Featured

ಕಡಬ: ಯುವಕ ನಾಪತ್ತೆ ಪ್ರಕರಣಕ್ಕೆ ತಿರುವು: ಸ್ನೇಹಿತನೇ ಕೊಲೆಗೈದು ಸುಟ್ಟು ಹಾಕಲು ಯತ್ನಿಸಿದ ಅಮಾನವೀಯ ಘಟನೆ – vishwanews24

ಕಡಬ: ಯುವಕ ನಾಪತ್ತೆ ಪ್ರಕರಣಕ್ಕೆ ತಿರುವು: ಸ್ನೇಹಿತನೇ ಕೊಲೆಗೈದು ಸುಟ್ಟು ಹಾಕಲು ಯತ್ನಿಸಿದ ಅಮಾನವೀಯ ಘಟನೆ

ಕಡಬ: ಕಳೆದ ಐದು ದಿನಗಳಿಂದ ನಾಪತ್ತೆಯಾಗಿದ್ದ ಯುವಕನನ್ನು ಆತನ ಸ್ನೇಹಿತನೇ ಕೊಲೆಗೈದು ಸುಟ್ಟು ಹಾಕಲು ಯತ್ನಿಸಿದ ಅಮಾನವೀಯ ಘಟನೆ ಕಡಬ ತಾಲೂಕಿನ ನೆಟ್ಟಣ ಸಮೀಪ ನಡೆದಿದ್ದು, ಘಟನೆ ತಡವಾಗಿ ಬೆಳಕಿಗೆ ಬಂದಿದೆ.

ಕಡಬ ತಾಲೂಕಿನ ಬಿಳಿನೆಲೆ ಗ್ರಾಮದ ಮುಂಗ್ಲಿಮಜಲು ನಿವಾಸಿ ದಿ.ಶಾಂತಪ್ಪ ಗೌಡ ಎಂಬವರ ಪುತ್ರ ಸಂದೀಪ್ ಗೌಡ (29) ಅವರ ಮೃತದೇಹ ಸುಬ್ರಹ್ಮಣ್ಯ ರೈಲು ನಿಲ್ದಾಣದಿಂದ ಸುಮಾರು ಒಂದೂವರೆ ಕಿ.ಮೀ. ದೂರದ ನಾರಡ್ಕ ಕಾಡಿನಲ್ಲಿ ಕೊಳೆತ ಸ್ಥಿತಿಯಲ್ಲಿ ಸೋಮವಾರ ಪತ್ತೆಯಾಗಿದೆ.

ಸಂದೀಪ್‌ನನ್ನು ಆತನ ಸ್ನೇಹಿತ ನೆಟ್ಟಣ ನಿವಾಸಿ ಪ್ರತೀಕ್ ನೆಟ್ಟಣ ಎಂಬಾತ ರೈಲು ನಿಲ್ದಾಣದ ಬಳಿಯ ಗುಡ್ಡೆಯಲ್ಲಿ ಕಬ್ಬಿಣದ ರಾಡ್‌ನಿಂದ ಹೊಡೆದು ಕೊಲೆಗೈದು ಮೃತದೇಹವನ್ನು ಕಾಡಿನೊಳಗೆ ಕೊಂಡೊಯ್ದು ಸುಟ್ಟುಹಾಕಲು ಯತ್ನಿಸಿರುವುದು ಪೊಲೀಸ್ ತನಿಖೆಯಿಂದ ಬಯಲಾಗಿದೆ.

ಮರ್ದಾಳದಲ್ಲಿ ವಿನಯ ಎಂಬವರೊಂದಿಗೆ ಶಾಮಿಯಾನ ಹಾಕುವ ಕೆಲಸ ಮಾಡುತ್ತಿದ್ದ ಸಂದೀಪ್ ನ. 27 ರಂದು ಬೆಳಗ್ಗೆ ಕೆಲಸಕ್ಕೆಂದು ಮನೆಯಿಂದ ತೆರಳಿದ್ದು, ಕೆಲಸ ಮುಗಿಸಿ ಸಂಜೆ ಮನೆಗೆ ವಾಪಸಾಗಿರಲಿಲ್ಲ. ಈ ಬಗ್ಗೆ ವಿನಯ ಅವರಲ್ಲಿ ಸಂದೀಪ್‌ನ ತಾಯಿ ಸರೋಜ ಅವರು ವಿಚಾರಿಸಿದಾಗ ಸಂದೀಪ್ ಸಂಜೆ ಕೆಲಸ ಮುಗಿಸಿ ನೆಟ್ಟಣ ನಿವಾಸಿ ಪ್ರತೀಕ್ ಎಂಬಾತನೊಂದಿಗೆ ಆತನ ಕಾರಿನಲ್ಲಿ ಹೋಗಿರುವುದಾಗಿ ಮಾಹಿತಿ ನೀಡಿದ್ದರು. ಹುಡುಕಾಡಿ ಎಲ್ಲೂ ಪತ್ತೆಯಾಗದ ಹಿನ್ನೆಲೆಯಲ್ಲಿ ಸರೋಜ ಅವರು ಕಡಬ ಠಾಣೆಗೆ ದೂರು ನೀಡಿದ್ದರು. ಅದರಂತೆ ಸಂದೀಪ್‌ನನ್ನು ಕಾರಿನಲ್ಲಿ ಕರೆದೊಯ್ದಿದ್ದ ಪ್ರತೀಕ್ ಹಾಗೂ ಇನ್ನೋರ್ವನನ್ನು ಪೊಲೀಸರು ರವಿವಾರ ರಾತ್ರಿ ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಕೊಲೆಯ ರಹಸ್ಯ ಬಯಲಾಗಿದೆ. ಕೊಲೆಗೆ ಸ್ಪಷ್ಟ ಕಾರಣ ಪೊಲೀಸ್ ತನಿಖೆಯಿಂದ ತಿಳಿದು ಬರಬೇಕಿದೆ.

