ಗಂಗಾವತಿ: ಕಳೆದ 6-7 ತಿಂಗಳಿಂದ ತಾಲೂಕಿನ ಆನೆಗೊಂದಿ ಹನುಮನಹಳ್ಳಿ, ಜಂಗ್ಲಿ ರಂಗಾಪೂರ ಸುತ್ತಲಿನ ಜನಜಾನುವಾರುಗಳಿಗೆ ತೀವ್ರ ಉಪಟಳ ನೀಡಿದ್ದ ಮತ್ತು ಒರ್ವ ಯುವಕನನ್ನು ಕೊಂದು ಹಲವರಿಗೆ ಕಚ್ಚಿ ಗಾಯಗೊಳಿಸಿದ್ದ ಚಿರತೆಯನ್ನು ಬೋನಿನ ಮೂಲಕ ಸೆರೆ ಹಿಡಿಯುವಲ್ಲಿ ಅರಣ್ಯ ಇಲಾಖೆ ಯಶಸ್ವಿಯಾಗಿದೆ.
ಆನೆಗೊಂದಿ ಆದಿಶಕ್ತಿ ದೇಗುಲದ ಹಿಂಭಾಗದಲ್ಲಿ ಯುವಕನನ್ನು ಕೊಂದು ಹಾಕಿದ್ದ ಚಿರತೆಯನ್ನು ಸೆರೆ ಹಿಡಿಯಲು ಅರಣ್ಯ ಇಲಾಖೆ ಸತತ ಯತ್ನ ನಡೆಸಿತ್ತು. 16 ಕಡೆ ಬೋನುಗಳನ್ನು ಇರಿಸಲಾಗಿತ್ತು. ಡ್ರೋಣ್ ಕ್ಯಾಮರಾ ಮತ್ತು ಸಿಸಿ ಕ್ಯಾಮರಾಗಳನ್ನು ಅಳವಡಿಸಿ ಚಿರತೆಗಳ ಚಲನವಲನಗಳನ್ನು ಗಮನಿಸಲಾಗಿತ್ತು.
ಎರಡು ದಿನಗಳ ಹಿಂದೆ ಸಂಗಾಪೂರ ಶ್ರೀರಂಗದೇವರಾಯಲು ನಗರದಲ್ಲಿ 9 ವರ್ಷದ ಬಾಲಕ ಮೇಲೆ ದಾಳಿ ಮಾಡಿದ್ದ ಚಿರತೆ ತೀವ್ರ ಗಾಯಗೊಳಿಸಿತ್ತು. ಈ ಮಧ್ಯೆ ಚಿರತೆ ಸೆರೆಹಿಡಿದು ಜನರಿಗೆ ರಕ್ಷಣೆ ನೀಡುವಂತೆ ವ್ಯಾಪಕ ಆಗ್ರಹ ವ್ಯಕ್ತವಾದ ಹಿನ್ನೆಲೆಯಲ್ಲಿ ಶಾಸಕ ಪರಣ್ಣ ಮುನವಳ್ಳಿ, ಅರಣ್ಯ ಸಚಿವ ಆನಂದ ಸಿಂಗ್ ರನ್ನು ಸಂಪರ್ಕ ಮಾಡಿ ತಜ್ಞರನ್ನು ಕಳಿಸಿ ಚಿರತೆ ಕರಡಿಗಳನ್ನು ಸೆರೆ ಹಿಡಿಯಲು ಮನವಿ ಮಾಡಿದ್ದರು.
ಗುರುವಾರ ಬಳ್ಳಾರಿ ದರೋಜಿ ಕರಡಿಧಾಮ ಹಾಗೂ ಎಸ್ ವೈ ಎಸ್ ಸ್ವಯಂ ಸೇವಾ ಸಂಸ್ಥೆಯ ತಜ್ಞರು ಆಗಮಿಸಿ ಇನ್ನಷ್ಟು ಸಿಸಿ ಕ್ಯಾಮರಾಗಳು ಮತ್ತು ಚಿರತೆ ಕರಡಿಗಳ ಹೆಜ್ಜೆ ಗುರುತಿಸುವ ಉಪಕರಣಗಳನ್ನು ಇರಿಸಿದ್ದರು. ಇದೀಗ ಚಿರತೆಯು ಬೋನಿಗೆ ಬಿದ್ದಿದ್ದು, ಜನರು ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದಾರೆ.
