ಕಡಬ: ಜಿಲ್ಲೆಯ ಕೊಯಿಲ ಗ್ರಾಮದ ಕೆಮ್ಮಾರ ಶಾಲೆಯ ಬಳಿ ಭಾನುವಾರ ವಿದ್ಯುತ್ ಶಾರ್ಟ್ ಸರ್ಕ್ಯೂಟ್ನಿಂದ ಬೆಂಕಿ ಕಾಣಿಸಿಕೊಂಡು ಮನೆಯ ಒಳಭಾಗ ಸಂಪೂರ್ಣ ಸುಟ್ಟು ಭಸ್ಮವಾಗಿದೆ.
ಕೆಮ್ಮಾರ ಅಬ್ದುಲ್ ರಹಿಮಾನ್ ಎಂಬುವವರ ಮನೆಯಲ್ಲಿ ಈ ದುರ್ಘಟನೆ ಸಂಭವಿಸಿದೆ. ಬೆಡ್ರೂಮ್ಗೆ ಬೆಂಕಿ ಹೊತ್ತಿಕೊಂಡು ಮನೆಯೆಲ್ಲ ವ್ಯಾಪಿಸಿದೆ. ಬಹುತೇಕ ಎಲ್ಲಾ ಪೀಠೋಪಕರಣಗಳು ಮತ್ತು ಗೃಹೋಪಯೋಗಿ ವಸ್ತುಗಳು ಸುಟ್ಟು ಬೂದಿಯಾಗಿವೆ. ಮನೆಯ ಎರಡೂ ಬದಿಯ ಗೋಡೆ ಬಿರುಕು ಬಿಟ್ಟಿದೆ.
ಶಾಖದ ತೀವ್ರತೆಗೆ ಅಡುಗೆಮನೆಯ ಟೈಲ್ಸ್ ಮತ್ತು ಮಲಗುವ ಕೋಣೆಯ ಗ್ರಾನೈಟ್ಗಳು ಸ್ಫೋಟಗೊಂಡಿವೆ. 35 ಲಕ್ಷ ರೂಪಾಯಿ ನಷ್ಟವಾಗಿದೆ ಎಂದು ಅಂದಾಜಿಸಲಾಗಿದೆ. ಮಾಲೀಕ ಅಬ್ದುಲ್ ರಹಿಮಾನ್ ಪತ್ನಿ ಮತ್ತು ಮಕ್ಕಳೊಂದಿಗೆ ಸಂಬಂಧಿಕರ ಮನೆಗೆ ಹೋಗಿದ್ದರು. ಮನೆಯಲ್ಲಿ ಅವರ ವೃದ್ಧ ತಾಯಿ ಸಕೀನಾ ಮಾತ್ರ ಇದ್ದರು. ಹೊಗೆ ಕಂಡ ತಕ್ಷಣ ಹೊರ ಬಂದು ಅಕ್ಕಪಕ್ಕದವರಿಗೆ ವಿಷಯ ತಿಳಿಸಿದ್ದಾರೆ. ಈ ಮನೆಯನ್ನು ಕೇವಲ ಒಂದು ವರ್ಷದ ಹಿಂದೆ ನಿರ್ಮಿಸಲಾಗಿದೆ.
ಸ್ಥಳೀಯರು ಆಗಮಿಸಿ ಫ್ಯೂಸ್ನ ಮುಖ್ಯ ಸ್ವಿಚ್ ಆಫ್ ಮಾಡಿ ಹೆಚ್ಚಿನ ಹಾನಿಯನ್ನು ತಪ್ಪಿಸಿದರು. ನಂತರ ಅಗ್ನಿಶಾಮಕ ದಳದ ಸಿಬ್ಬಂದಿ ಆಗಮಿಸಿ ಬೆಂಕಿ ನಂದಿಸಿದ್ದಾರೆ. ಗ್ರಾಮ ಪಂಚಾಯಿತಿ ಅಧಿಕಾರಿಗಳು ಹಾಗೂ ಕಂದಾಯ ನಿರೀಕ್ಷಕರು ಸ್ಥಳಕ್ಕೆ ಭೇಟಿ ನೀಡಿದ್ದರು.
ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು…
ರಾಜ್ಯ ಸರ್ಕಾರದಿಂದ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ ಬೆಂಗಳೂರು: ರಾಜ್ಯ ಸರ್ಕಾರ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ …
ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ ಉಡುಪಿ : ಶಿವಮೊಗ್ಗದಿಂದ ಬರುತ್ತಿದ್ದ ಖಾಸಗಿ…
ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…
ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…
ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್ಟೇಬಲ್ ಸಾವು ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್ಟೇಬಲ್…