ಉಡುಪಿ: ಕಡಲ್ಕೊರೆತ ತಡೆಗೆ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಿಗೆ ತಲಾ 5 ಕೋಟಿ ರೂ. ಅನುದಾನ ಬಿಡುಗಡೆ ಮಾಡಲಾಗಿದೆ ಎಂದು ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಬುಧವಾರ ತಿಳಿಸಿದ್ದಾರೆ.
ಉಡುಪಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ ‘ ಕಡಲ್ಕೊರೆತ ವಿಚಾರಕ್ಕೆ ಸಂಬಂಧಿಸಿ ಹಿಂದಿನ 10 ಕೋಟಿ ರೂ.ಬಿಲ್ ಬಾಕಿ ಇದೆ ಅದನ್ನೂ ಬಿಡುಗಡೆ ಮಾಡಲಾಗುತ್ತದೆ. ಕಡಲ್ಕೊರೆತ ಶಾಶ್ವತ ಪರಿಹಾರಕ್ಕೆ ಡಿಪಿಆರ್ ಸಿದ್ಧಪಡಿಸಲಾಗಿದ್ದು, ಇದಕ್ಕೆ ರಾಜ್ಯ ಸರಕಾರದಿಂದ ಮಾತ್ರ ಪರಿಹಾರ ನೀಡುವುದು ಸಾಧ್ಯವಿಲ್ಲ.ಕೇಂದ್ರ ಮತ್ತು ರಾಜ್ಯ ಸರಕಾರ’ ಸಮನ್ವಯತೆಯೊಂದಿಗೆ ಕೆಲಸ ಮಾಡಬೇಕಾಗಿದೆ’ ಎಂದರು.
‘ಉಡುಪಿ ಜಿಲ್ಲೆಯಲ್ಲಿ ಬಸ್ ಕೊರತೆ ವಿಚಾರ ಗಮನಕ್ಕೆ ಬಂದಿದ್ದು, ಕೊರತೆ ನೀಗಿಸಲು ಸಾರಿಗೆ ಸಚಿವರೊಂದಿಗೆ ಮಾತುಕತೆ ನಡೆಸಲಾಗಿದೆ. 3 ಸಾವಿರ ಸಾವಿರ ಬಸ್ ಗಳ ಖರೀದಿ ಆಗಿದ್ದು ಅವುಗಳ ಪೈಕಿ ಕೆಲವನ್ನು ಇಲ್ಲಿಗೆ ತರುವ ಪ್ರಯತ್ನ ಮಾಡುತ್ತೇವೆ’ ಎಂದರು.
ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿಯಲು ಯತ್ನ; ಯುವಕನ ರಕ್ಷಣೆ ಉಡುಪಿ: ಟಿಕೆಟ್ ಇಲ್ಲದೆ ಪ್ರಯಾಣಿಸುತ್ತಿದ್ದ ಯುವಕನೊಬ್ಬ ರೈಲಿನಿಂದ ಜಿಗಿಯಲು ಯತ್ನಿಸುತ್ತಿದ್ದ…
ಕಾಸರಗೋಡು : ಕೆಟ್ಟು ನಿಂತಿದ್ದ ಪಿಕಪ್ ವ್ಯಾನ್ ಗೆ ಬೈಕ್ ಢಿಕ್ಕಿ: ಸವಾರ ಮೃತ್ಯು ಕಾಸರಗೋಡು : ರಾಷ್ಟ್ರೀಯ ಹೆದ್ದಾರಿಯ ಬದಿಯಲ್ಲಿ…
ಪ್ರಥಮ ಪಿಯುಸಿ ಫಲಿತಾಂಶ ಪ್ರಕಟ ; ಆನ್ಲೈನ್ನಲ್ಲಿ ವೀಕ್ಷಿಸುವುದು ಹೇಗೆ? ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು…
ಮಂಗಳೂರಿನಲ್ಲಿ ಹಜ್ ಭವನ, ಹಜ್ ಯಾತ್ರೆಗೆ ನೇರ ವಿಮಾನ ಸೌಲಭ್ಯ ಒದಗಿಸುವಂತೆ ಎಸ್ಡಿಪಿಐ ಆಗ್ರಹ ಮಂಗಳೂರು: ಮಂಗಳೂರಿನಲ್ಲಿ ಹಜ್ ಭವನ…
ಕಟಪಾಡಿ : ಶೀಘ್ರ ಒಂದು ಭಾಗದಲ್ಲಿ ವಾಹನ ಸಂಚಾರಕ್ಕೆ ಮುಕ್ತ ಕಟಪಾಡಿಯಲ್ಲಿ ರಾಷ್ಟ್ರೀಯ ಹೆದ್ದಾರಿಯ ಅಂಡರ್ಪಾಸ್ ಕಾಮಗಾರಿ ವೇಗದಲ್ಲಿ ನಡೆಯುತಿದ್ದು,…
ಉಡುಪಿ: ಸಂತೆಕಟ್ಟೆ ಅಂಡರ್ಪಾಸ್ನ ಮೇಲ್ಸೇತುವೆ ವಾಹನ ಸಂಚಾರಕ್ಕೆ ಮುಕ್ತ ; ಶೀಘ್ರವೇ ಅಧಿಕೃತ ಉದ್ಘಾಟನೆ: ಸಂಸದ ಕೋಟ ಶ್ರೀನಿವಾಸ ಪೂಜಾರಿ…