Featured

ಕಣದಿಂದ ಹಿಂದೆ ಸರಿಯಲಾರೆ  , ಗೆದ್ದರೂ ಸೋತರೂ ಬಿಜೆಪಿ ಕಾರ್ಯಕರ್ತನಾಗಿಯೇ ಇರುವೆ : ರಘುಪತಿ ಭಟ್‌  – vishwanews24

ಕಣದಿಂದ ಹಿಂದೆ ಸರಿಯಲಾರೆ  , ಗೆದ್ದರೂ ಸೋತರೂ ಬಿಜೆಪಿ ಕಾರ್ಯ ಕರ್ತನಾಗಿಯೇ ಇರುವೆ : ಕೆ. ರಘುಪತಿ ಭಟ್‌

ಉಡುಪಿ: ಕಾರ್ಯಕರ್ತರ ಧ್ವನಿಯಾಗಿ ವಿಧಾನ ಪರಿಷತ್‌ ಚುನಾವಣೆಯಲ್ಲಿ ಸ್ಪರ್ಧಿಸಲಿದ್ದೇನೆ. ಗೆದ್ದ ಮೇಲೆ ನಾನಾಗಿಯೇ ಬಿಜೆಪಿ ಕಚೇರಿಗೆ ಹೋಗುವೆ. ಸೋತರೂ ಬಿಜೆಪಿ ಕಾರ್ಯ ಕರ್ತನಾಗಿಯೇ ಇರುವೆ. ಸಂಘದ ಹಿರಿಯರೂ ಆಯ್ತು ನೋಡೋಣ ಕೆಲಸ ಮಾಡಿ ಎನ್ನುವ ಅನಿವಾರ್ಯ ಸ್ಥಿತಿಯಲ್ಲಿ ಇದ್ದಾರೆ ಎಂದು ನೈಋತ್ಯ ಪದವೀಧರ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಮಾಜಿ ಶಾಸಕ ಬಿಜೆಪಿಯ ಕೆ. ರಘುಪತಿ ಭಟ್‌ ಹೇಳಿದರು.

ತಮ್ಮ ಮನೆಯಲ್ಲಿ ಬುಧವಾರ ನಡೆದ ಹಿತೈಷಿಗಳ ಸಭೆಯಲ್ಲಿ ಮಾತನಾಡಿದ ಅವರು, ಜೀವನದಲ್ಲಿ ಇಂತಹ ದಿನ ಬರಲಿದೆ ಎಂದೂ ಯೋಚಿಸಿರಲಿಲ್ಲ. ಇದು ದುಡುಕಿನ ನಿರ್ಧಾರವಲ್ಲ; ಯೋಚಿಸಿಯೇ ತೆಗೆದುಕೊಂಡಿದ್ದು. ಕಣದಿಂದ ಹಿಂದೆ ಸರಿಯಲಾರೆ ಎಂದರು.

2023ರ ವಿಧಾನಸಭೆ ಚುನಾವಣೆ ಯಲ್ಲಿ ಪಕ್ಷದಿಂದ ಟಿಕೆಟ್‌ ಕೈತಪ್ಪಿದಾಗ ಕಾಂಗ್ರೆಸ್‌ ಅಥವಾ ಪಕ್ಷೇತರರಾಗಿ ಸ್ಪರ್ಧಿಸಲು ಒತ್ತಡ ಇತ್ತು. ಆದರೂ ಪಕ್ಷದ ಅಭ್ಯರ್ಥಿಯ ಪರ ಕೆಲಸ ಮಾಡಿದೆ. ಲೋಕಸಭೆ ಚುನಾವಣೆಯಲ್ಲೂ ಪೂರ್ಣ ತೊಡಗಿಕೊಂಡೆ. ಆದರೆ ಬಿಜೆಪಿ ನಾಯಕರು ನಾನು ಮೂರು ಬಾರಿ ಗೆದ್ದಿರುವ ಮಾಜಿ ಶಾಸಕ ಎಂಬುದನ್ನು ಮರೆತು ಕಚೇರಿಯಲ್ಲಿದ್ದ ನನ್ನ ಭಾವಚಿತ್ರವನ್ನು ತೆಗೆದು ಹಾಕಿದರು. ಕನಿಷ್ಠ ಮನ್ನಣೆ, ಪ್ರೀತಿ, ಗೌರವವನ್ನು ತೋರಿಸಿಲ್ಲ ಎಂದು ದೂರಿದರು.

ವಿಧಾನ ಪರಿಷತ್‌ ಚುನಾವಣೆಗೆ ಸಂಬಂಧಿಸಿದಂತೆ ದಶಕಗಳ ಪದ್ಧತಿ ಮುರಿದಿದ್ದಾರೆ. ನಾನು ಯಾರನ್ನೂ ಸೋಲಿಸಲು ನಿಲ್ಲುತ್ತಿಲ್ಲ. ಜನರ ಸೇವೆ ಮಾಡಲು ಸ್ಪರ್ಧಿಸುತ್ತಿರುವೆ. ಮೋದಿಯವರ ಆದರ್ಶ, ಡಾ| ವಿ.ಎಸ್‌. ಆಚಾರ್ಯರ ಮಾರ್ಗ ದರ್ಶನ ಹಾಗೂ ಕರಂಬಳ್ಳಿ ಸಂಜೀವ ಶೆಟ್ಟಿಯವರು ನೀಡಿದ್ದ ಪಾಠ ಸದಾ ನನ್ನೊಂದಿಗೆ ಇರುತ್ತದೆ ಮತ್ತು ನಾನು ಎಂದಿಗೂ ಬಿಜೆಪಿಗನೇ ಆಗಿರುವೆ ಎಂದರು. ವಾಸುದೇವ್‌ ಭಟ್‌ ಪೆರಂಪಳ್ಳಿ ನಿರೂಪಿಸಿದರು.

Vishwa News 24

Recent Posts

ಉಡುಪಿ : ಆ. 20 ರಂದು ನೇರ ಸಂದರ್ಶನ -vishwanews24

ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…

7 hours ago

ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ -vishwanews24

ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…

7 hours ago

ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ -vishwanews24

ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…

7 hours ago

ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ -vishwanews24

ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಬೇಡಿಕೆಗೆ ಅನುಸಾರ…

7 hours ago

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

2 days ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

2 days ago