Featured

ಕಡಬ : ಸೊಂಟಕ್ಕೆ ಬಲೂನು ಕಟ್ಟಿಕೊಂಡು ಸೇತುವೆಯಿಂದ ನದಿಗೆ ಹಾರಿ ಉದ್ಯಮಿ ಆತ್ಮಹತ್ಯೆ – Vishwanews24

ಕಡಬ : ಸೊಂಟಕ್ಕೆ ಬಲೂನು ಕಟ್ಟಿಕೊಂಡು ಸೇತುವೆಯಿಂದ ನದಿಗೆ ಹಾರಿ ಉದ್ಯಮಿ ಆತ್ಮಹತ್ಯೆ

ಕಡಬ: ವ್ಯಕ್ತಿಯೋರ್ವರು ಕಡಬ ತಾಲೂಕಿನ ಕುದ್ಮಾರು ಗ್ರಾಮದ ಶಾಂತಿಮೊಗರು ಸೇತುವೆಯ ಮೇಲಿಂದ ಕುಮಾರಧಾರ ನದಿಗೆ ಹಾರಿದ ಬಗ್ಗೆ ವರದಿಯಾಗಿದೆ.

ಆಲಂಕಾರಿನಲ್ಲಿ ಉದ್ಯಮಿಯಾಗಿರುವ ಚಂದ್ರಶೇಖರ್ ಪೂಜಾರಿ (60) ಎಂಬವರು ಆತ್ಮಹತ್ಯೆ ಮಾಡಿಕೊಂಡವರು. ಇವರು ಮನೆಯಲ್ಲಿ ಇಂದು ಬೆಳಗ್ಗೆ ಚೀಟಿ ಬರೆದಿಟ್ಟು, ಶಾಂತಿಮೊಗರು ಸೇತುವೆಯ ಮೇಲೆ ತನ್ನ ಕಾರು ನಿಲ್ಲಿಸಿ ಬಲೂನ್ ಕಟ್ಟಿಕೊಂಡು ನೀರಿಗೆ ಹಾರಿದ್ದಾರೆ ಎನ್ನಲಾಗಿದೆ. ಸ್ಥಳಕ್ಕೆ ಬೆಳ್ಳಾರೆ ಮತ್ತು ಕಡಬ ಪೊಲೀಸರು ಆಗಮಿಸಿ ಮಾಹಿತಿ ಪಡೆಯುತ್ತಿದ್ದಾರೆ.

ಆತ್ಮಹತ್ಯೆ ಮಾಡಿಕೊಂಡ ಚಂದ್ರಶೇಖರ ಪೂಜಾರಿ ಅವರು ಆಲಂಕಾರು ಮೂರ್ತೆದಾರರ ಸೇವಾ ಸಹಕಾರಿ ಸಂಘದ ಮಾಜೀ ಅಧ್ಯಕ್ಷ ಹಾಗೂ ಪ್ರಸ್ತುತ ನಿರ್ದೇಶಕರಾಗಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ.

ಪತ್ನಿ, ಇಬ್ಬರು ಪುತ್ರರಿದ್ದು, ಇಬ್ಬರಿಗೂ ಮದುವೆಯಾಗಿದೆ. ಸಂತೃಪ್ತ ಕುಟುಂಬ, ವ್ಯಾಪಾರ ವಹಿವಾಟು ಕೂಡ ಚೆನ್ನಾಗಿತ್ತು. ಸಮಾಜದಲ್ಲಿ ಗೌರವಾನ್ವಿತ ವ್ಯಕ್ತಿಯಾಗಿದ್ದು, ಹೀಗಿದ್ದರೂ ಆತ್ಮಹತ್ಯೆ ಮಾಡಿಕೊಂಡಿರುವುದು ಪರಿಸರದಲ್ಲಿ ಆಶ್ಚರ್ಯವುಂಟು ಮಾಡಿದೆ. ಕಾರಿನಲ್ಲಿ ಅವರು ಬರೆದಿಟ್ಟ ಪತ್ರವೊಂದು ಸಿಕ್ಕಿದೆ. ಅದರಲ್ಲಿ ಕಾರು ಕೀ ಸೇತುವೆ ಮೇಲಿದೆ ಎಂದು ಬರೆದಿಟ್ಟಿದ್ದಾರೆ. ಕಡಬ ಪೊಲೀಸರು ಸ್ಥಳಕ್ಕಾಗಮಿಸಿ ಶವ ಮಹಜರು ಮಾಡಿದರು.

ಧಾರ್ಮಿಕ ಮತ್ತು ಸಾಮಾಜಿಕ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಭಾಗವಹಿಸುತ್ತಿದ್ದ ಚಂದ್ರಶೇಖರ ಪೂಜಾರಿ ಯಕ್ಷಗಾನ ಅರ್ಥಧಾರಿ ಮತ್ತು ಸಂಘಟಕರೂ ಆಗಿದ್ದರು. ಆಲಂಕಾರು ಮೂರ್ತೆದಾರರ ಸಹಕಾರಿ ಸಂಘ ಮೂರು ಅವಧಿಗೆ ಅಧ್ಯಕ್ಷರಾಗಿದ್ದರು. ಶರವೂರು ದೇವಸ್ಥಾನ ವ್ಯವಸ್ಥಾಪನಾ ಸಮಿತಿ ಸದಸ್ಯರಾಗಿದ್ದರು.

Vishwa News 24

Recent Posts

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

4 hours ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

4 hours ago

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

2 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

3 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

3 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

3 days ago