ಸಾಯುವ ಕುರಿತಾಗಿ ವಾಟ್ಸ್ಯಾಪ್ ಸ್ಟೇಟಸ್ ಹಾಕಿ ಬಳಿಕ ಮರವೊಂದಕ್ಕೆ ನೇಣು ಬಿಗಿದು ಯುವಕನೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಇಚಿಲಂಪಾಡಿ ಗ್ರಾಮದಲ್ಲಿ ನಡೆದಿದೆ.
ಕಡಬ : ಸಾಯುವ ಕುರಿತಾಗಿ ವಾಟ್ಸ್ಯಾಪ್ ಸ್ಟೇಟಸ್ ಹಾಕಿ ಬಳಿಕ ಮರವೊಂದಕ್ಕೆ ನೇಣು ಬಿಗಿದು ಯುವಕನೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಇಚಿಲಂಪಾಡಿ ಗ್ರಾಮದಲ್ಲಿ ನಡೆದಿದೆ.
ಮಾ.30ರ ತಡರಾತ್ರಿ ಈ ಘಟನೆ ನಡೆದಿದ್ದು ಮೃತ ಯುವಕ ರೆನೀಶ್ (27 ವರ್ಷ) ಎಂದು ಗುರುತಿಸಲಾಗಿದೆ.
ಮೃತ ರೆನೀಶ್ ತಂದೆ ತಾಯಿ ಮರಣ ಹೊಂದಿದ್ದು, ತಮ್ಮ ಕಳೆದ ಮೂರು ವರ್ಷದ ಹಿಂದೆ ಮಂಗಳೂರಿನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದ.ರೆನೀಶ್ ಮನೆಯಲ್ಲಿ ಒಬ್ಬಂಟಿಯಾಗಿ ವಾಸವಾಗಿದ್ದು, ವಿದ್ಯುತ್ ಲೈನ್ ನ ಕೆಲಸಕ್ಕೆ ಹೋಗುತ್ತಿದ್ದ. ನಿನ್ನೆಯೂ ಕೂಡ ಕೆಲಸಕ್ಕೆ ಹೋಗಿದ್ದ ಎನ್ನಲಾಗಿದೆ.
ಒಬ್ಬಂಟಿಯಾಗಿದ್ದರಿಂದ ಮಾನಸಿಕವಾಗಿಯೂ ನೊಂದಿದ್ದ ಎನ್ನಲಾಗಿದೆ.ಕಳೆದ ರಾತ್ರಿ ರೆನೀಶ್ ಆತ್ಮಹತ್ಯೆ ಮಾಡಿಕೊಳ್ಳುವುದರ ಬಗ್ಗೆ ಮೊಬೈಲ್ ನ ಸ್ಟೇಟಸ್ ನಲ್ಲಿ ಬರೆದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ.
ಘಟನಾ ಸ್ಥಳಕ್ಕೆ ನೆಲ್ಯಾಡಿ ಹೊರಠಾಣೆಯ ಪೋಲಿಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…