಗಿದ್ದರು. ಏಪ್ರಿಲ್ 2ರಂದು ಮನೆಯವರೆಲ್ಲಾ ಹೊರಗೆ ಹೋಗಿದ್ದ ವೇಳೆ ಮನೆಯ ಕೋಣೆಯಲ್ಲಿ ಮರದ ಅಡ್ಡಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ವನಿತಾ ಅವರ ಸಹೋದರ ದಿವಾಕರ್ ಕೆ ಎಂಬವರು ಕಡಬ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಮಕ್ಕಳ ಬಗ್ಗೆ ಎಚ್ಚರಿಕೆ ಅಗತ್ಯ: ಹಸುಗೂಸಿಗೆ ಎದೆಹಾಲು ಉಣಿಸಿದ ಬಳಿಕ ಅಥವಾ ಯಾವುದೇ ಫುಡ್ ಮಿಕ್ಸ್ ಕೊಟ್ಟ ಬಳಿಕ ಮಗುವಿನ ತೇಗು ಹೋಗಿದೆಯಾ ಅಂತ ತಾಯಿ ಗಮನಿಸದೇ ಇದ್ದರೆ ಎಂತಹ ಪರಿಣಾಮ ಆಗಬಹುದು ಎನ್ನುವುದಕ್ಕೆ ಇದೊಂದು ಉದಾಹರಣೆಯಾಗಿದೆ. ಮಗುವಿಗೆ ಎದೆ ಹಾಲು ಅಥವಾ ಇನ್ಯಾವುದೇ ಆಹಾರ ನೀಡಿದ ಬಳಿಕ ಮಗುವನ್ನು ಒಂದಷ್ಟು ಹೊತ್ತು ತಿರುಗಾಡಿಸಬೇಕು. ಮಗು ತೇಗು ತೆಗೆದಿಲ್ಲವೆಂದರೆ ಮಗುವಿನ ಬೆನ್ನು ತಟ್ಟಿ ತೇಗು ತೆಗೆಸಬೇಕು. ಹಿಂದಿನ ಕಾಲದ ಹಿರಿಯರಿಗೆ ಈ ಪದ್ಧತಿ ಬಗ್ಗೆ ತಿಳಿವಳಿಕೆ ಇತ್ತು. ಆದರೆ ಈಗಿನವರಿಗೆ ಈ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲ. ಮಗು ಅಳುತ್ತಿದೆ ಎಂದು ಎದೆಹಾಲು ಕೊಟ್ಟು ಹಾಗೇ ಮಲಗಿಸುವುದು ಸರಿಯಲ್ಲ ಎನ್ನುತ್ತಾರೆ ಮಕ್ಕಳ ತಜ್ಞರು.
ಉಡುಪಿ: ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ - 1,52,000 ಮೌಲ್ಯದ…
ಮಂಗಳೂರು: ಎಂಡಿಎಂಎ ಮಾರಾಟ ; ರೂ.2.10 ಲಕ್ಷ ಮೌಲ್ಯದ ಮಾದಕ ವಸ್ತು ಸಹಿತ ಆರೋಪಿ ಬಂಧನ ಮಂಗಳೂರು: ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳನ್ನು…
ರಾಮಮಂದಿರ ದೇಣಿಗೆ ಕಳ್ಳತನ ವಿವಾದ: ಟ್ರಸ್ಟ್ನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಚಂಪತ್ ರಾಯ್ ರಾಜೀನಾಮೆ ಲಕ್ನೋ: ಅಯೋಧ್ಯೆ ರಾಮಮಂದಿರದಲ್ಲಿ ದೇಣಿಗೆ…
ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಎಫ್ಐಆರ್ ಕಡ್ಡಾಯ: ಪೊಲೀಸರಿಗೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸೂಚನೆ ಬೆಂಗಳೂರು: ಪ್ರತೀಕಾರಾತ್ಮಕ ಅಶ್ಲೀಲತೆ ಹಾಗೂ…
ರಾಮಭಕ್ತರ ಅಗ್ನಿಪರೀಕ್ಷೆ ಮಾಡಬೇಡಿ, ಭಕ್ತರು ತಮ್ಮ ನಂಬಿಕೆ ಮತ್ತು ಭಕ್ತಿಯಿಂದ ಕಾಣಿಕೆ ನೀಡುತ್ತಾರೆ : ಯೋಗಿ ಆದಿತ್ಯನಾಥ್ ಲಕ್ನೋ: ರಾಮಭಕ್ತರ…
ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ ; ಇನ್ನು ಮುಂದೆ ಶನಿವಾರ ಅರ್ಧದಿನ ಮಾತ್ರ ಶಾಲೆ ಬೆಂಗಳೂರು: ಶಾಲಾ…