ಕಡಬ: ಸವಾರನ ನಿಯಂತ್ರಣ ತಪ್ಪಿ ಬೈಕ್ ಮೋರಿಗೆ ಬಿದ್ದ ಪರಿಣಾಮ ವಿದ್ಯಾರ್ಥಿಯೋರ್ವ ಮೃತಪಟ್ಟ ಘಟನೆ ಧರ್ಮಸ್ಥಳ – ಮರ್ಧಾಳ- ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಕಡಬ ತಾಲೂಕಿನ ನೂಜಿಬಾಳ್ತಿಲ ಗ್ರಾಮ ಪಂಚಾಯತ್ ವ್ಯಾಪ್ತಿಯ ಪೇರಡ್ಕ ಸಮೀಪದ ಗರ್ಗಾಸ್ಪಾಲ್ನಲ್ಲಿ ಶುಕ್ರವಾರ ನಡೆದಿದೆ.
ನೂಜಿಬಾಳ್ತಿಲ ಗ್ರಾಮದ ಹೊಸಮನೆ ಕಾನ ನಿವಾಸಿ ವಿಶ್ವನಾಥ್ ಅವರ ಪುತ್ರ ಆಶಿಷ್ (16) ಮೃತ ವಿದ್ಯಾರ್ಥಿ. ಆಶಿಷ್ ಪೇರಡ್ಕದ ಖಾಸಗಿ ವಿದ್ಯಾಸಂಸ್ಥೆಯ 10ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದ. ಮೃತ ಆಶಿಷ್ ತಂದೆ, ತಾಯಿ, ಸಹೋದರಿಯನ್ನು ಅಗಲಿದ್ದಾರೆ.
ಆಶಿಷ್ ಬೆಳಗ್ಗೆ ಮನೆಯಿಂದ ಶಾಲೆಗೆ ತೆರಳುತ್ತಿದ್ದಾಗ ಈ ಅವಘಡ ಸಂಭವಿಸಿದೆ. ಸ್ಥಳೀಯ ನಿವಾಸಿ ಶ್ರೀಧರ ಅವರು ಕೂಡಲೇ ಆತನನ್ನು ಮೇಲಕ್ಕೆತ್ತಿ ಕಡಬದ ಖಾಸಗಿ ಆಸ್ಪತ್ರೆಗೆ ಸಾಗಿಸಿದರೂ ಅವರ ಪ್ರಯತ್ನ ಫಲಕಾರಿಯಾಗಲಿಲ್ಲ. ಈ ಬಗ್ಗೆ ಕಡಬ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಆರ್ಟಿಒ ಹಾಗೂ ಪೊಲೀಸ್ ಅಧಿಕಾರಿಗಳಿಗೆ ಪತ್ರ ಬರೆದು ಅಪ್ರಾಪ್ತರು ಹಾಗೂ ಪರವಾನಿಗೆ ಇಲ್ಲದೆ ಬೈಕ್ ಚಲಾಯಿಸುವವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದ್ದಾರೆ. ಇಂತಹ ಘಟನೆಗಳಿಗೆ ಕಡಿವಾಣ ಹಾಕಲು ಅಪ್ರಾಪ್ತರ ಕೈಲಿ ಬೈಕ್ ನೀಡಿದ ಪೋಷಕರ ವಿರುದ್ಧ ಕ್ರಮ ಜರುಗಿಸುವಂತೆ ಸೂಚನೆ ನೀಡಿದ್ದಾರೆ.
ಶಾಲಾ ಕಾಲೇಜುಗಳಿಗೆ ದ್ವಿಚಕ್ರ ವಾಹನ ಹಾಗೂ ನಾಲ್ಕು ಚಕ್ರದ ವಾಹನಗಳನ್ನು ವಿದ್ಯಾರ್ಥಿಗಳು ತಾರದಂತೆ ಶಾಲಾ ಮುಖ್ಯೋಪಾಧ್ಯಯರು ಮತ್ತು ಪ್ರಾಂಶುಪಾಲರು ಸೂಚನೆ ನೀಡಬೇಕು ಹಾಗೂ ಪೋಷಕರಿಗೆ ಈ ಬಗ್ಗೆ ಸೂಚನೆ ನೀಡಬೇಕು.
ಮತ್ತೊಮ್ಮೆ ಇಂತಹ ಘಟನೆ ಮರುಕಳಿಸಿದರೆ ಶಾಲೆಯ ಆಡಳಿತ ಹಾಗೂ ಮುಖ್ಯಸ್ಥರನ್ನೇ ಹೊಣೆಯಾಗಿಸುವುದಾಗಿ ಎಚ್ಚರಿಕೆ ನೀಡಿದ್ದಾರೆ. ಕಡಬ , ಸುಬ್ರಹ್ಮಣ್ಯ, ಬೆಳ್ಳಾರೆ, ಉಪ್ಪಿನಂಗಡಿ ಪೊಲೀಸ್ ಠಾಣಾಧಿಕಾರಿಗಳಿಗೆ ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಲು ಸೂಚಿಸಿದ್ದಾರೆ.
ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…
ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…
ಮದರಂಗಡಿ : ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ ; ಇಬ್ಬರು ಆರೋಪಿಗಳು 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಉಡುಪಿ:ಮುದರಂಗಡಿ…
ಟೈಮಿಂಗ್ ವಿವಾದ: ಕಾಪು ಪೇಟೆಯಲ್ಲಿ ಮತ್ತೆ ಖಾಸಗಿ ಎಕ್ಸ್ಪ್ರೆಸ್ ಬಸ್ ಚಾಲಕರ ವಾಗ್ವಾದ ; ಸ್ಥಳೀಯರಲ್ಲಿ ಆತಂಕ ಕಾಪು: ರಾಷ್ಟ್ರೀಯ…
ಉಡುಪಿ: 'ಭಗವತಿ ಟೂರಿಸ್ಟ್' ಟ್ರಾವೆಲ್ ಬುಕ್ಕಿಂಗ್ ಸಂಸ್ಥೆಯ ಮಾಲೀಕ ವಿನಯ್ ರಾಜ್ ವಿಧಿವಶ ಉಡುಪಿ: ನಗರದ ಸರ್ವಿಸ್ ಬಸ್ ನಿಲ್ದಾಣದ…
ಉಳ್ಳಾಲ: ತಲವಾರು ಹಿಡಿದು ದಾಂಧಲೆ ನಡೆಸಿದ ರೌಡಿ ಶೀಟರ್ ಸಹಿತ ಇಬ್ಬರ ಬಂಧನ ಮಂಗಳೂರು: ಇಲ್ಲಿನ ಬಾರ್ ಒಂದರಲ್ಲಿ ತಲವಾರು…