ಕಡಬ : ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಇಂದಿನಿಂದ ನಡೆಯಲಿರುವ ಕಿರುಷಷ್ಠಿ ಮಹೋತ್ಸವಕ್ಕೆ ಅನ್ಯಧರ್ಮೀಯರನ್ನ ಆಹ್ವಾನಿಸಿರೋದಕ್ಕೆ ಭಾರೀ ವಿರೋಧ ವ್ಯಕ್ತವಾಗಿದೆ.
ಡಿ.26ರ ವರೆಗೆ ನಡೆಯಲಿರುವ ಕಿರುಷಷ್ಠಿ ಮಹೋತ್ಸವದ ಧರ್ಮಸಮ್ಮೇಳನ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಅತಿಥಿಗಳಾಗಿ ಶಿಷ್ಟಾಚಾರದಂತೆ ಅನ್ಯಧರ್ಮೀಯರನ್ನೂ ಆಹ್ವಾನಿಸಲಾಗಿದೆ.
ಹಿಂದೂ ಧಾರ್ಮಿಕ ಕಾರ್ಯಕ್ರಮಕ್ಕೆ ಅನ್ಯಧರ್ಮೀಯರನ್ನ ಆಹ್ವಾನಿಸಿರೋದು ಸರಿಯಲ್ಲ, ತಕ್ಷಣ ಅದನ್ನ ತಡೆಯಬೇಕೆಂದು ಕ್ಷೇತ್ರ ಸಂರಕ್ಷಾ ವೇದಿಕೆಯಿಂದ ಕ್ಷೇತ್ರದ ಆಡಳಿತಾಧಿಕಾರಿಗೆ ಮನವಿ ನೀಡಲಾಗಿದೆ.
ಆಹ್ವಾನ ವಾಪಸ್ ಪಡೆಯದೇ ಇದ್ದರೆ ಡಿ.22 ರಂದು ಆಡಳಿತ ಕಚೇರಿ ಎದುರು ಪ್ರತಿಭಟನೆ ನಡೆಸೋ ಎಚ್ಚರಿಕೆ ನೀಡಲಾಗಿದೆ. ಕುಕ್ಕೆ ಕ್ಷೇತ್ರ ಮುಜರಾಯಿ ಇಲಾಖೆಯ ಅಧೀನದಲ್ಲಿ ಇರುವುದರಿಂದ ಸರ್ಕಾರದ ಶಿಷ್ಟಾಚಾರ ಪ್ರಕಾರ ಎಲ್ಲರನ್ನು ಆಹ್ವಾನಿಸಲಾಗಿದೆ. ಅದರಲ್ಲಿ ಅನ್ಯಧರ್ಮಿಯರಾದ ಸ್ಪೀಕರ್ ಯು.ಟಿ.ಖಾದರ್, ಎಂಎಲ್ಸಿ ಐವನ್ ಡಿಸೋಜಾ, ಬ್ಯಾರಿ ಅಕಾಡೆಮಿ ಅಧ್ಯಕ್ಷ ಉಮರ್ ಯು.ಹೆಚ್, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಗಫೂರ್, ಕನಿಷ್ಠ ವೇತಾತ ಸಲಹಾ ಮಂಡಳಿ ಅಧ್ಯಕ್ಷ ಶಹೀದ್ ತೆಕ್ಕಿಲ್, ಕೊಂಕಣಿ ಸಾಹಿತ್ಯ ಅಕಾಡಮಿಯ ಜೋಕಿಂ, ಪರಿಸರ ಪ್ರವಾಸೋದ್ಯಮ ಅಭಿವೃದ್ಧಿ ಮಂಡಳಿಯ ಶಾಲೆಟ್ ಪಿಂಟೋಗೆ ಆಹ್ವಾನ ನೀಡಲಾಗಿದೆ.
ಉಡುಪಿ: ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ - 1,52,000 ಮೌಲ್ಯದ…
ಮಂಗಳೂರು: ಎಂಡಿಎಂಎ ಮಾರಾಟ ; ರೂ.2.10 ಲಕ್ಷ ಮೌಲ್ಯದ ಮಾದಕ ವಸ್ತು ಸಹಿತ ಆರೋಪಿ ಬಂಧನ ಮಂಗಳೂರು: ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳನ್ನು…
ರಾಮಮಂದಿರ ದೇಣಿಗೆ ಕಳ್ಳತನ ವಿವಾದ: ಟ್ರಸ್ಟ್ನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಚಂಪತ್ ರಾಯ್ ರಾಜೀನಾಮೆ ಲಕ್ನೋ: ಅಯೋಧ್ಯೆ ರಾಮಮಂದಿರದಲ್ಲಿ ದೇಣಿಗೆ…
ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಎಫ್ಐಆರ್ ಕಡ್ಡಾಯ: ಪೊಲೀಸರಿಗೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸೂಚನೆ ಬೆಂಗಳೂರು: ಪ್ರತೀಕಾರಾತ್ಮಕ ಅಶ್ಲೀಲತೆ ಹಾಗೂ…
ರಾಮಭಕ್ತರ ಅಗ್ನಿಪರೀಕ್ಷೆ ಮಾಡಬೇಡಿ, ಭಕ್ತರು ತಮ್ಮ ನಂಬಿಕೆ ಮತ್ತು ಭಕ್ತಿಯಿಂದ ಕಾಣಿಕೆ ನೀಡುತ್ತಾರೆ : ಯೋಗಿ ಆದಿತ್ಯನಾಥ್ ಲಕ್ನೋ: ರಾಮಭಕ್ತರ…
ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ ; ಇನ್ನು ಮುಂದೆ ಶನಿವಾರ ಅರ್ಧದಿನ ಮಾತ್ರ ಶಾಲೆ ಬೆಂಗಳೂರು: ಶಾಲಾ…