ಕಡಬ: ವ್ಯಕ್ತಿಯೋರ್ವರು ಕಡಬ ತಾಲೂಕಿನ ಕುದ್ಮಾರು ಗ್ರಾಮದ ಶಾಂತಿಮೊಗರು ಸೇತುವೆಯ ಮೇಲಿಂದ ಕುಮಾರಧಾರ ನದಿಗೆ ಹಾರಿದ ಬಗ್ಗೆ ವರದಿಯಾಗಿದೆ.
ಆಲಂಕಾರಿನಲ್ಲಿ ಉದ್ಯಮಿಯಾಗಿರುವ ಚಂದ್ರಶೇಖರ್ ಪೂಜಾರಿ (60) ಎಂಬವರು ಆತ್ಮಹತ್ಯೆ ಮಾಡಿಕೊಂಡವರು. ಇವರು ಮನೆಯಲ್ಲಿ ಇಂದು ಬೆಳಗ್ಗೆ ಚೀಟಿ ಬರೆದಿಟ್ಟು, ಶಾಂತಿಮೊಗರು ಸೇತುವೆಯ ಮೇಲೆ ತನ್ನ ಕಾರು ನಿಲ್ಲಿಸಿ ಬಲೂನ್ ಕಟ್ಟಿಕೊಂಡು ನೀರಿಗೆ ಹಾರಿದ್ದಾರೆ ಎನ್ನಲಾಗಿದೆ. ಸ್ಥಳಕ್ಕೆ ಬೆಳ್ಳಾರೆ ಮತ್ತು ಕಡಬ ಪೊಲೀಸರು ಆಗಮಿಸಿ ಮಾಹಿತಿ ಪಡೆಯುತ್ತಿದ್ದಾರೆ.
ಆತ್ಮಹತ್ಯೆ ಮಾಡಿಕೊಂಡ ಚಂದ್ರಶೇಖರ ಪೂಜಾರಿ ಅವರು ಆಲಂಕಾರು ಮೂರ್ತೆದಾರರ ಸೇವಾ ಸಹಕಾರಿ ಸಂಘದ ಮಾಜೀ ಅಧ್ಯಕ್ಷ ಹಾಗೂ ಪ್ರಸ್ತುತ ನಿರ್ದೇಶಕರಾಗಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ.
ಪತ್ನಿ, ಇಬ್ಬರು ಪುತ್ರರಿದ್ದು, ಇಬ್ಬರಿಗೂ ಮದುವೆಯಾಗಿದೆ. ಸಂತೃಪ್ತ ಕುಟುಂಬ, ವ್ಯಾಪಾರ ವಹಿವಾಟು ಕೂಡ ಚೆನ್ನಾಗಿತ್ತು. ಸಮಾಜದಲ್ಲಿ ಗೌರವಾನ್ವಿತ ವ್ಯಕ್ತಿಯಾಗಿದ್ದು, ಹೀಗಿದ್ದರೂ ಆತ್ಮಹತ್ಯೆ ಮಾಡಿಕೊಂಡಿರುವುದು ಪರಿಸರದಲ್ಲಿ ಆಶ್ಚರ್ಯವುಂಟು ಮಾಡಿದೆ. ಕಾರಿನಲ್ಲಿ ಅವರು ಬರೆದಿಟ್ಟ ಪತ್ರವೊಂದು ಸಿಕ್ಕಿದೆ. ಅದರಲ್ಲಿ ಕಾರು ಕೀ ಸೇತುವೆ ಮೇಲಿದೆ ಎಂದು ಬರೆದಿಟ್ಟಿದ್ದಾರೆ. ಕಡಬ ಪೊಲೀಸರು ಸ್ಥಳಕ್ಕಾಗಮಿಸಿ ಶವ ಮಹಜರು ಮಾಡಿದರು.
ಧಾರ್ಮಿಕ ಮತ್ತು ಸಾಮಾಜಿಕ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಭಾಗವಹಿಸುತ್ತಿದ್ದ ಚಂದ್ರಶೇಖರ ಪೂಜಾರಿ ಯಕ್ಷಗಾನ ಅರ್ಥಧಾರಿ ಮತ್ತು ಸಂಘಟಕರೂ ಆಗಿದ್ದರು. ಆಲಂಕಾರು ಮೂರ್ತೆದಾರರ ಸಹಕಾರಿ ಸಂಘ ಮೂರು ಅವಧಿಗೆ ಅಧ್ಯಕ್ಷರಾಗಿದ್ದರು. ಶರವೂರು ದೇವಸ್ಥಾನ ವ್ಯವಸ್ಥಾಪನಾ ಸಮಿತಿ ಸದಸ್ಯರಾಗಿದ್ದರು.
ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿ ಹಣ ನೀಡದೆ ಪಾವತಿಸದೆ ಪರಾರಿ ; ಪ್ರಕರಣ ದಾಖಲು ಶಿರ್ವ : ಶಂಕರಪುರದ…
ಹಜ್ ಯಾತ್ರೆ - 2027 : ಅರ್ಜಿ ಸಲ್ಲಿಕೆಗೆ ಜುಲೈ 20 ಕೊನೆ ದಿನ ಬೆಂಗಳೂರು: ಮುಂದಿನ (2027ನೇ) ಸಾಲಿನಲ್ಲಿ…
ಉಡುಪಿ: ಭಾರೀ ಮಳೆಯಾಗುವ ಸಾಧ್ಯತೆ ; ಜುಲೈ 2 ಮತ್ತು 3ರಂದು ರೆಡ್ ಅಲರ್ಟ್ ಘೋಷಣೆ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ…
ಇಂದಿನಿಂದ ಜಾರಿಗೆ ಬರಲಿವೆ ಹೊಸ ರೂಲ್ಸ್: LPG, ಆಧಾರ್, ರೈಲ್ವೆ, ಬ್ಯಾಂಕ್ ಸೇವೆಗಳಲ್ಲಿ ಬದಲಾವಣೆ ನವದೆಹಲಿ: ಇಂದಿನಿಂದ ದೇಶಾದ್ಯಂತ ಹಲವು…
ಬ್ರಹ್ಮಾವರ :ಭೀಕರ ರಸ್ತೆ ಅಪಘಾತ: ಪ್ರಸಿದ್ಧ ಹುಲಿ ವೇಷ ಕಲಾವಿದ ಸಾವು ಬ್ರಹ್ಮಾವರ: ರಾಷ್ಟ್ರೀಯ ಹೆದ್ದಾರಿ 66ರ ಬ್ರಹ್ಮಾವರದ ಹೇರೂರು…
ಇನ್ನು ಮುಂದೆ ಫೋನ್ ನಂಬರ್ ನೀಡದೇ ಚಾಟ್ ಮಾಡಬಹುದು : ಏನಿದು ವಾಟ್ಸಪ್ ಹೊಸ ಬದಲಾವಣೆ ? ಕ್ಯಾಲಿಫೋರ್ನಿಯಾ :…