ಕಡಬ : ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಇಂದಿನಿಂದ ನಡೆಯಲಿರುವ ಕಿರುಷಷ್ಠಿ ಮಹೋತ್ಸವಕ್ಕೆ ಅನ್ಯಧರ್ಮೀಯರನ್ನ ಆಹ್ವಾನಿಸಿರೋದಕ್ಕೆ ಭಾರೀ ವಿರೋಧ ವ್ಯಕ್ತವಾಗಿದೆ.
ಡಿ.26ರ ವರೆಗೆ ನಡೆಯಲಿರುವ ಕಿರುಷಷ್ಠಿ ಮಹೋತ್ಸವದ ಧರ್ಮಸಮ್ಮೇಳನ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಅತಿಥಿಗಳಾಗಿ ಶಿಷ್ಟಾಚಾರದಂತೆ ಅನ್ಯಧರ್ಮೀಯರನ್ನೂ ಆಹ್ವಾನಿಸಲಾಗಿದೆ.
ಹಿಂದೂ ಧಾರ್ಮಿಕ ಕಾರ್ಯಕ್ರಮಕ್ಕೆ ಅನ್ಯಧರ್ಮೀಯರನ್ನ ಆಹ್ವಾನಿಸಿರೋದು ಸರಿಯಲ್ಲ, ತಕ್ಷಣ ಅದನ್ನ ತಡೆಯಬೇಕೆಂದು ಕ್ಷೇತ್ರ ಸಂರಕ್ಷಾ ವೇದಿಕೆಯಿಂದ ಕ್ಷೇತ್ರದ ಆಡಳಿತಾಧಿಕಾರಿಗೆ ಮನವಿ ನೀಡಲಾಗಿದೆ.
ಆಹ್ವಾನ ವಾಪಸ್ ಪಡೆಯದೇ ಇದ್ದರೆ ಡಿ.22 ರಂದು ಆಡಳಿತ ಕಚೇರಿ ಎದುರು ಪ್ರತಿಭಟನೆ ನಡೆಸೋ ಎಚ್ಚರಿಕೆ ನೀಡಲಾಗಿದೆ. ಕುಕ್ಕೆ ಕ್ಷೇತ್ರ ಮುಜರಾಯಿ ಇಲಾಖೆಯ ಅಧೀನದಲ್ಲಿ ಇರುವುದರಿಂದ ಸರ್ಕಾರದ ಶಿಷ್ಟಾಚಾರ ಪ್ರಕಾರ ಎಲ್ಲರನ್ನು ಆಹ್ವಾನಿಸಲಾಗಿದೆ. ಅದರಲ್ಲಿ ಅನ್ಯಧರ್ಮಿಯರಾದ ಸ್ಪೀಕರ್ ಯು.ಟಿ.ಖಾದರ್, ಎಂಎಲ್ಸಿ ಐವನ್ ಡಿಸೋಜಾ, ಬ್ಯಾರಿ ಅಕಾಡೆಮಿ ಅಧ್ಯಕ್ಷ ಉಮರ್ ಯು.ಹೆಚ್, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಗಫೂರ್, ಕನಿಷ್ಠ ವೇತಾತ ಸಲಹಾ ಮಂಡಳಿ ಅಧ್ಯಕ್ಷ ಶಹೀದ್ ತೆಕ್ಕಿಲ್, ಕೊಂಕಣಿ ಸಾಹಿತ್ಯ ಅಕಾಡಮಿಯ ಜೋಕಿಂ, ಪರಿಸರ ಪ್ರವಾಸೋದ್ಯಮ ಅಭಿವೃದ್ಧಿ ಮಂಡಳಿಯ ಶಾಲೆಟ್ ಪಿಂಟೋಗೆ ಆಹ್ವಾನ ನೀಡಲಾಗಿದೆ.
ಕಾಪು: ಫ್ಲ್ಯಾಟ್ ನಿರ್ಮಿಸಿ ಹಸ್ತಾಂತರಿಸುವುದಾಗಿ ಭರವಸೆ ನೀಡಿ 15 ಲಕ್ಷ ರೂ.ವಂಚನೆ ಕಾಪು: ಫ್ಲ್ಯಾಟ್ ನಿರ್ಮಿಸಿ ಹಸ್ತಾಂತರಿಸುವುದಾಗಿ ಭರವಸೆ ನೀಡಿ…
ಹಾಸನ : ಡೆತ್ ನೋಟ್ ಬರೆದಿಟ್ಟು ಪ್ಯಾರಾಮೆಡಿಕಲ್ ವಿದ್ಯಾರ್ಥಿ ಆತ್ಮಹತ್ಯೆ ಹಾಸನ: ಡೆತ್ ನೋಟ್ ಬರೆದಿಟ್ಟು 21 ವರ್ಷದ ಪ್ಯಾರಾಮೆಡಿಕಲ್ ವಿದ್ಯಾರ್ಥಿಯೋರ್ವ…
ಮೂಳೂರು ಹಾಲು ಉತ್ಪಾದಕರ ಸಹಕಾರ ಸಂಘ ಸಭೆ ೨೦೨೩-೨೦೨೪ ಮೂಳೂರು ಹಾಲು ಉತ್ಪಾದಕರ ಸಹಕಾರ ಸಂಘದ ವಾರ್ಷಿಕ ಸಾಮಾನ್ಯ ಸಭೆ…
ಆನ್ಲೈನ್ನಲ್ಲಿ ಮಾರಾಟ ಮಾಡೋ ತರಕಾರಿಗೆ ಕೆಮಿಕಲ್ ಸ್ಪ್ರೇ ಮಾಡುವ ಬಗ್ಗೆ ದೂರು ಬಂದಿದೆ.. ಪರಿಶೀಲನೆ ಮಾಡ್ತಿದ್ದೇವೆ, ಮುಂದಿನ ದಿನಗಳಲ್ಲಿ ಕ್ರಮ…
ಕಾಸರಗೋಡು : ನಿಯಂತ್ರಣ ತಪ್ಪಿ ಡಿವೈಡರ್ಗೆ ಢಿಕ್ಕಿ ಹೊಡೆದ ಆ್ಯಂಬುಲೆನ್ಸ್ ; ರೋಗಿ ಮೃತ್ಯು, ನಾಲ್ವರಿಗೆ ಗಾಯ ಕಾಸರಗೋಡು :…
ರಾಜ್ಯ ಸರ್ಕಾರದ ಯಾವುದೇ ಕಾರ್ಯಕ್ರಮಗಳಲ್ಲಿ ಇನ್ನು ಮುಂದೆ ವಂದೇ ಮಾತರಂನ ಎರಡು ಚರಣ ಮಾತ್ರ ಬಳಕೆ: ಡಿ.ಕೆ. ಶಿ ಸ್ಪಷ್ಟನೆ…