ಕಡಬ : ಎದೆಹಾಲು ಉಣಿಸುವ ವೇಳೆ ತನ್ನ ಹೆಣ್ಣುಮಗು ಆಕಸ್ಮಿಕವಾಗಿ ಮೃತಪಟ್ಟ ಕಾರಣದಿಂದ ಮಾನಸಿಕವಾಗಿ ನೊಂದ ತಾಯಿಯೂ ಆತ್ಮಹತ್ಯೆಗೆ ಶರಣಾದ ಘಟನೆ ಕಡಬ ಪೊಲೀಸ್ ಠಾಣಾ ವ್ಯಾಪ್ತಿಯ ರಾಮಕುಂಜ ಗ್ರಾಮದಲ್ಲಿ ನಡೆದಿದೆ.
ಕಡಬ ತಾಲೂಕಿನ ರಾಮಕುಂಜ ಗ್ರಾಮದ ವನಿತಾ (38) ಆತ್ಮಹತ್ಯೆ ಮಾಡಿಕೊಂಡವರು.
ವನಿತಾ ಅವರಿಗೆ ಮೂರು ವರ್ಷದ ಗಂಡು ಮಗು ಇದ್ದು, ಮೂರು ತಿಂಗಳ ಹಿಂದೆ ಹೆಣ್ಣು ಮಗುವಿಗೆ ಜನ್ಮ ನೀಡಿದ್ದರು. ಎದೆಹಾಲು ಕೊಟ್ಟ ತಾಯಿ ವನಿತಾ ಅವರು ಮಗುವನ್ನು ತಕ್ಷಣ ಮಲಗಿಸಿದ ಕಾರಣ ಮಗು ಉಸಿರುಗಟ್ಟಿ ಸಾವನ್ನಪ್ಪಿದೆ ಎಂದು ತಿಳಿದು ಬಂದಿದೆ.
ಇದರಿಂದ ವನಿತಾ ಅವರು ಮಾನಸಿಕವಾಗಿ ನೊಂದುಕೊಂಡು ಖಿನ್ನತೆಗೊಳಗಾಗಿದ್ದರು. ಇದಕ್ಕೆ ಚಿಕಿತ್ಸೆ ಕೊಡಿಸುವ ಸಲುವಾಗಿ ಪತಿಯು, ವನಿತಾ ಅವರನ್ನು ತಾಯಿ ಮನೆಯಾದ ರಾಮಕುಂಜದಲ್ಲಿ ಬಿಟ್ಟು ಹೋಗಿದ್ದರು. ಏಪ್ರಿಲ್ 2ರಂದು ಮನೆಯವರೆಲ್ಲಾ ಹೊರಗೆ ಹೋಗಿದ್ದ ವೇಳೆ ಮನೆಯ ಕೋಣೆಯಲ್ಲಿ ಮರದ ಅಡ್ಡಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ವನಿತಾ ಅವರ ಸಹೋದರ ದಿವಾಕರ್ ಕೆ ಎಂಬವರು ಕಡಬ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಮಕ್ಕಳ ಬಗ್ಗೆ ಎಚ್ಚರಿಕೆ ಅಗತ್ಯ: ಹಸುಗೂಸಿಗೆ ಎದೆಹಾಲು ಉಣಿಸಿದ ಬಳಿಕ ಅಥವಾ ಯಾವುದೇ ಫುಡ್ ಮಿಕ್ಸ್ ಕೊಟ್ಟ ಬಳಿಕ ಮಗುವಿನ ತೇಗು ಹೋಗಿದೆಯಾ ಅಂತ ತಾಯಿ ಗಮನಿಸದೇ ಇದ್ದರೆ ಎಂತಹ ಪರಿಣಾಮ ಆಗಬಹುದು ಎನ್ನುವುದಕ್ಕೆ ಇದೊಂದು ಉದಾಹರಣೆಯಾಗಿದೆ. ಮಗುವಿಗೆ ಎದೆ ಹಾಲು ಅಥವಾ ಇನ್ಯಾವುದೇ ಆಹಾರ ನೀಡಿದ ಬಳಿಕ ಮಗುವನ್ನು ಒಂದಷ್ಟು ಹೊತ್ತು ತಿರುಗಾಡಿಸಬೇಕು. ಮಗು ತೇಗು ತೆಗೆದಿಲ್ಲವೆಂದರೆ ಮಗುವಿನ ಬೆನ್ನು ತಟ್ಟಿ ತೇಗು ತೆಗೆಸಬೇಕು. ಹಿಂದಿನ ಕಾಲದ ಹಿರಿಯರಿಗೆ ಈ ಪದ್ಧತಿ ಬಗ್ಗೆ ತಿಳಿವಳಿಕೆ ಇತ್ತು. ಆದರೆ ಈಗಿನವರಿಗೆ ಈ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲ. ಮಗು ಅಳುತ್ತಿದೆ ಎಂದು ಎದೆಹಾಲು ಕೊಟ್ಟು ಹಾಗೇ ಮಲಗಿಸುವುದು ಸರಿಯಲ್ಲ ಎನ್ನುತ್ತಾರೆ ಮಕ್ಕಳ ತಜ್ಞರು.
ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ ಬೆಳ್ತಂಗಡಿ: ನೀರಚಿಲುಮೆಯ ತಿರುವಿನಲ್ಲಿ ಕೆಎಸ್ಸಾರ್ಟಿಸಿ…
ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ ಮೂಡುಬಿದಿರೆ : ಮನೆಯಲ್ಲಿನ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ…
ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು ಉಡುಪಿ: ಮಣಿಪಾಲದಿಂದ ಪರ್ಕಳ ಕಡೆಗೆ ತೆರಳುತ್ತಿದ್ದ ಬುಲೆಟ್ ಬೈಕ್…
ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ.. ಕ್ರಿಕೆಟ್ ಬೆಟ್ಟಿಂಗ್ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ; ಡೆತ್ ನೋಟ್ ನಲ್ಲಿ…
ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…
ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…