Featured

ಕಡಲ ನಗರಿ ಮಂಗಳೂರು ಹಳೆ ಬಂದರಿನಿಂದ ಮಾಲ್ಡೀವ್ಸ್‌ಗೆ ಇಂದು ಮೊದಲ ಸರಕು ಹಡಗು ಪ್ರಯಾಣ -Vishwanews24

ಕಡಲ ನಗರಿ ಮಂಗಳೂರು ಹಳೆ ಬಂದರಿನಿಂದ ಮಾಲ್ಡೀವ್ಸ್‌ಗೆ ಇಂದು ಮೊದಲ ಸರಕು ಹಡಗು ಪ್ರಯಾಣ -Vishwanews24

ಮಂಗಳೂರು,: ಕಡಲ ನಗರಿ ಮಂಗಳೂರಿನ ಹಳೆ ಬಂದರಿನಿಂದ ದ್ವೀಪ ರಾಷ್ಟ್ರ ಮಾಲ್ಡೀವ್ಸ್ ಗೆ ಮೊದಲ ಸರಕು ಹಡಗು ಸೋಮವಾರ ಪ್ರಯಾಣ ಬೆಳೆಸಲಿದೆ.

ಕೃಷಿ, ತೋಟಕ್ಕೆ ಗೊಬ್ಬರವಾಗಿ ಬಳಸಲು ತೆಂಗಿನ ಗೆರಟೆ ಹುಡಿ, ತರಕಾರಿ ಮತ್ತು ಹಣ್ಣು ಹಂಪಲು ಸಾಗಾಟ ಮಾಡಲಿದ್ದು, ರವಿವಾರ ಕ್ರೇನ್‍ಗಳ ಮೂಲಕ ಲೋಡಿಂಗ್ ನಡೆಸಲಾಯಿತು.

ಕ್ಯಾಪ್ಟನ್ ಕಣ್ಣನ್ ನೇತೃತ್ವದಲ್ಲಿ ಸಿಬ್ಬಂದಿಗಳಾದ ಕಾತೋರಾಯನ್, ಹರಿದಾಸ್, ಸಗಾಯಂ, ಶ್ರಿನಿವಾಸನ್, ವಿಘ್ನೇಶ್ ಪ್ರಥಮ ಯಾನದಲ್ಲಿ ತೆರಳುತ್ತಿದಾರೆ. ಲಕ್ಷದ್ವೀಪದ ಕಡಂಬತ್ತ್‍ಕಾರ್‍ಗೆ ಸೇರಿದ ಎಂಎಸ್‍ವಿ ನೂರ್ ಎ ಅಲ್ ಕದರಿ ಹೆಸರಿನ ನೌಕೆಯನ್ನು ಚರಣ್‍ದಾಸ್ ವಿ.ಕರ್ಕೇರ ಬಾಡಿಗೆಗೆ ಪಡೆದುಕೊಂಡು, ಸಾಮಾನು ಸರಂಜಾಮು ಸಾಗಾಟ ಮಾಡುತ್ತಿದ್ದಾರೆ.

ನೌಕೆಯನ್ನು ಮಾಸಿಕ ಐದು ಲಕ್ಷ ರೂ. ಬಾಡಿಗೆಗೆ ಪಡೆದುಕೊಂಡಿದ್ದು, ತಿಂಗಳಿಗೆ ಎರಡು ಟ್ರಿಪ್ ಮಾಡಲಿದೆ. ಸೋಮವಾರ ಬೆಳಗ್ಗೆ ನದಿ ನೀರು ಉಬ್ಬರ ಹೆಚ್ಚಾದಾಗ, ಹೊರಟು, 4-5 ದಿನಗಳಲ್ಲಿ ತಲುಪಿ, ಮಾಲ್ದೀವ್ಸ್ ಜೆಟ್ಟಿಯಲ್ಲಿ ಅನ್‍ಲೋಡ್ ಮಾಡಿ, ಮರಳಿ ಬರಲಿದೆ. ಹೊಸ ಸಾಹಸಕ್ಕೆ ಕೈ ಹಾಕಿದ್ದೇವೆ ಎಂದು ಚರಣ್‌ ದಾಸ್‌ ಹೇಳುತ್ತಾರೆ.

ಕಳೆದ ವರ್ಷ ಒಂದು ನೌಕೆ ಹೋಗಿದ್ದರೂ, ಅದು ಗುರಿ ತಲುಪಿರಲಿಲ್ಲ. ಅದರಲ್ಲಿದ್ದ ಸಾಮಾನು ಸರಂಜಾಮು ಸಮುದ್ರ ಪಾಲಾಗಿತ್ತು. ಈ ವರ್ಷ ಅಕ್ಟೋಬರ್‌ನಲ್ಲಿ ಹೊರಡಬೇಕಿತ್ತು. ಕೋವಿಡ್ ಮತ್ತಿತರ ಕಾರಣಗಳಿಂದ ತಡವಾಗಿದೆ. ಸುಮಾರು 200 ಟನ್ ಸರಕು ಸಾಗಾಟ ಮಾಡಲಾಗುತ್ತಿದೆ ಎನ್ನುತ್ತಾರೆ ಲೋಡಿಂಗ್ ಮಾಡುವ ಮಲ್ಲೂರಿನ ಇಬ್ರಾಹಿಂ ಮತ್ತು ಸತ್ತಾರ್ ಹೇಳಿದರು.

 

Vishwa News 24

Recent Posts

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

15 hours ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

15 hours ago

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

3 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

4 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

4 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

4 days ago