ಕಡಬ: ಕಾಲೇಜೊಂದರಲ್ಲಿ ಓದುತ್ತಿದ್ದ ಅಪ್ರಾಪ್ತ ವಯಸ್ಕ ವಿದ್ಯಾರ್ಥಿನಿ ಜತೆ ಪ್ರೀತಿಸುವ ನಾಟಕವಾಡಿ ಆಕೆಯ ಮೇಲೆ ಅತ್ಯಾಚಾರವೆಸಗಿರುವ ಆರೋಪದಲ್ಲಿ ಕಡಬ ತಾಲೂಕು ಕೋಡಿಂಬಾಳ ಗ್ರಾಮದ ಓಂಕಲ್ ನಿವಾಸಿ ಪ್ರವೀಣ್ ಪೂಜಾರಿಯನ್ನು ಕಡಬ ಪೊಲೀಸರು ಬಂಧಿಸಿದ್ದಾರೆ.
ಆತ ಬಾಲಕಿ ಜತೆಗೆ ಸುತ್ತಾಟ ನಡೆಸಿ ವಿಶ್ವಾಸ ಗಳಿಸಿ ಬಳಿಕ ಬಾಡಿಗೆ ರೂಂಗೆ ಕರೆದೊಯ್ದು ದೈಹಿಕ ಸಂಪರ್ಕ ಬೆಳೆಸಿದ್ದಲ್ಲದೆ, ಅದರ ವೀಡಿಯೋ ಚಿತ್ರೀಕರಿಸಿಕೊಂಡು ಬ್ಲ್ಯಾಕ್ವೆುಲ್ ಮಾಡುತ್ತಿದ್ದ. ಅನೇಕ ಬಾರಿ ಆಕೆಯನ್ನು ಪುತ್ತೂರು ಬಳಿಯ ಬಾಡಿಗೆ ರೂಂಗೆ ಕರೆದೊಯ್ಡು ದೈಹಿಕವಾಗಿ ಬಳಸಿಕೊಂಡಿದ್ದ. ಆಕೆ ಗರ್ಭಿಣಿಯಾಗದಂತೆ ಮಾತ್ರೆಯನ್ನು ತಂದುಕೊಟ್ಟಿದ್ದ. ಅದರ ಜತೆಗೆ ಖಾಸಗಿ ಕ್ಷಣದ ವೀಡಿಯೋಗಳನ್ನು ತನ್ನ ಮೊಬೈಲ್ನಲ್ಲಿ ರೆಕಾರ್ಡ್ ಮಾಡಿಕೊಂಡಿದ್ದ ಎಂದು ದೂರಿನಲ್ಲಿ ತಿಳಿಸಲಾಗಿದೆ.
ಸೋಮವಾರ ಕುಂಬ್ರದಲ್ಲಿರುವ ಬಾಡಿಗೆ ರೂಂಗೆ ಕರೆದೊಯ್ದು ಅಲ್ಲೇ ಉಳಿದುಕೊಂಡು ದೈಹಿಕ ಸಂಪರ್ಕ ಬೆಳೆಸಿದ್ದ. ಮರುದಿನ ರೂಂನಲ್ಲಿ ಇರುವಾಗಲೇ ಬಾಲಕಿ ಜತೆ ತಗಾದೆ ತೆಗೆದು ದೈಹಿಕ ಹಿಂಸೆ ನೀಡಿ ಜಗಳವಾಡಿದ್ದ. ಬಳಿಕ ಬೈಕಿನಲ್ಲಿ ಕರೆದೊಯ್ದು ಫರಂಗಿಪೇಟೆ ಬಳಿ ರಸ್ತೆ ಬದಿ ಬಿಟ್ಟು ಹೋಗಿದ್ದ. ಮನೆಯವರಿಗೆ ವಿಷಯ ತಿಳಿಸಿದ್ದ ಬಾಲಕಿಗೆ ಮನೆಮಂದಿ ಧೈರ್ಯ ತುಂಬಿ ಮನೆಗೆ ಕರೆದುಕೊಂಡು ಬಂದಿದ್ದರು.
ಯುವಕ ಬೇರೆ ಹುಡುಗಿ ಜೊತೆ ನಿಶ್ಚಿತಾರ್ಥ ಮಾಡಿಕೊಂಡು ಆ ವಿಷಯವನ್ನು ಮುಚ್ಚಿಟ್ಟು ಮದುವೆಯಾಗುವುದಾಗಿ ನಂಬಿಸಿ ವಂಚಿಸಿದ್ದಾಗಿ ಬಾಲಕಿ ದೂರಿನಲ್ಲಿ ಆರೋಪಿಸಿದ್ದಾಳೆ. ದೂರು ಸ್ವೀಕರಿಸಿದ ಕಡಬ ಪೊಲೀಸರು ಸುಳ್ಯದಲ್ಲಿದ್ದ ಯುವಕನನ್ನು ಬಂಧಿಸಿ ಆತನ ವಿರುದ್ಧ ಪೋಕ್ಸೋ, ಅಟ್ರಾಸಿಟಿ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…