ಉಡುಪಿ

ಕಡಲ ಮಕ್ಕಳ ಮೊಗದಲ್ಲಿ ಸಂತಸದ ಹೊನಲು.. ಕಡಲ್ಕೊರೆತ, ನದಿ ಕೊರೆತಕ್ಕೆ ಶಾಶ್ವತ ಪರಿಹಾರ

ಕಾಪು: ದಿನಬೆಳಗಾದರೆ ಕಡಲಿನ ಅಲೆಗಳನ್ನು ನೋಡುತ್ತ ಬದುಕಿದವರು ನಾವು. ಮಳೆಗಾಲ ಬಂದರೆ ಸಾಕು ನಾವು ಮನೆ ಬಿಟ್ಟು ಬದುಕಬೇಕಾದ ಪರಿಸ್ಥಿತಿ. ಕಡಲು ಯಾವಾಗ ಪ್ರಕ್ಷುಬ್ಧಗೊಳ್ಳುವುದೋ ಅನ್ನೋ ಭಯ. ಒಪ್ಪತ್ತಿನ ಊಟಕ್ಕೂ ನಾವು ಕಡಲ ಕಸುಬನ್ನು ಅವಲಂಬಿಸುವವರು.ಅಲೆಗಳ ಅಬ್ಬರಕ್ಕೆ ಬ್ರೇಕ್‌ ಹಾಕಲು ಏನಾದರೊಂದು ಮಾಡಿಕೊಡಿ ಅಂತಾ ಹಲವಾರು ವರ್ಷಗಳಿಂದ ಕಾಡಿಬೇಡಿ ದ್ದೇವೆ ಆದ್ರೆ ಪರಿಹಾರ ಮಾತ್ರ ಶೂನ್ಯ. ಹೀಗೆ ಅಳಲನ್ನು ಹೇಳಿಕೊಂಡವರು ಮಟ್ಟು ಪ್ರದೇಶದ ನಿವಾಸಿ ಅಶೋಕ್‌.

ಈ ಭಾಗದ ಜನರಿಗೆ ಮಳೆಗಾಲದಲ್ಲಿ ಕಡಲ ಕೊರೆತದ ಭಯ ಇದ್ದೇ ಇರುತ್ತದೆ. ಕಡಲ ಕಸುಬು ಮಾಡಿಕೊಂಡು ಜೀವನ ಸಾಗಿಸೋ ಇಲ್ಲಿನ ಜನರು ಮುಂಜಾನೆ ಬೆಳಕು ಹರಿಯುವ ಮೊದಲೇ ದುಡಿಮೆ ಆರಂಭಿಸುತ್ತಾರೆ. ಆದರೆ ಕಡಲು ಮನೆ ತನಕ ಬಂದು ಮನೆಯನ್ನು ಆಕ್ರಮಿಸಿಕೊಂಡರೆ ಅನ್ನೋದು ಎಂಬ ಕಡಲವಾಸಿಗಳನ್ನು ಕಾಡುತ್ತಲೇ ಇರುತ್ತದೆ.

