Featured

ಕಡಲ್ಕೊರೆತ ಪ್ರದೇಶಕ್ಕೆ ಸ್ಪೀಕರ್ ಖಾದರ್ ದೌಡು : ಶಾಶ್ವತ ಕಾಮಗಾರಿ ಬಗ್ಗೆ ಸಮಾಲೋಚನೆ – Vishwanews24

ಕಡಲ್ಕೊರೆತ ಪ್ರದೇಶಕ್ಕೆ ಸ್ಪೀಕರ್ ಖಾದರ್ ದೌಡು : ಶಾಶ್ವತ ಕಾಮಗಾರಿ ಬಗ್ಗೆ ಸಮಾಲೋಚನೆ

ಉಳ್ಳಾಲ: ಕಡಲ್ಕೊರೆತಕ್ಕೆ ಒಳಗಾಗುತ್ತಿದ್ದ ಉಚ್ಚಿಲ, ಬಟ್ಟಂಪಾಡಿ, ಸೀ ಗ್ರೌಂಡ್ ಪ್ರದೇಶಗಳಿಗೆ ರಾಜ್ಯ ವಿಧಾನಸಭೆಯ ಸ್ಪೀಕರ್, ಉಳ್ಳಾಲದ ಶಾಸಕ ಯು. ಟಿ. ಖಾದರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಈ ವೇಳೆ ಅವರು ಜಿಲ್ಲಾಧಿಕಾರಿ ರವಿ ಕುಮಾರ್ ಎಮ್.ಆರ್. ಮತ್ತು ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿದರು. ಈ ಹಿಂದೆ ಉಳ್ಳಾಲದ ಕೋಡಿ,ಕೋಟೆಪುರ, ಮೊಗವೀರಪಟ್ಣ, ಸುಭಾಷ್ ನಗರ, ಹಿಲೇರಿಯ ಮೊದಲಾದ ಭಾಗದಲ್ಲಿ ಶಾಶ್ವತವಾದ ಕೆಲಸ ಮಾಡಿದ ಕಾರಣ ಇವತ್ತು ಅಲ್ಲಿ ಕಡಲ್ಕೊರೆತ ರಕ್ಷಣಾ ಕಾರ್ಯ ನಡೆದಿದೆ‌.

ಆ ನಿಟ್ಟಿನಲ್ಲಿ ವಿಪರೀತ ಕಡಲ್ಕೊರೆತಕ್ಕೊಳಗಾಗುತ್ತಿರುವ ಸೋಮೇಶ್ವರ, ಉಚ್ಚಿಲ‌-ಬಟ್ಟಂಪಾಡಿ ಪ್ರದೇಶದಲ್ಲೂ ಶಾಶ್ವತ ರಕ್ಷಣಾ ಕಾರ್ಯ ಆಗಲೇಬೇಕಿದೆ. ಮೊದಲ ಹಂತದ ಕಾಮಗಾರಿ ನಡೆದಿದ್ದರೂ ರಸ್ತೆ ಕಡಲು ಪಾಲಾಗಿದೆ. ಸಮಸ್ಯೆ ಉಲ್ಭಣಗೊಂಡ ಬಳಿಕ ಕಾಮಗಾರಿ ನಡೆಸೋದಕ್ಕಿಂತ ಸಮಸ್ಯೆ ಉದ್ಭವಿಸುವ ಮುನ್ನವೇ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಜಿಲ್ಲಾಧಿಕಾರಿಗಳ ಜತೆಗೆ ಸಮಾಲೋಚಿಸಿದ್ದು ಸ್ಥಳ ಪರಿಶೀಲನೆ ನಡೆಸಿದ್ದೇವೆ ಎಂದರು.

ಕಡಲ್ಕೊರೆತಕ್ಕೆ ಸಂಬಂಧಪಟ್ಟಂತೆ ತುರ್ತು ಕಾಮಗಾರಿ ಮತ್ತು ಶಾಶ್ವತ ಕಾಮಗಾರಿ ಆಗಬೇಕಿದೆ. ಈಗಾಗಲೇ ಎನ್ ಐಟಿಕೆಯ ತಜ್ಞರು ಒಂದು ವರದಿ ಕೊಟ್ಟಿದ್ದಾರೆ. ಇಲ್ಲಿ ಶಾಶ್ವತ ಕಾಮಗಾರಿ ಆಗಬೇಕಾದ ಕಾರಣ ಅದಕ್ಕೆ ಸಂಬಂಧಪಟ್ಟ ತಜ್ಞ ಎಂಜಿನಿಯರ್ ಗಳನ್ನು ಕರೆಸಿ ಅವರು ಕೊಟ್ಟ ವರದಿಯನ್ನು ಸಂಬಂಧಪಟ್ಟ ಇಲಾಖೆ ಹಾಗೂ ಮುಖ್ಯಮಂತ್ರಿಗಳಿಗೆ ಸಲ್ಲಿಸಿ ಮುಂದಿನ ಕ್ರಮ ಕೈಗೊಳ್ಳುವಂತೆ ಆಗ್ರಹಿಸುತ್ತೇನೆ ಎಂದರು.

