ಕಡಬ: ಕಡಬದ ಸರ್ಕಾರಿ ಕಾಲೇಜಿನಲ್ಲಿ ನಡೆದ ಮೂವರು ವಿದ್ಯಾರ್ಥಿನಿಯರ ಮೇಲೆ ಆಸಿಡ್ ದಾಳಿ ಪ್ರಕರಣಕ್ಕೆ ಸಂಬಂಧಿಸಿ ಕೇರಳದ ಇನ್ನಿಬ್ಬರನ್ನು ಮಂಗಳವಾರ ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಪ್ರಧಾನ ಆರೋಪಿ ಕೇರಳ ಮೂಲದ ಎಂಬಿಎ ವಿದ್ಯಾರ್ಥಿ ಅಭಿನ್ ನನ್ನು ಮಾ. ೫ರಂದು ಬಂಧಿಸಲಾಗಿತ್ತು. ಉಪ್ಪಿನಂಗಡಿ ವೃತ್ತ ನಿರೀಕ್ಷಕರ ನೇತೃತ್ವದ ತಂಡ ಪ್ರಧಾನ ಆರೋಪಿ ಜತೆ ಕೇರಳದ ಎರ್ನಾಕುಲಂ ಮತ್ತು ತಮಿಳುನಾಡಿನ ಕೊಯಮತ್ತೂರಿನ ಪ್ರದೇಶಕ್ಕೆ ತೆರಳಿ ತನಿಖೆ ನಡೆಸಲಾಗಿತ್ತು. ಇದೀಗ ಕೇರಳದಲ್ಲಿ ಇಬ್ಬರನ್ನು ವಶಕ್ಕೆ ಪಡೆದು ಕಡಬಕ್ಕೆ ಕರೆತಂದಿದ್ದಾರೆ ಎಂದು ತಿಳಿದುಬಂದಿದೆ.
ಆರೋಪಿ ಅಬಿನ್ ಆಸಿಡ್ ದಾಳಿ ನಡೆಸಿದ ದಿನ ಕಾಲೇಜಿನ ಸಮವಸ್ತ್ರ ಹೋಲುವ ಡ್ರೆಸ್ ಹಾಕಿದ್ದು, ಇದನ್ನು ಹೊಲಿದುಕೊಟ್ಟ ವ್ಯಕ್ತಿ ಹಾಗೂ ಆಸಿಡ್ ನೀಡಿದ ವ್ಯಕ್ತಿಗಳಿಬ್ಬರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ಹೇಳಲಾಗಿದೆ.
ಈ ನಡುವೆ ಆಸಿಡ್ ದಾಳಿಗೆ ಒಳಗಾದ ಸಂತ್ರಸ್ತ ವಿದ್ಯಾರ್ಥಿನಿಯರಿಗೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿದೆ.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…