ಕೊಲೆಗೀಡಾದ ಸಂದೀಪ್‌ನ ಮೃತದೇಹವನ್ನು ಸುಟ್ಟು ಹಾಕಲು ಯತ್ನಿಸಿದ್ದ ಸ್ಥಳಕ್ಕೆ ಸೋಮವಾರ ಸಂಜೆ ಆರೋಪಿ ಪ್ರತೀಕ್‌ನನ್ನು ಪೊಲೀಸರು ಕರೆದೊಯ್ಯುತ್ತಿದ್ದ ವೇಳೆ ಆರೋಪಿಯನ್ನು ನಮ್ಮ ವಶಕ್ಕೆ ನೀಡಿ ಎಂದು ಸ್ಥಳೀಯರು ಪೊಲೀಸ್ ವಾಹನವನ್ನು ತಡೆದು ಆಕ್ರೋಶ ವ್ಯಕ್ತಪಡಿಸಿದ ಘಟನೆ ನಡೆಯಿತು.

ಕೊಲೆಗೈದು ಮೃತದೇಹವನ್ನು ಕಾಡಿಗೆ ಸಾಗಿಸಲು ಒಬ್ಬನಿಂದ ಸಾಧ್ಯವಿಲ್ಲ. ಕೃತ್ಯದಲ್ಲಿ ಇನ್ನೂ ಹಲವರು ಭಾಗಿಯಾಗಿರುವ ಸಾಧ್ಯತೆಗಳಿದ್ದು, ಉಳಿದ ಆರೋಪಿಗಳನ್ನೂ ಬಂಧಿಸುವಂತೆ ಸ್ಥಳೀಯರು ಆಗ್ರಹಿಸಿದರು.

ಸಂದೀಪ್ ನಾಪತ್ತೆ ಆದ ಮರುದಿನವೇ ಕಾರ್ತಿಕ್‌ ಎಂಬಾತನ ವಿರುದ್ಧ ಅನುಮಾನ ವ್ಯಕ್ತಪಡಿಸಿ ಸಂದೀಪ್ ನ ತಾಯಿ ಕಡಬ ಠಾಣೆಗೆ ದೂರು ನೀಡಿದ್ದರೂ ಪೊಲೀಸರು ದೂರು ಸ್ವೀಕರಿಸಿಲ್ಲ ಎಂಬ ಆರೋಪ ವ್ಯಕ್ತಪಡಿಸಿ ಸೋಮವಾರ ಮಧ್ಯಾಹ್ನದ ವೇಳೆಗೆ ಬಿಳಿನೆಲೆ ಗ್ರಾಮಸ್ಥರು ಕಡಬ ಠಾಣೆಯ ಬಳಿ ಜಮಾಯಿಸಿದ್ದರಲ್ಲದೆ ಕಡಬ ಠಾಣಾ ಸಬ್ ಇನ್ಸ್‌ಪೆಕ್ಟರ್ ಅಭಿನಂದನ್ ಹಾಗೂ ಹೆಡ್ ಕಾನ್ಸ್‌ಟೇಬಲ್ ರೋಹಿತಾಕ್ಷ ಎಂಬವರನ್ನು ಅಮಾನತುಗೊಳಿಸುವಂತೆ ಆಗ್ರಹಿಸಿದ್ದರು.

ಈ ವೇಳೆ ಕಡಬ ಠಾಣೆಗೆ ಆಗಮಿಸಿದ್ದ ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ರಾಜೇಂದ್ರ ಡಿ.ಎಸ್. ಸ್ಥಳೀಯರನ್ನು ಸಮಾಧಾನಪಡಿಸಿ, ತಪ್ಪಿತಸ್ಥರಿಗೆ ಕಾನೂನು ರೀತಿಯಲ್ಲಿ ಶಿಕ್ಷೆಯಾಗುವಂತೆ ನೋಡಿಕೊಳ್ಳಲಾಗುವುದು. ನೊಂದ ಕುಟುಂಬಕ್ಕೆ ನ್ಯಾಯ ಒದಗಿಸಿಕೊಡುವುದಾಗಿ ಭರವಸೆ ನೀಡಿದರು.

