ಕಡಬ: ಜಿಲ್ಲೆಯ ಕೊಯಿಲ ಗ್ರಾಮದ ಕೆಮ್ಮಾರ ಶಾಲೆಯ ಬಳಿ ಭಾನುವಾರ ವಿದ್ಯುತ್ ಶಾರ್ಟ್ ಸರ್ಕ್ಯೂಟ್ನಿಂದ ಬೆಂಕಿ ಕಾಣಿಸಿಕೊಂಡು ಮನೆಯ ಒಳಭಾಗ ಸಂಪೂರ್ಣ ಸುಟ್ಟು ಭಸ್ಮವಾಗಿದೆ.
ಕೆಮ್ಮಾರ ಅಬ್ದುಲ್ ರಹಿಮಾನ್ ಎಂಬುವವರ ಮನೆಯಲ್ಲಿ ಈ ದುರ್ಘಟನೆ ಸಂಭವಿಸಿದೆ. ಬೆಡ್ರೂಮ್ಗೆ ಬೆಂಕಿ ಹೊತ್ತಿಕೊಂಡು ಮನೆಯೆಲ್ಲ ವ್ಯಾಪಿಸಿದೆ. ಬಹುತೇಕ ಎಲ್ಲಾ ಪೀಠೋಪಕರಣಗಳು ಮತ್ತು ಗೃಹೋಪಯೋಗಿ ವಸ್ತುಗಳು ಸುಟ್ಟು ಬೂದಿಯಾಗಿವೆ. ಮನೆಯ ಎರಡೂ ಬದಿಯ ಗೋಡೆ ಬಿರುಕು ಬಿಟ್ಟಿದೆ.
ಶಾಖದ ತೀವ್ರತೆಗೆ ಅಡುಗೆಮನೆಯ ಟೈಲ್ಸ್ ಮತ್ತು ಮಲಗುವ ಕೋಣೆಯ ಗ್ರಾನೈಟ್ಗಳು ಸ್ಫೋಟಗೊಂಡಿವೆ. 35 ಲಕ್ಷ ರೂಪಾಯಿ ನಷ್ಟವಾಗಿದೆ ಎಂದು ಅಂದಾಜಿಸಲಾಗಿದೆ. ಮಾಲೀಕ ಅಬ್ದುಲ್ ರಹಿಮಾನ್ ಪತ್ನಿ ಮತ್ತು ಮಕ್ಕಳೊಂದಿಗೆ ಸಂಬಂಧಿಕರ ಮನೆಗೆ ಹೋಗಿದ್ದರು. ಮನೆಯಲ್ಲಿ ಅವರ ವೃದ್ಧ ತಾಯಿ ಸಕೀನಾ ಮಾತ್ರ ಇದ್ದರು. ಹೊಗೆ ಕಂಡ ತಕ್ಷಣ ಹೊರ ಬಂದು ಅಕ್ಕಪಕ್ಕದವರಿಗೆ ವಿಷಯ ತಿಳಿಸಿದ್ದಾರೆ. ಈ ಮನೆಯನ್ನು ಕೇವಲ ಒಂದು ವರ್ಷದ ಹಿಂದೆ ನಿರ್ಮಿಸಲಾಗಿದೆ.
ಸ್ಥಳೀಯರು ಆಗಮಿಸಿ ಫ್ಯೂಸ್ನ ಮುಖ್ಯ ಸ್ವಿಚ್ ಆಫ್ ಮಾಡಿ ಹೆಚ್ಚಿನ ಹಾನಿಯನ್ನು ತಪ್ಪಿಸಿದರು. ನಂತರ ಅಗ್ನಿಶಾಮಕ ದಳದ ಸಿಬ್ಬಂದಿ ಆಗಮಿಸಿ ಬೆಂಕಿ ನಂದಿಸಿದ್ದಾರೆ. ಗ್ರಾಮ ಪಂಚಾಯಿತಿ ಅಧಿಕಾರಿಗಳು ಹಾಗೂ ಕಂದಾಯ ನಿರೀಕ್ಷಕರು ಸ್ಥಳಕ್ಕೆ ಭೇಟಿ ನೀಡಿದ್ದರು.
ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ ಬೆಳ್ತಂಗಡಿ: ನೀರಚಿಲುಮೆಯ ತಿರುವಿನಲ್ಲಿ ಕೆಎಸ್ಸಾರ್ಟಿಸಿ…
ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ ಮೂಡುಬಿದಿರೆ : ಮನೆಯಲ್ಲಿನ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ…
ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು ಉಡುಪಿ: ಮಣಿಪಾಲದಿಂದ ಪರ್ಕಳ ಕಡೆಗೆ ತೆರಳುತ್ತಿದ್ದ ಬುಲೆಟ್ ಬೈಕ್…
ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ.. ಕ್ರಿಕೆಟ್ ಬೆಟ್ಟಿಂಗ್ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ; ಡೆತ್ ನೋಟ್ ನಲ್ಲಿ…
ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…
ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…