ವರ್ಷಂಪ್ರತಿ ಜನಪ್ರತಿನಿಧಿಗಳಿಗೆ ಕಡಲ ಕೊರೆತಕ್ಕೊಂದು ಶಾಶ್ವತ ಪರಿಹಾರ ಒದಗಿಸಿಕೊಡಿ ಅಂತ ಬೇಡಿದಾಗ ಜಿಲ್ಲಾಡಳಿತದೊಂದಿಗೆ  ಸೇರಿಕೊಂಡು ಕಡಲಿಗೆ ಆಹಾರದಂತೆ ಕಲ್ಲು ತಂದು ಸುರಿದು ಕಿಸೆ ತುಂಬಿಸಿಕೊಂಡವರೇ ಹೆಚ್ಚು. ಆದ್ರೆ ಶಾಶ್ವತ ಪರಿಹಾರದ ಬಗ್ಗೆ ಯಾರೂ ಚಿಂತಿಸಿಲ್ಲ. ಈ ಬಾರಿ ನಮ್ಮ ಜನಪ್ರತಿನಿಧಿ ಅನಿಸಿಕೊಂಡ ನಮ್ಮ ಭಾಗದ ಶಾಸಕರು ನಮ್ಮ ಕಷ್ಟವನ್ನು ಅರಿತು ಸ್ಪಂದಿಸಿ ಶಾಶ್ವತ ತಡೆಗೋಡೆ ನಿರ್ಮಾಣಕ್ಕೆ  ಮುಂದಾಗಿ ಕಡಲ ಮಕ್ಕಳ ನೋವಿಗೆ ದನಿಯಾಗಿದ್ದಾರೆ. ನದಿ ತೀರದ ಪ್ರದೇಶದ ಜನರು ಕೂಡ ನದಿ ಕೊರೆತದಿಂದಾಗಿ ಸಮಸ್ಯೆಗೆ ಒಳಗಾಗಿದ್ದು ಇದೀಗ ಈ ಪ್ರದೇಶದಲ್ಲಿ ಸುತ್ತಲೂ ತಡೆಗೋಡೆ ಮತ್ತು ರಸ್ತೆ ನಿರ್ಮಾಣಗೊಂಡು ಜನರಿಗೆ ಬಹಳಷ್ಟು ಅನುಕೂಲವಾಗಿದೆ.

ಈ ಬಾರಿ ಜನಪ್ರತಿನಿಧಿಯೊಬ್ಬರು ಕಡಲಕೊರೆತಕ್ಕೆ ಶಾಶ್ವತ ಪರಿಹಾರ ಕಂಡುಕೊಂಡಿಕೊಂಡಿದ್ದಾರೆ. ಜಪಾನ್‌ ಮಾದರಿಯಲ್ಲಿ ಕಡಲ ಕೊರೆತ ತಡೆಗೋಡೆ ನಿರ್ಮಾಣ ಮಾಡುವ ಮೂಲಕ ಕಡಲ ಮಕ್ಕಳಲ್ಲಿ ನೆಮ್ಮದಿ ಮೂಡಿಸಿದ್ದಾರೆ. ಜಪಾನ್‌ ಮಾದರಿಯ ತಂತ್ರಜ್ಞಾನದಲ್ಲಿ ಶಾಶ್ವತ ತಡೆಗೋಡೆ ನಿರ್ಮಾಣಕಾರ್ಯ ಕಾಪುವಿನ ಮಟ್ಟು ಉದ್ಯಾವರದ ವರೆಗೂ ನಡೆಯುತ್ತಿದೆ.

 

Vishwa News 24

Recent Posts

ಉಡುಪಿ: ಕಾಕ್ರೋಚ್ ಹೆಸರಿನಲ್ಲಿ ಯುವ ಸಮುದಾಯವನ್ನು ಪ್ರಚೋದಿಸುವ ಕೆಲಸ  ನಡೆಯುತ್ತಿದೆ: ಸುನಿಲ್ ಕುಮಾರ್ ಆರೋಪ – vishwanews24

ಉಡುಪಿ: ಕಾಕ್ರೋಚ್’ ಹೆಸರಿನಲ್ಲಿ ಯುವ ಸಮುದಾಯವನ್ನು ಪ್ರಚೋದಿಸುವ ಕೆಲಸ  ನಡೆಯುತ್ತಿದೆ: ಸುನಿಲ್ ಕುಮಾರ್ ಆರೋಪ ಉಡುಪಿ: ಚಳವಳಿಯ ಹೆಸರಿನಲ್ಲಿ ದೇಶದಲ್ಲಿ…

