ಉಳ್ಳಾಲ: ಕಡಲ್ಕೊರೆತಕ್ಕೆ ಒಳಗಾಗುತ್ತಿದ್ದ ಉಚ್ಚಿಲ, ಬಟ್ಟಂಪಾಡಿ, ಸೀ ಗ್ರೌಂಡ್ ಪ್ರದೇಶಗಳಿಗೆ ರಾಜ್ಯ ವಿಧಾನಸಭೆಯ ಸ್ಪೀಕರ್, ಉಳ್ಳಾಲದ ಶಾಸಕ ಯು. ಟಿ. ಖಾದರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಈ ವೇಳೆ ಅವರು ಜಿಲ್ಲಾಧಿಕಾರಿ ರವಿ ಕುಮಾರ್ ಎಮ್.ಆರ್. ಮತ್ತು ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿದರು. ಈ ಹಿಂದೆ ಉಳ್ಳಾಲದ ಕೋಡಿ,ಕೋಟೆಪುರ, ಮೊಗವೀರಪಟ್ಣ, ಸುಭಾಷ್ ನಗರ, ಹಿಲೇರಿಯ ಮೊದಲಾದ ಭಾಗದಲ್ಲಿ ಶಾಶ್ವತವಾದ ಕೆಲಸ ಮಾಡಿದ ಕಾರಣ ಇವತ್ತು ಅಲ್ಲಿ ಕಡಲ್ಕೊರೆತ ರಕ್ಷಣಾ ಕಾರ್ಯ ನಡೆದಿದೆ.
ಆ ನಿಟ್ಟಿನಲ್ಲಿ ವಿಪರೀತ ಕಡಲ್ಕೊರೆತಕ್ಕೊಳಗಾಗುತ್ತಿರುವ ಸೋಮೇಶ್ವರ, ಉಚ್ಚಿಲ-ಬಟ್ಟಂಪಾಡಿ ಪ್ರದೇಶದಲ್ಲೂ ಶಾಶ್ವತ ರಕ್ಷಣಾ ಕಾರ್ಯ ಆಗಲೇಬೇಕಿದೆ. ಮೊದಲ ಹಂತದ ಕಾಮಗಾರಿ ನಡೆದಿದ್ದರೂ ರಸ್ತೆ ಕಡಲು ಪಾಲಾಗಿದೆ. ಸಮಸ್ಯೆ ಉಲ್ಭಣಗೊಂಡ ಬಳಿಕ ಕಾಮಗಾರಿ ನಡೆಸೋದಕ್ಕಿಂತ ಸಮಸ್ಯೆ ಉದ್ಭವಿಸುವ ಮುನ್ನವೇ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಜಿಲ್ಲಾಧಿಕಾರಿಗಳ ಜತೆಗೆ ಸಮಾಲೋಚಿಸಿದ್ದು ಸ್ಥಳ ಪರಿಶೀಲನೆ ನಡೆಸಿದ್ದೇವೆ ಎಂದರು.
ಕಡಲ್ಕೊರೆತಕ್ಕೆ ಸಂಬಂಧಪಟ್ಟಂತೆ ತುರ್ತು ಕಾಮಗಾರಿ ಮತ್ತು ಶಾಶ್ವತ ಕಾಮಗಾರಿ ಆಗಬೇಕಿದೆ. ಈಗಾಗಲೇ ಎನ್ ಐಟಿಕೆಯ ತಜ್ಞರು ಒಂದು ವರದಿ ಕೊಟ್ಟಿದ್ದಾರೆ. ಇಲ್ಲಿ ಶಾಶ್ವತ ಕಾಮಗಾರಿ ಆಗಬೇಕಾದ ಕಾರಣ ಅದಕ್ಕೆ ಸಂಬಂಧಪಟ್ಟ ತಜ್ಞ ಎಂಜಿನಿಯರ್ ಗಳನ್ನು ಕರೆಸಿ ಅವರು ಕೊಟ್ಟ ವರದಿಯನ್ನು ಸಂಬಂಧಪಟ್ಟ ಇಲಾಖೆ ಹಾಗೂ ಮುಖ್ಯಮಂತ್ರಿಗಳಿಗೆ ಸಲ್ಲಿಸಿ ಮುಂದಿನ ಕ್ರಮ ಕೈಗೊಳ್ಳುವಂತೆ ಆಗ್ರಹಿಸುತ್ತೇನೆ ಎಂದರು.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…