Featured

ಕಡಬ: ಚಿನ್ನದ ತೂಕ ಹೆಚ್ಚಿಸಿ ಬ್ಯಾಂಕ್‌ ಗೆ ವಂಚನೆಗೆ ಯತ್ನ: ಇಬ್ಬರ ಬಂಧನ – vishwanews24

ಕಡಬ: ಚಿನ್ನದ ತೂಕ ಹೆಚ್ಚಿಸಿ ಬ್ಯಾಂಕ್‌ ಗೆ ವಂಚನೆಗೆ ಯತ್ನ: ಇಬ್ಬರ ಬಂಧನ

ಕಡಬ: ಚಿನ್ನಾಭರಣದ ತೂಕವನ್ನು ಕೃತಕವಾಗಿ ಹೆಚ್ಚಿಸಿ ಬ್ಯಾಂಕ್‌ನಲ್ಲಿ ಅಡವಿಟ್ಟು ಹಣ ಪಡೆದು ವಂಚನೆ ಮಾಡಲು ಯತ್ನಿಸಿದ್ದ ಇಬ್ಬರನ್ನು ಕಡಬ ಪೊಲೀಸರು ಬಂಧಿಸಿ ಪ್ರಕರಣ ದಾಖಲಿಸಿದ್ದಾರೆ.

ಜುಲೈ 3ರಂದು ಸಂಜೆ ಕಡಬ ಪೇಟೆಯಲ್ಲಿ ಇಬ್ಬರು ವ್ಯಕ್ತಿಗಳು ಸಂಶಯಾಸ್ಪದವಾಗಿ ಓಡಾಡುತ್ತಿರುವ ಕುರಿತು ಮಾಹಿತಿ ಪಡೆದ ಕಡಬ ಪೊಲೀಸ್ ಠಾಣೆಯ ಸಿಬ್ಬಂದಿ ಸ್ಥಳಕ್ಕೆ ತೆರಳಿ ಅವರನ್ನು ವಿಚಾರಣೆ ನಡೆಸಿದರು. ಈ ವೇಳೆ ಬ್ಯಾಂಕ್‌ನಲ್ಲಿ ಸುಮಾರು 120 ಗ್ರಾಂ ಚಿನ್ನಾಭರಣವನ್ನು ಅಡವಿಡಲು ಬಂದಿರುವುದಾಗಿ ಅವರು ತಿಳಿಸಿದ್ದರು. ಅವರ ವರ್ತನೆಯಿಂದ ಅನುಮಾನಗೊಂಡ ಪೊಲೀಸರು ಹೆಚ್ಚಿನ ವಿಚಾರಣೆಗಾಗಿ ಠಾಣೆಗೆ ಕರೆತಂದರು.

ವಿಚಾರಣೆಯಲ್ಲಿ ಆರೋಪಿಗಳು ಉಪ್ಪಿನಂಗಡಿ ನಿವಾಸಿ ಮಹಮ್ಮದ್ ಫಾಯಿಝ್ (20) ಹಾಗೂ ಬಂಟ್ವಾಳ ಕಸಬಾ ನಿವಾಸಿ ಮೊಹಮ್ಮದ್ ಮುರ್ಷೀದ್ (45) ಎಂದು ಗುರುತಿಸಲಾಗಿದೆ.

ಅವರ ಬಳಿಯಿದ್ದ ಚಿನ್ನಾಭರಣಕ್ಕೆ ಸಂಬಂಧಿಸಿದ ಯಾವುದೇ ದಾಖಲೆಗಳನ್ನು ಆರೋಪಿಗಳು ಒದಗಿಸದಿದ್ದು, ಸಮರ್ಪಕ ಮಾಹಿತಿಯನ್ನೂ ನೀಡಲಿಲ್ಲ. ಬಳಿಕ ನಡೆಸಿದ ವಿಚಾರಣೆಯಲ್ಲಿ ಚಿನ್ನಾಭರಣದ ತೂಕವನ್ನು ಕೃತಕವಾಗಿ ಹೆಚ್ಚಿಸಿ ಬ್ಯಾಂಕ್‌ನಲ್ಲಿ ಅಡವಿಟ್ಟು ಬ್ಯಾಂಕ್‌ಗೆ ವಂಚನೆ ಎಸಗಿ ಹಣ ಪಡೆಯುವ ಉದ್ದೇಶದಿಂದ ಬಂದಿರುವುದಾಗಿ ಒಪ್ಪಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಸಂಬಂಧ ಕಡಬ ಪೊಲೀಸ್ ಠಾಣೆಯಲ್ಲಿ ಅಪರಾಧ ಸಂಖ್ಯೆ 83/2026ರಡಿ ಭಾರತೀಯ ನ್ಯಾಯ ಸಂಹಿತೆ (BNS-2023) ಕಲಂ 318(4) ಹಾಗೂ 62ರ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಲಾಗಿದೆ.

