ಕುಸಿದು ಬೀಳುತ್ತಿರುವ ದೃಶ್ಯ ಮೊಬೈಲ್ ನಲ್ಲಿ ಸೆರೆ
ಕಡಬ: ದೈವ ನರ್ತನ ಮಾಡುತ್ತಿದ್ದಾಗಲೇ ಕುಸಿದು ಬಿದ್ದು ದೈವ ನರ್ತಕರೊಬ್ಬರು ಇಹಲೋಕ ತ್ಯಜಿಸಿದ ಘಟನೆ ಮಾ.30ರ ಮುಂಜಾನೆ ಎಡಮಂಗಲ ಗ್ರಾಮದಲ್ಲಿ ನಡೆದಿದೆ.
ಖ್ಯಾತ ದೈವ ನರ್ತಕ ಎಡಮಂಗಲ ಗ್ರಾಮದ ಕಾಂತು ಅಜಿಲ ಮೂಲಂಗೀರಿ (ಬಾಬು) (55) ಮೃತರು ಎಂದು ತಿಳಿದು ಬಂದಿದೆ.
ಗ್ರಾಮದಲ್ಲಿ ದೈವ ನರ್ತಕರಾಗಿ ಹೆಸರುವಾಸಿಯಾಗಿದ್ದ ಕಾಂತು ಅಜಿಲ ಮೂಲಂಗೀರಿಯವರು ಹಲವಾರು ವರ್ಷಗಳಿಂದ ಎಡಮಂಗಲ ಗ್ರಾಮದ ಕೂಡುಗಟ್ಟಿಗೆ ಸಂಬಂಧಿಸಿದಂತೆ ದೈವಾರಾದಕರಾಗಿ ಗ್ರಾಮದೈವಗಳ ಪರಿಚಾರಕರಾಗಿ ಸೇವೆ ಸಲ್ಲಿಸುತ್ತಿದ್ದರು.
ಮಾ.30 ರಂದು ಎಡಮಂಗಲ ಗ್ರಾಮದ ಇಡ್ಯಡ್ಕದಲ್ಲಿ ಗ್ರಾಮಕ್ಕೆ ಸಂಬಂಧಿಸಿದ ನೇಮೊತ್ಸವ ನಡೆಯುತ್ತಿತ್ತು. ದೈವ ನರ್ತನ ಮಾಡುತ್ತಿರುವಾಗಲೇ ಕುಸಿದು ಬೀಳುತ್ತಿರುವ ದೃಶ್ಯ ಮೊಬೈಲ್ ನಲ್ಲಿ ಸೆರೆಯಾಗಿದೆ. ತಕ್ಷಣ ಸ್ಥಳೀಯ ಆಸ್ಪತ್ರೆಗೆ ಕೊಂಡೊಯ್ದರೂ ಫಲ ನೀಡಲಿಲ್ಲ ಎಂಬ ಮಾಹಿತಿ ಲಭ್ಯವಾಗಿದೆ.
ಕಾಂತು ಅಜಿಲ ಮೂಲಂಗೀರಿಯವರು ಎಡಮಂಗಲ ಪರಿಸರದಲ್ಲಿ ಮತ್ತು ಇತರ ಕಡೆಗಳಲ್ಲಿಯೂ ದೊಡ್ಡ ದೊಡ್ಡ ದೈವಗಳ ನರ್ತನ ಸೇವೆಯನ್ನು ಮಾಡುತ್ತಿದ್ದರು.
ಅರೆಂಜ್ ಅಲರ್ಟ್ ಹಿನ್ನೆಲೆ : ದ.ಕ ಜಿಲ್ಲೆಯಲ್ಲಿ ನಾಳೆ ( ಜು.3) ಶಾಲಾ ಕಾಲೇಜಿಗೆ ರಜೆ ಘೋಷಣೆ ಮಂಗಳೂರು :…
ಜುಲೈ ತಿಂಗಳಲ್ಲಿ ಮೀಟರ್ ರೀಡಿಂಗ್ ಇರುವುದಿಲ್ಲ: ಬೆಸ್ಕಾಂ ಕಳೆದ 3 ತಿಂಗಳ ಸರಾಸರಿ ವಿದ್ಯುತ್ ಬಳಕೆಯ ಆಧಾರದ ಮೇಲೆ ಜುಲೈ…
ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿಕೊಂಡು ಹಣ ಪಾವತಿಸದೆ ಪರಾರಿ ; ಮೂವರು ಆರೋಪಿಗಳ ಬಂಧನ ಉಡುಪಿ: ಕಾರಿಗೆ ಫುಲ್…
ಬಿಜೆಪಿ ರೈತ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಸತೀಶ್ ಕಡತನಮಲೆ 6 ವರ್ಷ ಪಕ್ಷದಿಂದ ಉಚ್ಛಾಟನೆ ಬೆಂಗಳೂರು: ರಾಜ್ಯ ರೈತ…
ಕ್ವಾರಿ ದುರಂತ : ಅಧಿಕೃತ ವರದಿ ಪಡೆದ ಬಳಿಕ ಅಗತ್ಯ ಕ್ರಮಗಳ ಬಗ್ಗೆ ತೀರ್ಮಾನ: ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: “ಮಾಗಡಿ…
ಅಬುಧಾಬಿಯಲ್ಲಿ ಲೋಕೋ ಪೈಲಟ್ ಆಗಿ ಕೊಡಗಿನ ರಿಯಾಝ್ ಮಡಿಕೇರಿ : ಯುನೈಟೆಡ್ ಅರಬ್ ಎಮಿರೇಟ್ಸ್ನಲ್ಲಿ ಆರಂಭವಾದ 'ಇತ್ತಿಹಾದ್' ರೈಲು ಸೇವೆಯ…