ಪ್ರಾಣಿಸಂಗ್ರಹಾಲಯಕ್ಕೆ ಚಿರತೆ ರವಾನೆ ಸಾಧ್ಯತೆ: ಆನೆಗೊಂದಿ ಹತ್ತಿರ ಸೆರೆ ಸಿಕ್ಕಿರುವ ಸುಮಾರು 05 ವರ್ಷದ ಚಿರತೆಗೆ ವೈದ್ಯಕೀಯ ಪರೀಕ್ಷೆಗಾಗಿ ಅರವಳಿಕೆ ಚುಚ್ಚುಮದ್ದು ನೀಡಿ ಬೆಟ್ಟದಿಂದ ಕೆಳಗೆ ತಂದು ವೈದ್ಯಕೀಯ ಪರೀಕ್ಷೆ ನಂತರ ಮೇಲಾಧಿಕಾರಿಗಳ ಮಾರ್ಗದರ್ಶನದಲ್ಲಿ ಪ್ರಾಣಿಸಂಗ್ರಹಾಲಯಕ್ಕೆ ಕಳಿಸುವ ಸಾಧ್ಯತೆ ಇದೆ ಎಂದು ವಲಯ ಅರಣ್ಯ ಸಂರಕ್ಷಣಾಧಿಕಾರಿ ಶಿವರಾಜ್ ಮೇಟಿ ತಿಳಿಸಿದ್ದಾರೆ.
ಉಡುಪಿ: ಬಿಜೆಪಿ ಯುವ ಮೋರ್ಚಾದಿಂದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಗೋಬ್ಯಾಕ್ ಪ್ರತಿಭಟನೆ ಉಡುಪಿ: ಉಡುಪಿ ಜಿಲ್ಲೆಯನ್ನು ರಾಜ್ಯ ಕಾಂಗ್ರೆಸ್…
ಹಿಜಾಬ್ ನಿಷೇಧ ಹಿಂಪಡೆಯುವ ನಿರ್ಧಾರವನ್ನು ಸ್ವಾಗತಿಸಿದ ವಿಮೆನ್ ಇಂಡಿಯಾ ಮೂವ್ಮೆಂಟ್.. ಸುಪ್ರೀಂ ಕೋರ್ಟ್ನಲ್ಲಿ ಅಧಿಕೃತ ಕ್ರಮಗಳನ್ನು ಪೂರ್ಣಗೊಳಿಸಲು ಸರ್ಕಾರಕ್ಕೆ ಮನವಿ…
ಟ್ರ್ಯಾಕ್ಟರ್ - ಲಾರಿ ಅಪಘಾತದಲ್ಲಿ ಏಳು ಮಂದಿ ದುರ್ಮರಣ : ಮೃತರ ಕುಟುಂಬಸ್ಥರಿಗೆ ತಲಾ 5 ಲಕ್ಷ ಪರಿಹಾರ ಘೋಷಿಸಿದ…
ಡಿಕೆಶಿ ಮುಂದಿನ ಸಿಎಂ ಬ್ಯಾನರ್ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪ್ರತಿಕ್ರಿಯೆ ಉಡುಪಿ: ಮುಖ್ಯಮಂತ್ರಿ ಬದಲಾವಣೆ ಹೈಕಮಾಂಡ್ಗೆ ಬಿಟ್ಟ ವಿಚಾರ.…
ನಾನು ಮತ್ತೆ ಹೊಸದಾಗಿ ಪಕ್ಷ ಕಟ್ಟುತ್ತೇನೆ ; ಪಕ್ಷ ಬಿಟ್ಟು ಹೋಗುವವರು ಹೋಗಲಿ : ಮಮತಾ ಬ್ಯಾನರ್ಜಿ ಕೋಲ್ಕತ್ತಾ: ಇತರ…
ಉಡುಪಿ : ಮಲಬಾರ್ ಗೋಲ್ದ್ ನಲ್ಲಿ ಬ್ರಾಂಡ್ ವಾಚ್ಗಳ ವಿಶೇಷ ಪ್ರದರ್ಶನ-ಮಾರಾಟ ಮೇಳಕ್ಕೆ ಚಾಲನೆ ಉಡುಪಿ: ಮಲಬಾರ್ ಗೋಲ್ಡ್ ಅಂಡ್…