Vishwa News 24

Recent Posts

ಈದ್ ಮಿಲಾದ್: ದ.ಕ/ಉಡುಪಿ ಜಿಲ್ಲೆಗೆ ಆ.25ರಂದು ಸಾರ್ವತ್ರಿಕ ರಜೆ ಘೋಷಣೆ – vishwanews24

ಈದ್ ಮಿಲಾದ್: ದ.ಕ/ಉಡುಪಿ ಜಿಲ್ಲೆಗೆ ಆ.25ರಂದು ಸಾರ್ವತ್ರಿಕ ರಜೆ ಘೋಷಣೆ ಮಂಗಳೂರು: ದ.ಕ.ಮತ್ತು ಉಡುಪಿ ಜಿಲ್ಲೆಯಲ್ಲಿ ಆ. 25ರ ಮಂಗಳವಾರ…

13 hours ago

ಬದುಕಿದ್ದಾಗ ಭಿಕ್ಷುಕಿಯಾಗಿದ್ದ ವೃದ್ಧೆ ಸತ್ತ ಮೇಲೆ ಲಕ್ಷಾಧಿಪತಿ ..- vishwanews24

ಮೃತಪಟ್ಟ ಭಿಕ್ಷುಕಿಯ ಮನೆಯಲ್ಲಿ 30 ಲಕ್ಷ ರೂ. ನಗದು ಪತ್ತೆ ಮಂಡ್ಯ: ಭಿಕ್ಷಾಟನೆ ಮಾಡಿ ಜೀವನ ಸಾಗಿಸುತ್ತಿದ್ದ ವೃದ್ಧೆಯೊಬ್ಬರು ಮೃತಪಟ್ಟಿದ್ದು,…

16 hours ago

ಬ್ರಹ್ಮಾವರ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಹತ್ಯೆ; ಆರೋಪಿ ಮಗನ ಬಂಧನ – vishwanews24

ಬ್ರಹ್ಮಾವರ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಹತ್ಯೆ; ಆರೋಪಿ ಮಗನ ಬಂಧನ ಉಡುಪಿ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಕೊಲೆ…

16 hours ago

ಕಾರ್ಕಳ ಪುರಸಭೆಗೆ ಲೋಕಾಯುಕ್ತ ಅಧಿಕಾರಿಗಳ ದಿಢೀರ್‌ ಭೇಟಿ.. ಕಡತಗಳ ಪರಿಶೀಲನೆ – vishwanews24

ಕಾರ್ಕಳ ಪುರಸಭೆಗೆ ಲೋಕಾಯುಕ್ತ ಅಧಿಕಾರಿಗಳ ದಿಢೀರ್‌ ಭೇಟಿ.. ಕಡತಗಳ ಪರಿಶೀಲನೆ ಕಾರ್ಕಳ: ಸಾರ್ವಜನಿಕರ ಅರ್ಜಿ ಹಾಗೂ ಕಡತಗಳ ವಿಲೇವಾರಿ ಬಗ್ಗೆ…

16 hours ago

ಉಡುಪಿ : 25 ಗಂಟೆಗಳ ಕಾಲ ಗಾಯನ ; ವಿದುಷಿ ಸಂಗೀತಾ ಬಾಲಚಂದ್ರ ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್‌ ದಾಖಲೆ – vishwanews24

25 ಗಂಟೆಗಳ ಗಾಯನದಿಂದ ವಿದುಷಿ ಸಂಗೀತಾ ಬಾಲಚಂದ್ರ ಗೋಲ್ಡನ್‌ ಬುಕ್‌ಆಫ್‌ ವರ್ಲ್ಡ್ ರೆಕಾರ್ಡ್‌ ದಾಖಲೆ 'ಗೀತ ಗಂಗೋತ್ರಿʼ ಬಿರುದು ನೀಡಿ…

16 hours ago

ಕಾಪು ಪುರಸಭೆಗೆ ಲೋಕಾಯುಕ್ತ ದಾಳಿ – vishwanews24

ಕಾಪು ಪುರಸಭೆಗೆ ಲೋಕಾಯುಕ್ತ ದಾಳಿ [gallery columns="1" size="large" ids="117027,117028,117029,117030,117031"]

16 hours ago