ಕಡಬ: ಜಿಲ್ಲೆಯ ಕೊಯಿಲ ಗ್ರಾಮದ ಕೆಮ್ಮಾರ ಶಾಲೆಯ ಬಳಿ ಭಾನುವಾರ ವಿದ್ಯುತ್ ಶಾರ್ಟ್ ಸರ್ಕ್ಯೂಟ್ನಿಂದ ಬೆಂಕಿ ಕಾಣಿಸಿಕೊಂಡು ಮನೆಯ ಒಳಭಾಗ ಸಂಪೂರ್ಣ ಸುಟ್ಟು ಭಸ್ಮವಾಗಿದೆ.
ಕೆಮ್ಮಾರ ಅಬ್ದುಲ್ ರಹಿಮಾನ್ ಎಂಬುವವರ ಮನೆಯಲ್ಲಿ ಈ ದುರ್ಘಟನೆ ಸಂಭವಿಸಿದೆ. ಬೆಡ್ರೂಮ್ಗೆ ಬೆಂಕಿ ಹೊತ್ತಿಕೊಂಡು ಮನೆಯೆಲ್ಲ ವ್ಯಾಪಿಸಿದೆ. ಬಹುತೇಕ ಎಲ್ಲಾ ಪೀಠೋಪಕರಣಗಳು ಮತ್ತು ಗೃಹೋಪಯೋಗಿ ವಸ್ತುಗಳು ಸುಟ್ಟು ಬೂದಿಯಾಗಿವೆ. ಮನೆಯ ಎರಡೂ ಬದಿಯ ಗೋಡೆ ಬಿರುಕು ಬಿಟ್ಟಿದೆ.
ಶಾಖದ ತೀವ್ರತೆಗೆ ಅಡುಗೆಮನೆಯ ಟೈಲ್ಸ್ ಮತ್ತು ಮಲಗುವ ಕೋಣೆಯ ಗ್ರಾನೈಟ್ಗಳು ಸ್ಫೋಟಗೊಂಡಿವೆ. 35 ಲಕ್ಷ ರೂಪಾಯಿ ನಷ್ಟವಾಗಿದೆ ಎಂದು ಅಂದಾಜಿಸಲಾಗಿದೆ. ಮಾಲೀಕ ಅಬ್ದುಲ್ ರಹಿಮಾನ್ ಪತ್ನಿ ಮತ್ತು ಮಕ್ಕಳೊಂದಿಗೆ ಸಂಬಂಧಿಕರ ಮನೆಗೆ ಹೋಗಿದ್ದರು. ಮನೆಯಲ್ಲಿ ಅವರ ವೃದ್ಧ ತಾಯಿ ಸಕೀನಾ ಮಾತ್ರ ಇದ್ದರು. ಹೊಗೆ ಕಂಡ ತಕ್ಷಣ ಹೊರ ಬಂದು ಅಕ್ಕಪಕ್ಕದವರಿಗೆ ವಿಷಯ ತಿಳಿಸಿದ್ದಾರೆ. ಈ ಮನೆಯನ್ನು ಕೇವಲ ಒಂದು ವರ್ಷದ ಹಿಂದೆ ನಿರ್ಮಿಸಲಾಗಿದೆ.
ಸ್ಥಳೀಯರು ಆಗಮಿಸಿ ಫ್ಯೂಸ್ನ ಮುಖ್ಯ ಸ್ವಿಚ್ ಆಫ್ ಮಾಡಿ ಹೆಚ್ಚಿನ ಹಾನಿಯನ್ನು ತಪ್ಪಿಸಿದರು. ನಂತರ ಅಗ್ನಿಶಾಮಕ ದಳದ ಸಿಬ್ಬಂದಿ ಆಗಮಿಸಿ ಬೆಂಕಿ ನಂದಿಸಿದ್ದಾರೆ. ಗ್ರಾಮ ಪಂಚಾಯಿತಿ ಅಧಿಕಾರಿಗಳು ಹಾಗೂ ಕಂದಾಯ ನಿರೀಕ್ಷಕರು ಸ್ಥಳಕ್ಕೆ ಭೇಟಿ ನೀಡಿದ್ದರು.
ಉಡುಪಿ: ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ - 1,52,000 ಮೌಲ್ಯದ…
ಮಂಗಳೂರು: ಎಂಡಿಎಂಎ ಮಾರಾಟ ; ರೂ.2.10 ಲಕ್ಷ ಮೌಲ್ಯದ ಮಾದಕ ವಸ್ತು ಸಹಿತ ಆರೋಪಿ ಬಂಧನ ಮಂಗಳೂರು: ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳನ್ನು…
ರಾಮಮಂದಿರ ದೇಣಿಗೆ ಕಳ್ಳತನ ವಿವಾದ: ಟ್ರಸ್ಟ್ನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಚಂಪತ್ ರಾಯ್ ರಾಜೀನಾಮೆ ಲಕ್ನೋ: ಅಯೋಧ್ಯೆ ರಾಮಮಂದಿರದಲ್ಲಿ ದೇಣಿಗೆ…
ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಎಫ್ಐಆರ್ ಕಡ್ಡಾಯ: ಪೊಲೀಸರಿಗೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸೂಚನೆ ಬೆಂಗಳೂರು: ಪ್ರತೀಕಾರಾತ್ಮಕ ಅಶ್ಲೀಲತೆ ಹಾಗೂ…
ರಾಮಭಕ್ತರ ಅಗ್ನಿಪರೀಕ್ಷೆ ಮಾಡಬೇಡಿ, ಭಕ್ತರು ತಮ್ಮ ನಂಬಿಕೆ ಮತ್ತು ಭಕ್ತಿಯಿಂದ ಕಾಣಿಕೆ ನೀಡುತ್ತಾರೆ : ಯೋಗಿ ಆದಿತ್ಯನಾಥ್ ಲಕ್ನೋ: ರಾಮಭಕ್ತರ…
ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ ; ಇನ್ನು ಮುಂದೆ ಶನಿವಾರ ಅರ್ಧದಿನ ಮಾತ್ರ ಶಾಲೆ ಬೆಂಗಳೂರು: ಶಾಲಾ…