8 hours ago

ಕಾಪು : ಉದ್ಯಮಿ ಸಖೇಂದ್ರ ಬಿ. ಸುವರ್ಣ ಹೃದಯಾಘಾತದಿಂದ ನಿಧನ – vishwanews24

ಕಾಪು : ಉದ್ಯಮಿ ಸಖೇಂದ್ರ ಬಿ. ಸುವರ್ಣ ಹೃದಯಾಘಾತದಿಂದ ನಿಧನ ಕಾಪು : ಕಾಪುವಿನ ಹಿರಿಯ ಉದ್ಯಮಿ, ಧಾರ್ಮಿಕ, ಸಾಮಾಜಿಕ…

8 hours ago

ಜು.29ರಂದು ಕಿನ್ನಿಮುಲ್ಕಿಯಲ್ಲಿ ಕಿದಿಯೂರು ಕ್ರೆಡಿಟ್ ಕೋ-ಆಪರೇಟಿವ್‌ನ ನೂತನ ಶಾಖೆ ಉದ್ಘಾಟನೆ – vishwanews24

ಜು.29ರಂದು ಕಿನ್ನಿಮುಲ್ಕಿಯಲ್ಲಿ ಕಿದಿಯೂರು ಕ್ರೆಡಿಟ್ ಕೋ-ಆಪರೇಟಿವ್‌ನ ನೂತನ ಶಾಖೆ ಉದ್ಘಾಟನೆ ಉಡುಪಿ: ನಗರದ ಕಿನ್ನಿಮುಲ್ಕಿಯ ಶಾಂತಾ ಬಿಲ್ಡಿಂಗ್‌ನಲ್ಲಿ ಕಿದಿಯೂರು ಕ್ರೆಡಿಟ್…

10 hours ago

ಪಡುಬಿದ್ರಿ : ಆ.1ರಂದು ಹೆಜಮಾಡಿ ಟೋಲ್ ವಿರುದ್ದ ಬೃಹತ್ ಹೋರಾಟ: ಪೋಸ್ಟರ್ ಬಿಡುಗಡೆ – vishwanews24

ಪಡುಬಿದ್ರಿ : ಆ.1ರಂದು ಹೆಜಮಾಡಿ ಟೋಲ್ ವಿರುದ್ದ ಬೃಹತ್ ಹೋರಾಟ: ಪೋಸ್ಟರ್ ಬಿಡುಗಡೆ ಪಡುಬಿದ್ರಿ : ಹೆಜಮಾಡಿ ಟೋಲ್ನಲ್ಲಿ ಸ್ಥಳೀಯ…

11 hours ago

ಲಾವಣ್ಯ ಹತ್ಯೆ ಪ್ರಕರಣ : ಆಸ್ಪತ್ರೆಯಿಂದ ಡಿಸ್ಚಾರ್ಜ್ ಬಳಿಕ ಆರೋಪಿ ಪೊಲೀಸ್ ವಶಕ್ಕೆ – vishwanews24

ಲಾವಣ್ಯ ಹತ್ಯೆ ಪ್ರಕರಣ : ಆಸ್ಪತ್ರೆಯಿಂದ ಡಿಸ್ಚಾರ್ಜ್ ಬಳಿಕ ಆರೋಪಿ ಪೊಲೀಸ್ ವಶಕ್ಕೆ ಮಂಗಳೂರು: ಬಿ.ಸಿ.ರೋಡಿನ ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣದಲ್ಲಿ ಜುಲೈ…

11 hours ago

ಮಂಗಳೂರು : ಮೀನುಗಾರ ಮುಖಂಡನ ಕೊಲೆ ಪ್ರಕರಣ: ನಾಲ್ವರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ – vishwanews24

ಮಂಗಳೂರು : ಮೀನುಗಾರ ಮುಖಂಡನ ಕೊಲೆ ಪ್ರಕರಣ: ನಾಲ್ವರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ ಮಂಗಳೂರು : ನಗರ ಹೊರವಲಯದ ಬೈಕಂಪಾಡಿಯ…

11 hours ago