Featured

ಕಡೆಗೂ ಬೋನಿಗೆ ಬಿದ್ದ ಚಿರತೆ – ಯಶಸ್ವಿಯಾದ ಅರಣ್ಯ ಇಲಾಖೆ- ನಿಟ್ಟುಸಿರು ಬಿಟ್ಟ ಗ್ರಾಮಸ್ಥರು.vishwanews24

ಗಂಗಾವತಿ: ಕಳೆದ 6-7 ತಿಂಗಳಿಂದ ತಾಲೂಕಿನ ಆನೆಗೊಂದಿ ಹನುಮನಹಳ್ಳಿ, ಜಂಗ್ಲಿ ರಂಗಾಪೂರ ಸುತ್ತಲಿನ‌ ಜನಜಾನುವಾರುಗಳಿಗೆ ತೀವ್ರ ಉಪಟಳ ನೀಡಿದ್ದ ಮತ್ತು ಒರ್ವ ಯುವಕನನ್ನು ಕೊಂದು ಹಲವರಿಗೆ ಕಚ್ಚಿ ಗಾಯಗೊಳಿಸಿದ್ದ ಚಿರತೆಯನ್ನು ಬೋನಿನ ಮೂಲಕ ಸೆರೆ ಹಿಡಿಯುವಲ್ಲಿ ಅರಣ್ಯ ಇಲಾಖೆ ಯಶಸ್ವಿಯಾಗಿದೆ.
ಆನೆಗೊಂದಿ ಆದಿಶಕ್ತಿ ದೇಗುಲದ ಹಿಂಭಾಗದಲ್ಲಿ ಯುವಕನನ್ನು ಕೊಂದು ಹಾಕಿದ್ದ ಚಿರತೆಯನ್ನು ಸೆರೆ ಹಿಡಿಯಲು ಅರಣ್ಯ ಇಲಾಖೆ ಸತತ ಯತ್ನ ನಡೆಸಿತ್ತು. 16 ಕಡೆ ಬೋನುಗಳನ್ನು ಇರಿಸಲಾಗಿತ್ತು. ಡ್ರೋಣ್ ಕ್ಯಾಮರಾ ಮತ್ತು‌ ಸಿಸಿ ಕ್ಯಾಮರಾಗಳನ್ನು ಅಳವಡಿಸಿ ಚಿರತೆಗಳ ಚಲನವಲನಗಳನ್ನು ಗಮನಿಸಲಾಗಿತ್ತು.
ಎರಡು ದಿನಗಳ ಹಿಂದೆ ಸಂಗಾಪೂರ ಶ್ರೀರಂಗದೇವರಾಯಲು ನಗರದಲ್ಲಿ 9 ವರ್ಷದ ಬಾಲಕ ಮೇಲೆ ದಾಳಿ ಮಾಡಿದ್ದ ಚಿರತೆ ತೀವ್ರ ಗಾಯಗೊಳಿಸಿತ್ತು. ಈ ಮಧ್ಯೆ ಚಿರತೆ ಸೆರೆಹಿಡಿದು ಜನರಿಗೆ ರಕ್ಷಣೆ ನೀಡುವಂತೆ ವ್ಯಾಪಕ ಆಗ್ರಹ ವ್ಯಕ್ತವಾದ ಹಿನ್ನೆಲೆಯಲ್ಲಿ ಶಾಸಕ ಪರಣ್ಣ ಮುನವಳ್ಳಿ, ಅರಣ್ಯ ಸಚಿವ ಆನಂದ ಸಿಂಗ್ ರನ್ನು ಸಂಪರ್ಕ ಮಾಡಿ ತಜ್ಞರನ್ನು ಕಳಿಸಿ ಚಿರತೆ ಕರಡಿಗಳನ್ನು ಸೆರೆ ಹಿಡಿಯಲು ಮನವಿ ಮಾಡಿದ್ದರು.

ಗುರುವಾರ ಬಳ್ಳಾರಿ ದರೋಜಿ ಕರಡಿಧಾಮ‌ ಹಾಗೂ ಎಸ್ ವೈ ಎಸ್ ಸ್ವಯಂ ಸೇವಾ ಸಂಸ್ಥೆಯ ತಜ್ಞರು ಆಗಮಿಸಿ ಇನ್ನಷ್ಟು ಸಿಸಿ ಕ್ಯಾಮರಾಗಳು ಮತ್ತು ಚಿರತೆ ಕರಡಿಗಳ ಹೆಜ್ಜೆ ಗುರುತಿಸುವ ಉಪಕರಣಗಳನ್ನು ಇರಿಸಿದ್ದರು. ಇದೀಗ ಚಿರತೆಯು ಬೋನಿಗೆ ಬಿದ್ದಿದ್ದು, ಜನರು ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದಾರೆ.

ಪ್ರಾಣಿಸಂಗ್ರಹಾಲಯಕ್ಕೆ ಚಿರತೆ ರವಾನೆ ಸಾಧ್ಯತೆ: ಆನೆಗೊಂದಿ ಹತ್ತಿರ ಸೆರೆ ಸಿಕ್ಕಿರುವ ಸುಮಾರು 05 ವರ್ಷದ ಚಿರತೆಗೆ ವೈದ್ಯಕೀಯ ಪರೀಕ್ಷೆಗಾಗಿ ಅರವಳಿಕೆ ಚುಚ್ಚುಮದ್ದು ನೀಡಿ ಬೆಟ್ಟದಿಂದ ಕೆಳಗೆ ತಂದು‌ ವೈದ್ಯಕೀಯ ಪರೀಕ್ಷೆ ನಂತರ ಮೇಲಾಧಿಕಾರಿಗಳ ಮಾರ್ಗದರ್ಶನದಲ್ಲಿ ಪ್ರಾಣಿಸಂಗ್ರಹಾಲಯಕ್ಕೆ ಕಳಿಸುವ ಸಾಧ್ಯತೆ ಇದೆ ಎಂದು ವಲಯ ಅರಣ್ಯ ಸಂರಕ್ಷಣಾಧಿಕಾರಿ ಶಿವರಾಜ್ ಮೇಟಿ ತಿಳಿಸಿದ್ದಾರೆ.

Vishwa News 24

Recent Posts

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

1 day ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

1 day ago

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

3 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

4 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

4 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

4 days ago