ಕಡಿಮೆ ಮೆಚ್ಚದಲ್ಲಿ ಟಿಕೆಟ್ – ಹವಾಯಿ ಚಪ್ಪಲಿ ಧರಿಸುವವನೂ ವಿಮಾನದಲ್ಲಿ ಪ್ರಯಾಣಿಸ್ಬೇಕು : ಪ್ರಧಾನಿ ಮೋದಿ  – Vishwanews24

Featured, ರಾಜ್ಯ ನ್ಯೂಸ್

ಕಡಿಮೆ ಮೆಚ್ಚದಲ್ಲಿ ಟಿಕೆಟ್ – ಹವಾಯಿ ಚಪ್ಪಲಿ ಧರಿಸುವವನೂ ಕೂಡ ವಿಮಾನಯಾನ ಮಾಡುವಂತಾಗಬೇಕು  : ಪ್ರಧಾನಿ ಮೋದಿ 

ಶಿವಮೊಗ್ಗ: ಹವಾಯಿ ಚಪ್ಪಲಿ ಧರಿಸುವವನೂ ಕೂಡ ವಿಮಾನಯಾನ ಮಾಡುವಂತಾಗಬೇಕು. ಹೀಗಾಗಿ ಕಡಿಮೆ ಮೆಚ್ಚದಲ್ಲಿ ಟಿಕೆಟ್ ಮಾಡಲಾಗುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ಶಿವಮೊಗ್ಗದ ಸೋಗಾನೆಯಲ್ಲಿ ನೂತನ ವಿಮಾನ ನಿಲ್ದಾಣದ ಲೋಕಾರ್ಪಣೆ ಸಮಾರಂಭದಲ್ಲಿ ಮಾತನಾಡಿದ ಅವರು, ಕರ್ನಾಟಕದ ಅಭಿವೃದ್ಧಿ, ಅಭಿವೃದ್ಧಿ ರಥದ ಪಥದಲ್ಲಿ ಸಾಗುತ್ತಿದ್ದು, ಡಬಲ್​ ಇಂಜಿನ್​ ಸರ್ಕಾರದಿಂದ ಅಭಿವೃದ್ಧಿಯ ರಥ ಸಾಗುತ್ತಿದೆ. ವಿಮಾನಯಾನ ಕ್ಷೇತ್ರದಲ್ಲಿ ಭಾರತ ಸಾಕಷ್ಟು ಅಭಿವೃದ್ಧಿ ಹೊಂದಿದೆ ಎಂದರು.

ಮೈಸೂರು :  ನಾಮಕರಣ ಶಾಸ್ತ್ರಕ್ಕೆ ಡೆಕೋರೇಟ್‌ ಮಾಡಿದ್ದ ಗ್ಯಾಸ್‌ ಬಲೂನ್‌ ಸ್ಪೋಟ : ಅಪಾಯದಿಂದ ಮಗು, ವ್ಯಕ್ತಿ ಪಾರು  – Vishwanews24

ಇನ್ನು 2014ರಕ್ಕಿಂತ ಮೊದಲು ಕೇವಲ ದೊಡ್ಡ ನಗರಗಳಿಗೆ ಮಾತ್ರ ವಿಮಾನ ನಿಲ್ದಾಣ ಸೀಮಿತವಾಗಿತ್ತು. ಬಿಜೆಪಿ ಅಧಿಕಾರಕ್ಕೆ ಬಂದ ಮೇಲೆ ಸಣ್ಣಪುಟ್ಟ ನಗರಗಳಲ್ಲಿಯೂ ವಿಮಾಣ ನಿಲ್ದಾಣ ಮಾಡಲಾಗುತ್ತಿದೆ. ಬಿಜೆಪಿ ಸರ್ಕಾರ ಬಡವರ ಕಲ್ಯಾಣಕ್ಕಾಗಿ ಶ್ರಮಿಸುತ್ತಿದೆ. ಬಡವನು ಕೂಡ ವಿಮಾನಯಾನ ಮಾಡುವಂತಾಗಬೇಕು ಎಂದಿದ್ದಾರೆ.

ಶಿವಮೊಗ್ಗ ವಿಮಾನ ನಿಲ್ದಾಣದಿಂದ ಅಭಿವೃದ್ಧಿ ಆಗಲಿದ್ದು, ಶಿವಮೊಗ್ಗ-ಶಿಕಾರಿಪುರ-ರಾಣೆಬೆನ್ನೂರು ಹೊಸ ರೈಲು ಮಾರ್ಗ ನಿರ್ಮಾಣವಾದ್ರೆ ಸಾಕಷ್ಟು ಲಾಭವಾಗಲಿದೆ. ಹಾವೇರಿವರೆಗೂ ಜನರಿಗೆ ಸಂಪರ್ಕ ಸಾಧ್ಯವಾಗುತ್ತದೆ ಎಂದು ಹೇಳಿದ್ದಾರೆ.

ಚುನಾವಣೆ ಹತ್ರ ಬಂದಾಗ ಕರ್ನಾಟಕ ನೆನಪಾಗುತ್ತದೆ : ಮೋದಿ ವಿರುದ್ಧ ದಿನೇಶ್‌ ಗುಂಡೂರಾವ್‌ ವಾಗ್ದಾಳಿ – Vishwanews24

Leave a Reply