Vishwa News 24

Recent Posts

ಉಡುಪಿ: ಸಂತೆಕಟ್ಟೆ ಅಂಡರ್‌ಪಾಸ್‌ನ ಮೇಲ್ಸೇತುವೆ ವಾಹನ ಸಂಚಾರಕ್ಕೆ ಮುಕ್ತ ; ಶೀಘ್ರವೇ ಅಧಿಕೃತ ಉದ್ಘಾಟನೆ: ಸಂಸದ ಕೋಟ ಶ್ರೀನಿವಾಸ ಪೂಜಾರಿ – vishwanews24

ಉಡುಪಿ: ಸಂತೆಕಟ್ಟೆ ಅಂಡರ್‌ಪಾಸ್‌ನ ಮೇಲ್ಸೇತುವೆ ವಾಹನ ಸಂಚಾರಕ್ಕೆ ಮುಕ್ತ ; ಶೀಘ್ರವೇ ಅಧಿಕೃತ ಉದ್ಘಾಟನೆ: ಸಂಸದ ಕೋಟ ಶ್ರೀನಿವಾಸ ಪೂಜಾರಿ…

33 minutes ago

ಈಸ್ಟರ್ ಪ್ರಯುಕ್ತ ಯಶವಂತಪುರ-ಮಡಗಾಂವ್ ಮಧ್ಯೆ ವಿಶೇಷ ರೈಲು – vishwanews24

ಈಸ್ಟರ್ ಪ್ರಯುಕ್ತ ಯಶವಂತಪುರ-ಮಡಗಾಂವ್ ಮಧ್ಯೆ ವಿಶೇಷ ರೈಲು ಉಡುಪಿ: ಮುಂಬರುವ ಗುಡ್‌ಫ್ರೈಡೇ ಹಾಗೂ ಈಸ್ಟರ್ ಪ್ರಯುಕ್ತ ಜನರ ವಿಶೇಷ ಒತ್ತಡವನ್ನು…

52 minutes ago

ಉಡುಪಿ: ಏ.1ರಂದು ಪಿಂಕ್​ ಸೂಪರ್​ ಮೂನ್​ ವೀಕ್ಷಣೆಗೆ ಅವಕಾಶ – vishwanews24

ಉಡುಪಿ: ಏ.1ರಂದು ಪಿಂಕ್​ ಸೂಪರ್​ ಮೂನ್​ ವೀಕ್ಷಣೆಗೆ ಅವಕಾಶ ಉಡುಪಿ: ಆಕಾಶಕಾಯದಲ್ಲಿ ದಿನವೂ ಬೆಳ್ಳಗೆ ಗೋಚರಿಸುವ ಚಂದ್ರ ಏ.1ರಂದು ಸಂಜೆ…

1 hour ago

ಜನಗಣತಿ: ಆನ್ ಲೈನ್ ನಲ್ಲಿ ಮನೆ ಲಿಂಕ್ ಮಾಡಲು ತಹಸೀಲ್ದಾರ್ ಕರೆ – vishwanews24

ಜನಗಣತಿ: ಆನ್ ಲೈನ್ ನಲ್ಲಿ ಮನೆ ಲಿಂಕ್ ಮಾಡಲು ತಹಸೀಲ್ದಾರ್ ಕರೆ ಮಂಗಳೂರು: ಭಾರತದ ರಿಜಿಸ್ಟ್ರಾರ್ ಮತ್ತು ಜನಗಣತಿ ಆಯುಕ್ತರ…

1 hour ago

ಮಂಗಳೂರು :  2025ನೇ ಸಾಲಿನ ಕೊಂಕಣಿ ಸಾಹಿತ್ಯ ಅಕಾಡೆಮಿ ಗೌರವ ಪ್ರಶಸ್ತಿ ಹಾಗೂ ಪುಸ್ತಕ ಪುರಸ್ಕಾರ – vishwanews24

ಮಂಗಳೂರು :  2025ನೇ ಸಾಲಿನ ಕೊಂಕಣಿ ಸಾಹಿತ್ಯ ಅಕಾಡೆಮಿ ಗೌರವ ಪ್ರಶಸ್ತಿ ಹಾಗೂ ಪುಸ್ತಕ ಪುರಸ್ಕಾರ ಮಂಗಳೂರು : ಕರ್ನಾಟಕ…

1 hour ago

ಮಂಗಳೂರು: ಕಟ್ಟಡದ 12ನೇ ಮಹಡಿಯಿಂದ ಜಿಗಿದು ವಿದ್ಯಾರ್ಥಿ ಆತ್ಮಹತ್ಯೆ – vishwanews24

ಮಂಗಳೂರು: ಕಟ್ಟಡದ 12ನೇ ಮಹಡಿಯಿಂದ ಜಿಗಿದು ವಿದ್ಯಾರ್ಥಿ ಆತ್ಮಹತ್ಯೆ ಮಂಗಳೂರು: ನಗರದ ಅತ್ತಾವರದಲ್ಲಿರುವ ಕಾಸ ಗ್ರ್ಯಾಂಡ್ ಕಟ್ಟಡದಲ್ಲಿ 12ನೇ ಮಹಡಿಯಿಂದ…

1 hour ago