Featured

ಕಡಲ ನಗರಿ ಮಂಗಳೂರು ಹಳೆ ಬಂದರಿನಿಂದ ಮಾಲ್ಡೀವ್ಸ್‌ಗೆ ಇಂದು ಮೊದಲ ಸರಕು ಹಡಗು ಪ್ರಯಾಣ -Vishwanews24

ಕಡಲ ನಗರಿ ಮಂಗಳೂರು ಹಳೆ ಬಂದರಿನಿಂದ ಮಾಲ್ಡೀವ್ಸ್‌ಗೆ ಇಂದು ಮೊದಲ ಸರಕು ಹಡಗು ಪ್ರಯಾಣ -Vishwanews24

ಮಂಗಳೂರು,: ಕಡಲ ನಗರಿ ಮಂಗಳೂರಿನ ಹಳೆ ಬಂದರಿನಿಂದ ದ್ವೀಪ ರಾಷ್ಟ್ರ ಮಾಲ್ಡೀವ್ಸ್ ಗೆ ಮೊದಲ ಸರಕು ಹಡಗು ಸೋಮವಾರ ಪ್ರಯಾಣ ಬೆಳೆಸಲಿದೆ.

ಕೃಷಿ, ತೋಟಕ್ಕೆ ಗೊಬ್ಬರವಾಗಿ ಬಳಸಲು ತೆಂಗಿನ ಗೆರಟೆ ಹುಡಿ, ತರಕಾರಿ ಮತ್ತು ಹಣ್ಣು ಹಂಪಲು ಸಾಗಾಟ ಮಾಡಲಿದ್ದು, ರವಿವಾರ ಕ್ರೇನ್‍ಗಳ ಮೂಲಕ ಲೋಡಿಂಗ್ ನಡೆಸಲಾಯಿತು.

ಕ್ಯಾಪ್ಟನ್ ಕಣ್ಣನ್ ನೇತೃತ್ವದಲ್ಲಿ ಸಿಬ್ಬಂದಿಗಳಾದ ಕಾತೋರಾಯನ್, ಹರಿದಾಸ್, ಸಗಾಯಂ, ಶ್ರಿನಿವಾಸನ್, ವಿಘ್ನೇಶ್ ಪ್ರಥಮ ಯಾನದಲ್ಲಿ ತೆರಳುತ್ತಿದಾರೆ. ಲಕ್ಷದ್ವೀಪದ ಕಡಂಬತ್ತ್‍ಕಾರ್‍ಗೆ ಸೇರಿದ ಎಂಎಸ್‍ವಿ ನೂರ್ ಎ ಅಲ್ ಕದರಿ ಹೆಸರಿನ ನೌಕೆಯನ್ನು ಚರಣ್‍ದಾಸ್ ವಿ.ಕರ್ಕೇರ ಬಾಡಿಗೆಗೆ ಪಡೆದುಕೊಂಡು, ಸಾಮಾನು ಸರಂಜಾಮು ಸಾಗಾಟ ಮಾಡುತ್ತಿದ್ದಾರೆ.

ನೌಕೆಯನ್ನು ಮಾಸಿಕ ಐದು ಲಕ್ಷ ರೂ. ಬಾಡಿಗೆಗೆ ಪಡೆದುಕೊಂಡಿದ್ದು, ತಿಂಗಳಿಗೆ ಎರಡು ಟ್ರಿಪ್ ಮಾಡಲಿದೆ. ಸೋಮವಾರ ಬೆಳಗ್ಗೆ ನದಿ ನೀರು ಉಬ್ಬರ ಹೆಚ್ಚಾದಾಗ, ಹೊರಟು, 4-5 ದಿನಗಳಲ್ಲಿ ತಲುಪಿ, ಮಾಲ್ದೀವ್ಸ್ ಜೆಟ್ಟಿಯಲ್ಲಿ ಅನ್‍ಲೋಡ್ ಮಾಡಿ, ಮರಳಿ ಬರಲಿದೆ. ಹೊಸ ಸಾಹಸಕ್ಕೆ ಕೈ ಹಾಕಿದ್ದೇವೆ ಎಂದು ಚರಣ್‌ ದಾಸ್‌ ಹೇಳುತ್ತಾರೆ.

ಕಳೆದ ವರ್ಷ ಒಂದು ನೌಕೆ ಹೋಗಿದ್ದರೂ, ಅದು ಗುರಿ ತಲುಪಿರಲಿಲ್ಲ. ಅದರಲ್ಲಿದ್ದ ಸಾಮಾನು ಸರಂಜಾಮು ಸಮುದ್ರ ಪಾಲಾಗಿತ್ತು. ಈ ವರ್ಷ ಅಕ್ಟೋಬರ್‌ನಲ್ಲಿ ಹೊರಡಬೇಕಿತ್ತು. ಕೋವಿಡ್ ಮತ್ತಿತರ ಕಾರಣಗಳಿಂದ ತಡವಾಗಿದೆ. ಸುಮಾರು 200 ಟನ್ ಸರಕು ಸಾಗಾಟ ಮಾಡಲಾಗುತ್ತಿದೆ ಎನ್ನುತ್ತಾರೆ ಲೋಡಿಂಗ್ ಮಾಡುವ ಮಲ್ಲೂರಿನ ಇಬ್ರಾಹಿಂ ಮತ್ತು ಸತ್ತಾರ್ ಹೇಳಿದರು.

