ಕಡಬ : ಕೃಷಿಗಾಗಿ ಮಾಡಿಕೊಂಡ ಸಾಲ ಮರುಪಾವತಿಸಲು ಸಾಧ್ಯವಾಗದೆ ಹತಾಶೆಗೊಂಡ ಕೃಷಿಕ ವಿಷಸೇವಿಸಿ ಆತ್ಮಹತ್ಯೆ ಮಾಡಿಕೊಂಡ ದಾರುಣ ಘಟನೆ ದಕ್ಷಿಣ ಕನ್ನಡದ ಕಡಬದಲ್ಲಿ ನಡೆದಿದೆ.
ಕಡಬ ಠಾಣಾ ವ್ಯಾಪ್ತಿಯ ಕೊಯಿಲ ಗ್ರಾಮದ ಬುಡಲೂರು ಎಂಬಲ್ಲಿ ಈ ಘಟನೆ ನಡೆದಿದ್ದು ಬೂಡಲೂರು ನಿವಾಸಿ ಶಿವಣ್ಣ ಗೌಡ(61ವ.)ಆತ್ಮಹತ್ಯೆ ಮಾಡಿಕೊಂಡ ಕೃಷಿಕರಾಗಿದ್ದಾರೆ. ತಮ್ಮ ಮನೆಯಿಂದ ಅನತಿ ದೂರದ ಗುಡ್ಡೆಯೊಂದರಲ್ಲಿ ಶಿವಣ್ಣ ವಿಷಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಶಿವಣ್ಣ ಗೌಡ ಅವರು ಸ್ಥಳೀಯ ಸಹಕಾರಿ ಕೃಷಿ ಪತ್ತಿನ ಸಹಕಾರಿ ಸಂಘ, ಪುತ್ತೂರು ಭೂ ಅಭಿವೃದ್ಧಿ ಬ್ಯಾಂಕಿನಲ್ಲಿ ಕೃಷಿ ಚಟುವಟಿಕೆಗಾಗಿ ರೂ.10 ಲಕ್ಷಕ್ಕೂ ಹೆಚ್ಚು ಸಾಲ ಮಾಡಿದ್ದರು ಎನ್ನಲಾಗಿದೆ. ಸಾಲ ಮರುಪಾವತಿಸಲು ಸಾಧ್ಯವಾಗುವುದಿಲ್ಲ ಎನ್ನುವ ಕೊರಗಿನಿಂದ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಮೃತರ ಪುತ್ರ ಹೇಮಂತ್ ಅವರು ಕಡಬ ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ. ಕಡಬ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮೃತರು ಪತ್ನಿ, ಇಬ್ಬರು ಪುತ್ರರು ಹಾಗೂ ಪುತ್ರಿಯನ್ನು ಅಗಲಿದ್ದಾರೆ.
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…
ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…
ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…
ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…
ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…
ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…