ಕುಸಿದು ಬೀಳುತ್ತಿರುವ ದೃಶ್ಯ ಮೊಬೈಲ್ ನಲ್ಲಿ ಸೆರೆ
ಕಡಬ: ದೈವ ನರ್ತನ ಮಾಡುತ್ತಿದ್ದಾಗಲೇ ಕುಸಿದು ಬಿದ್ದು ದೈವ ನರ್ತಕರೊಬ್ಬರು ಇಹಲೋಕ ತ್ಯಜಿಸಿದ ಘಟನೆ ಮಾ.30ರ ಮುಂಜಾನೆ ಎಡಮಂಗಲ ಗ್ರಾಮದಲ್ಲಿ ನಡೆದಿದೆ.
ಖ್ಯಾತ ದೈವ ನರ್ತಕ ಎಡಮಂಗಲ ಗ್ರಾಮದ ಕಾಂತು ಅಜಿಲ ಮೂಲಂಗೀರಿ (ಬಾಬು) (55) ಮೃತರು ಎಂದು ತಿಳಿದು ಬಂದಿದೆ.
ಗ್ರಾಮದಲ್ಲಿ ದೈವ ನರ್ತಕರಾಗಿ ಹೆಸರುವಾಸಿಯಾಗಿದ್ದ ಕಾಂತು ಅಜಿಲ ಮೂಲಂಗೀರಿಯವರು ಹಲವಾರು ವರ್ಷಗಳಿಂದ ಎಡಮಂಗಲ ಗ್ರಾಮದ ಕೂಡುಗಟ್ಟಿಗೆ ಸಂಬಂಧಿಸಿದಂತೆ ದೈವಾರಾದಕರಾಗಿ ಗ್ರಾಮದೈವಗಳ ಪರಿಚಾರಕರಾಗಿ ಸೇವೆ ಸಲ್ಲಿಸುತ್ತಿದ್ದರು.
ಮಾ.30 ರಂದು ಎಡಮಂಗಲ ಗ್ರಾಮದ ಇಡ್ಯಡ್ಕದಲ್ಲಿ ಗ್ರಾಮಕ್ಕೆ ಸಂಬಂಧಿಸಿದ ನೇಮೊತ್ಸವ ನಡೆಯುತ್ತಿತ್ತು. ದೈವ ನರ್ತನ ಮಾಡುತ್ತಿರುವಾಗಲೇ ಕುಸಿದು ಬೀಳುತ್ತಿರುವ ದೃಶ್ಯ ಮೊಬೈಲ್ ನಲ್ಲಿ ಸೆರೆಯಾಗಿದೆ. ತಕ್ಷಣ ಸ್ಥಳೀಯ ಆಸ್ಪತ್ರೆಗೆ ಕೊಂಡೊಯ್ದರೂ ಫಲ ನೀಡಲಿಲ್ಲ ಎಂಬ ಮಾಹಿತಿ ಲಭ್ಯವಾಗಿದೆ.
ಕಾಂತು ಅಜಿಲ ಮೂಲಂಗೀರಿಯವರು ಎಡಮಂಗಲ ಪರಿಸರದಲ್ಲಿ ಮತ್ತು ಇತರ ಕಡೆಗಳಲ್ಲಿಯೂ ದೊಡ್ಡ ದೊಡ್ಡ ದೈವಗಳ ನರ್ತನ ಸೇವೆಯನ್ನು ಮಾಡುತ್ತಿದ್ದರು.
ಭಾರೀ ಮಳೆ ಮುನ್ಸೂಚನೆ : ನಾಳೆ(ಜುಲೈ 2)ದ.ಕ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಂಗಳೂರು: ಕರಾವಳಿ ಕರ್ನಾಟಕದಲ್ಲಿ ಭಾರೀ ಮಳೆಯಾಗುವ…
ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿ ಹಣ ನೀಡದೆ ಪಾವತಿಸದೆ ಪರಾರಿ ; ಪ್ರಕರಣ ದಾಖಲು ಶಿರ್ವ : ಶಂಕರಪುರದ…
ಹಜ್ ಯಾತ್ರೆ - 2027 : ಅರ್ಜಿ ಸಲ್ಲಿಕೆಗೆ ಜುಲೈ 20 ಕೊನೆ ದಿನ ಬೆಂಗಳೂರು: ಮುಂದಿನ (2027ನೇ) ಸಾಲಿನಲ್ಲಿ…
ಉಡುಪಿ: ಭಾರೀ ಮಳೆಯಾಗುವ ಸಾಧ್ಯತೆ ; ಜುಲೈ 2 ಮತ್ತು 3ರಂದು ರೆಡ್ ಅಲರ್ಟ್ ಘೋಷಣೆ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ…
ಇಂದಿನಿಂದ ಜಾರಿಗೆ ಬರಲಿವೆ ಹೊಸ ರೂಲ್ಸ್: LPG, ಆಧಾರ್, ರೈಲ್ವೆ, ಬ್ಯಾಂಕ್ ಸೇವೆಗಳಲ್ಲಿ ಬದಲಾವಣೆ ನವದೆಹಲಿ: ಇಂದಿನಿಂದ ದೇಶಾದ್ಯಂತ ಹಲವು…
ಬ್ರಹ್ಮಾವರ :ಭೀಕರ ರಸ್ತೆ ಅಪಘಾತ: ಪ್ರಸಿದ್ಧ ಹುಲಿ ವೇಷ ಕಲಾವಿದ ಸಾವು ಬ್ರಹ್ಮಾವರ: ರಾಷ್ಟ್ರೀಯ ಹೆದ್ದಾರಿ 66ರ ಬ್ರಹ್ಮಾವರದ ಹೇರೂರು…