(ನ್ಯೂಸ್ ಕಡಬ) newskadaba.com ಕಡಬ, ಮಾ.15. ದಲಿತ ಸಂಘರ್ಷ ಸಮಿತಿಯ ಪುತ್ತೂರು ತಾಲೂಕು ಸಂಘಟನಾ ಸಂಚಾಲಕ ಆನಂದ ಮಿತ್ತಬೈಲ್ ನೇತೃತ್ವದಲ್ಲಿ ದಲಿತ ಸಮುದಾಯಕ್ಕೆ ಸೇರಿದ 11 ಮಂದಿ ಹಿಂದೂ ಧರ್ಮದಿಂದ ಬೌದ್ಧ ಧರ್ಮಕ್ಕೆ ಮತಾಂತರಗೊಂಡ ಘಟನೆ ಆಲಂಕಾರಿನಲ್ಲಿ ನಡೆದಿದೆ.
ಕಡಬ ತಾಲೂಕಿನ ಆಲಂಕಾರು ತೋಟಂತಿಲ ಎಂಬಲ್ಲಿ ಪುಟ್ಟಣ್ಣ ಎಂಬವರು ನೂತನವಾಗಿ ನಿರ್ಮಿಸಿದ ‘ಮೈತ್ರಿ ವಿಹಾರ’ ಗೃಹ ಪ್ರವೇಶವನ್ನು ದಕ್ಷಿಣ ಕನ್ನಡ ಜಿಲ್ಲಾ ಬೌದ್ಧ ಮಹಾಸಭಾ(ರಿ.) ನ ಭಂತೇಜಿ ಮೈಸೂರು ಕೊಳ್ಳೇಗಾಲದ ಜೇತವನ ಬುದ್ಧ ವಿಹಾರದ ಪೂಜ್ಯ ಸುಗತಪಾಲ ಭಂತೇಜಿಯವರು ಬುದ್ಧ ಶಾಸನದ ಪ್ರಕಾರ ಬುದ್ಧ ಪೂಜೆ ನೆರವೇರಿಸಿ ಧಮ್ಮೋಪದೇಶ ನೀಡಿದರು. ಈ ಸಂದರ್ಭದಲ್ಲಿ ಮಾತನಾಡಿದ ದಲಿತ ಮುಖಂಡ ಆನಂದ ಮಿತ್ತಬೈಲ್, ಸಂವಿಧಾನ ಶಿಲ್ಪಿ ಡಾ| ಬಿ.ಆರ್.ಅಂಬೇಡ್ಕರ್ ರವರ ಚಿಂತನೆಯಂತೆ ನೈಜ ಧಾರ್ಮಿಕ ವಿಧಿವಿಧಾನಗಳನ್ನು ಹಾಗೂ ಆಶಯಗಳನ್ನು ಜೀವನದಲ್ಲಿ ಅಳವಡಿಸುವುದರ ಮೂಲಕ ಪ್ರೊ. ಬಿ.ಕೃಷ್ಣಪ್ಪರವರ ಕನಸನ್ನು ಈಡೇರಿಸುವಂತೆ ಕರೆ ನೀಡಿದರು. ಈ ಸಂದರ್ಭದಲ್ಲಿ ದಲಿತ ಸಮುದಾಯದ ಪುಟ್ಟಣ್ಣ, ಸುಶೀಲ, ನಯನ್ ಕುಮಾರ್, ನಮಿತ, ಸತೀಶ್ ಕುಮಾರ್, ಪ್ರೇಮ, ಹರ್ಷ, ಸುಶೀಲಾ, ಮನೋಜ್ ಕುಮಾರ್, ವಿಶ್ವನಾಥ್ ಹಾಗೂ ಗಣೇಶ್ ಎಂಬವರು ಆನಂದ ಮಿತ್ತಬೈಲ್ ನೇತೃತ್ವದಲ್ಲಿ ಬೌದ್ಧ ಧರ್ಮದ ದೀಕ್ಷೆ ಪಡೆದು ಹಿಂದೂ ಧರ್ಮದಿಂದ ಬೌದ್ಧ ಧರ್ಮಕ್ಕೆ ಮತಾಂತರಗೊಂಡರು.
ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…
ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…
ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…
ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಬೇಡಿಕೆಗೆ ಅನುಸಾರ…
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…