 

Vishwa News 24

Recent Posts

ಮಹಿಳೆಯರನ್ನು ಸಬಲೀಕರಣ ಮಾಡುವ ಕೆಲಸವನ್ನ ನಮ್ಮ ಸರಕಾರ ಪ್ರಾಮಾಣಿಕವಾಗಿ ಮಾಡುತ್ತಿದೆ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ – vishwanews24

ಗ್ಯಾರಂಟಿ ಯೋಜನೆಗಳಿಂದ ಮಹಿಳಾ ಸಬಲೀಕರಣ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಬೆಂಗಳೂರು: ಮಹಿಳೆಯರನ್ನು ಸಬಲೀಕರಣ ಮಾಡುವ ಕೆಲಸವನ್ನು ನಮ್ಮ ಸರಕಾರ ಪ್ರಾಮಾಣಿಕವಾಗಿ…

16 hours ago

ಒಣಗಿದ ದಾಸವಾಳ ನುಂಗಿ ಆರೂವರೆ ತಿಂಗಳ ಮಗು ಉಸಿರುಗಟ್ಟಿ ಸಾವು – vishwanews24

ಒಣಗಿದ ದಾಸವಾಳ ನುಂಗಿ ಆರೂವರೆ ತಿಂಗಳ ಮಗು ಉಸಿರುಗಟ್ಟಿ ಸಾವು ಮೈಸೂರು: ಒಣಗಿದ ದಾಸವಾಳ ಹೂನುಂಗಿ ಮಗು ಉಸಿರುಗಟ್ಟಿ ಸಾವನ್ನಪ್ಪಿದ…

16 hours ago

ಏ. 2ರಂದು ಕುಂದಾಪುರ ಭಂಡಾರ್‌ಕಾರ್ಸ್ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳ – vishwanews24

ಏ. 2ರಂದು ಕುಂದಾಪುರ ಭಂಡಾರ್‌ಕಾರ್ಸ್ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳ ಉಡುಪಿ : ಜಿಲ್ಲಾಡಳಿತ, ಜಿಪಂ, ಕೌಶಲ್ಯಾಭಿವೃದ್ಧಿ, ಉದ್ಯಮ…

16 hours ago

ಅಡುಗೆ ಅನಿಲದ ಅಭಾವ – ತಾತ್ಕಾಲಿಕವಾಗಿ ಸೌದೆ ಒಲೆ ಬಳಸುವಂತೆ ಸಚಿವ ಕೆ.ಹೆಚ್. ಮುನಿಯಪ್ಪ ಮನವಿ – vishwanews24

ಅಡುಗೆ ಅನಿಲದ ಅಭಾವ - ತಾತ್ಕಾಲಿಕವಾಗಿ ಸೌದೆ ಒಲೆ ಬಳಸುವಂತೆ ಸಚಿವ ಕೆ.ಹೆಚ್. ಮುನಿಯಪ್ಪ ಮನವಿ ಬೆಂಗಳೂರು : ಗಲ್ಫ್…

16 hours ago

ತೊಕ್ಕೊಟ್ಟು : ಆರಿಫ್ ಕೊಲೆ ಪ್ರಕರಣ ; ಆರು ಆರೋಪಿಗಳು ಭಾಗಿ – ಸಿಸಿಬಿ ಎಸಿಪಿ ತಂಡದಿಂದ ಮುಂದಿನ ತನಿಖೆ : ಪೊಲೀಸ್ ಆಯುಕ್ತ – vishwanews24

ತೊಕ್ಕೊಟ್ಟು : ಆರಿಫ್ ಕೊಲೆ ಪ್ರಕರಣ ; ಆರು ಆರೋಪಿಗಳು ಭಾಗಿ - ಸಿಸಿಬಿ ಎಸಿಪಿ ತಂಡದಿಂದ ಮುಂದಿನ ತನಿಖೆ…

16 hours ago

ಕಾಪು : ಇಲಿ ಪಾಷಾಣ ಸೇವಿಸಿ ವ್ಯಕ್ತಿ ಆತ್ಮಹತ್ಯೆ – vishwanews24

ಕಾಪು : ಇಲಿ ಪಾಷಾಣ ಸೇವಿಸಿ ವ್ಯಕ್ತಿ ಆತ್ಮಹತ್ಯೆ ಕಾಪು: ಉಳಿಯಾರಗೋಳಿ ಗ್ರಾಮದ ನೀಲಾಧರ ಬಂಗೇರ (58) ಇಲಿ ಪಾಷಾಣ…

17 hours ago