Vishwa News 24

Recent Posts

ಉಡುಪಿ ಕೃಷ್ಣ ಮಠದಲ್ಲಿ ತಪ್ತಮುದ್ರಾಧಾರಣೆ – vishwanews24

ಉಡುಪಿ ಕೃಷ್ಣ ಮಠದಲ್ಲಿ ತಪ್ತಮುದ್ರಾಧಾರಣೆ ಉಡುಪಿ: ಆಷಾಢ ಶುಕ್ಲ ಪ್ರಥಮ ಏಕಾದಶಿ ಅಂಗವಾಗಿ ಉಡುಪಿ ಜಿಲ್ಲೆಯ ಪ್ರಮುಖ ಮಠಗಳಲ್ಲಿ ತಪ್ತ…

8 hours ago

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ; ಆರೋಪಿಗಾಗಿ ಶೋಧ- vishwanews24

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ನಡೆಸಿದ ಘಟನೆ ನಗರದ ಲಾಲ್ ಬಾಗ್ ಸಿಗ್ನಲ್ ಬಳಿ…

8 hours ago

ಆರು ದಿನಗಳ ನಂತರ ಅಮರನಾಥ ಯಾತ್ರೆ ಪುನರಾರಂಭ -vishwanews24

ಹವಾಮಾನ ವೈಪರೀತ್ಯದಿಂದಾಗಿ ಸ್ಥಗಿತಗೊಂಡಿದ್ದ ಅಮರನಾಥ ಯಾತ್ರೆ ಪುನರಾರಂಭ ಅಮರನಾಥ :ಜಮ್ಮು ಮತ್ತು ಕಾಶ್ಮೀರದಲ್ಲಿ ಕಳೆದ ಆರು ದಿನಗಳಿಂದ ನಿರಂತರ ಮಳೆ,…

9 hours ago

BREAKING NEWS : ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ – vishwanews24

 ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನವದೆಹಲಿ: ನೀಟ್ ಪರೀಕ್ಷಾ ಅಕ್ರಮಗಳ ವಿರುದ್ಧ ದೇಶಾದ್ಯಂತ ವಿದ್ಯಾರ್ಥಿಗಳ ಆಕ್ರೋಶ ಭುಗಿಲೆದ್ದ…

10 hours ago

ಕಾಮನ್‌ವೆಲ್ತ್ ಗೇಮ್ಸ್ 2026 : ಪ್ಯಾರಾ ಪವರ್‌ ಲಿಫ್ಟಿಂಗ್‌ನಲ್ಲಿ ಕಂಚು ಗೆದ್ದ ಝಂದು ಕುಮಾರ್ – vishwanews24

ಕಾಮನ್‌ವೆಲ್ತ್ ಗೇಮ್ಸ್ 2026 : ಭಾರತದ ಪದಕದ ಖಾತೆ ತೆರೆದ ಝಂದು ಕುಮಾರ್‌: ಪ್ಯಾರಾ ಪವರ್‌ಲಿಫ್ಟಿಂಗ್‌ನಲ್ಲಿ ಕಂಚಿನ ಸಾಧನೆ ಗ್ಲಾಸ್ಕೊ…

11 hours ago

ಅಯೋಧ್ಯೆ ಶ್ರೀರಾಮ ಮಂದಿರ ಧಾರ್ಮಿಕ ಸಮಿತಿಯಲ್ಲಿ ಪೇಜಾವರ ಶ್ರೀಗಳಿಗೆ ಸ್ಥಾನ – vishwanews24

ಅಯೋಧ್ಯೆ ಶ್ರೀರಾಮ ಮಂದಿರ ಧಾರ್ಮಿಕ ಸಮಿತಿಯಲ್ಲಿ ಪೇಜಾವರ ಶ್ರೀಗಳಿಗೆ ಸ್ಥಾನ ಅಯೋಧ್ಯೆ: ಶ್ರೀ ರಾಮಮಂದಿರದ ಪೂಜಾ ವಿಧಿವಿಧಾನಗಳು ಹಾಗೂ ಧಾರ್ಮಿಕ…

11 hours ago