(ನ್ಯೂಸ್ ಕಡಬ) newskadaba.com ಕಡಬ, ಮಾ.15. ದಲಿತ ಸಂಘರ್ಷ ಸಮಿತಿಯ ಪುತ್ತೂರು ತಾಲೂಕು ಸಂಘಟನಾ ಸಂಚಾಲಕ ಆನಂದ ಮಿತ್ತಬೈಲ್ ನೇತೃತ್ವದಲ್ಲಿ ದಲಿತ ಸಮುದಾಯಕ್ಕೆ ಸೇರಿದ 11 ಮಂದಿ ಹಿಂದೂ ಧರ್ಮದಿಂದ ಬೌದ್ಧ ಧರ್ಮಕ್ಕೆ ಮತಾಂತರಗೊಂಡ ಘಟನೆ ಆಲಂಕಾರಿನಲ್ಲಿ ನಡೆದಿದೆ.
ಕಡಬ ತಾಲೂಕಿನ ಆಲಂಕಾರು ತೋಟಂತಿಲ ಎಂಬಲ್ಲಿ ಪುಟ್ಟಣ್ಣ ಎಂಬವರು ನೂತನವಾಗಿ ನಿರ್ಮಿಸಿದ ‘ಮೈತ್ರಿ ವಿಹಾರ’ ಗೃಹ ಪ್ರವೇಶವನ್ನು ದಕ್ಷಿಣ ಕನ್ನಡ ಜಿಲ್ಲಾ ಬೌದ್ಧ ಮಹಾಸಭಾ(ರಿ.) ನ ಭಂತೇಜಿ ಮೈಸೂರು ಕೊಳ್ಳೇಗಾಲದ ಜೇತವನ ಬುದ್ಧ ವಿಹಾರದ ಪೂಜ್ಯ ಸುಗತಪಾಲ ಭಂತೇಜಿಯವರು ಬುದ್ಧ ಶಾಸನದ ಪ್ರಕಾರ ಬುದ್ಧ ಪೂಜೆ ನೆರವೇರಿಸಿ ಧಮ್ಮೋಪದೇಶ ನೀಡಿದರು. ಈ ಸಂದರ್ಭದಲ್ಲಿ ಮಾತನಾಡಿದ ದಲಿತ ಮುಖಂಡ ಆನಂದ ಮಿತ್ತಬೈಲ್, ಸಂವಿಧಾನ ಶಿಲ್ಪಿ ಡಾ| ಬಿ.ಆರ್.ಅಂಬೇಡ್ಕರ್ ರವರ ಚಿಂತನೆಯಂತೆ ನೈಜ ಧಾರ್ಮಿಕ ವಿಧಿವಿಧಾನಗಳನ್ನು ಹಾಗೂ ಆಶಯಗಳನ್ನು ಜೀವನದಲ್ಲಿ ಅಳವಡಿಸುವುದರ ಮೂಲಕ ಪ್ರೊ. ಬಿ.ಕೃಷ್ಣಪ್ಪರವರ ಕನಸನ್ನು ಈಡೇರಿಸುವಂತೆ ಕರೆ ನೀಡಿದರು. ಈ ಸಂದರ್ಭದಲ್ಲಿ ದಲಿತ ಸಮುದಾಯದ ಪುಟ್ಟಣ್ಣ, ಸುಶೀಲ, ನಯನ್ ಕುಮಾರ್, ನಮಿತ, ಸತೀಶ್ ಕುಮಾರ್, ಪ್ರೇಮ, ಹರ್ಷ, ಸುಶೀಲಾ, ಮನೋಜ್ ಕುಮಾರ್, ವಿಶ್ವನಾಥ್ ಹಾಗೂ ಗಣೇಶ್ ಎಂಬವರು ಆನಂದ ಮಿತ್ತಬೈಲ್ ನೇತೃತ್ವದಲ್ಲಿ ಬೌದ್ಧ ಧರ್ಮದ ದೀಕ್ಷೆ ಪಡೆದು ಹಿಂದೂ ಧರ್ಮದಿಂದ ಬೌದ್ಧ ಧರ್ಮಕ್ಕೆ ಮತಾಂತರಗೊಂಡರು.
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…
ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…
ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…
ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…
ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…
ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…