ಉಡುಪಿ: ಕಾರ್ಯಕರ್ತರ ಧ್ವನಿಯಾಗಿ ವಿಧಾನ ಪರಿಷತ್ ಚುನಾವಣೆಯಲ್ಲಿ ಸ್ಪರ್ಧಿಸಲಿದ್ದೇನೆ. ಗೆದ್ದ ಮೇಲೆ ನಾನಾಗಿಯೇ ಬಿಜೆಪಿ ಕಚೇರಿಗೆ ಹೋಗುವೆ. ಸೋತರೂ ಬಿಜೆಪಿ ಕಾರ್ಯ ಕರ್ತನಾಗಿಯೇ ಇರುವೆ. ಸಂಘದ ಹಿರಿಯರೂ ಆಯ್ತು ನೋಡೋಣ ಕೆಲಸ ಮಾಡಿ ಎನ್ನುವ ಅನಿವಾರ್ಯ ಸ್ಥಿತಿಯಲ್ಲಿ ಇದ್ದಾರೆ ಎಂದು ನೈಋತ್ಯ ಪದವೀಧರ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಮಾಜಿ ಶಾಸಕ ಬಿಜೆಪಿಯ ಕೆ. ರಘುಪತಿ ಭಟ್ ಹೇಳಿದರು.
ತಮ್ಮ ಮನೆಯಲ್ಲಿ ಬುಧವಾರ ನಡೆದ ಹಿತೈಷಿಗಳ ಸಭೆಯಲ್ಲಿ ಮಾತನಾಡಿದ ಅವರು, ಜೀವನದಲ್ಲಿ ಇಂತಹ ದಿನ ಬರಲಿದೆ ಎಂದೂ ಯೋಚಿಸಿರಲಿಲ್ಲ. ಇದು ದುಡುಕಿನ ನಿರ್ಧಾರವಲ್ಲ; ಯೋಚಿಸಿಯೇ ತೆಗೆದುಕೊಂಡಿದ್ದು. ಕಣದಿಂದ ಹಿಂದೆ ಸರಿಯಲಾರೆ ಎಂದರು.
2023ರ ವಿಧಾನಸಭೆ ಚುನಾವಣೆ ಯಲ್ಲಿ ಪಕ್ಷದಿಂದ ಟಿಕೆಟ್ ಕೈತಪ್ಪಿದಾಗ ಕಾಂಗ್ರೆಸ್ ಅಥವಾ ಪಕ್ಷೇತರರಾಗಿ ಸ್ಪರ್ಧಿಸಲು ಒತ್ತಡ ಇತ್ತು. ಆದರೂ ಪಕ್ಷದ ಅಭ್ಯರ್ಥಿಯ ಪರ ಕೆಲಸ ಮಾಡಿದೆ. ಲೋಕಸಭೆ ಚುನಾವಣೆಯಲ್ಲೂ ಪೂರ್ಣ ತೊಡಗಿಕೊಂಡೆ. ಆದರೆ ಬಿಜೆಪಿ ನಾಯಕರು ನಾನು ಮೂರು ಬಾರಿ ಗೆದ್ದಿರುವ ಮಾಜಿ ಶಾಸಕ ಎಂಬುದನ್ನು ಮರೆತು ಕಚೇರಿಯಲ್ಲಿದ್ದ ನನ್ನ ಭಾವಚಿತ್ರವನ್ನು ತೆಗೆದು ಹಾಕಿದರು. ಕನಿಷ್ಠ ಮನ್ನಣೆ, ಪ್ರೀತಿ, ಗೌರವವನ್ನು ತೋರಿಸಿಲ್ಲ ಎಂದು ದೂರಿದರು.
ವಿಧಾನ ಪರಿಷತ್ ಚುನಾವಣೆಗೆ ಸಂಬಂಧಿಸಿದಂತೆ ದಶಕಗಳ ಪದ್ಧತಿ ಮುರಿದಿದ್ದಾರೆ. ನಾನು ಯಾರನ್ನೂ ಸೋಲಿಸಲು ನಿಲ್ಲುತ್ತಿಲ್ಲ. ಜನರ ಸೇವೆ ಮಾಡಲು ಸ್ಪರ್ಧಿಸುತ್ತಿರುವೆ. ಮೋದಿಯವರ ಆದರ್ಶ, ಡಾ| ವಿ.ಎಸ್. ಆಚಾರ್ಯರ ಮಾರ್ಗ ದರ್ಶನ ಹಾಗೂ ಕರಂಬಳ್ಳಿ ಸಂಜೀವ ಶೆಟ್ಟಿಯವರು ನೀಡಿದ್ದ ಪಾಠ ಸದಾ ನನ್ನೊಂದಿಗೆ ಇರುತ್ತದೆ ಮತ್ತು ನಾನು ಎಂದಿಗೂ ಬಿಜೆಪಿಗನೇ ಆಗಿರುವೆ ಎಂದರು. ವಾಸುದೇವ್ ಭಟ್ ಪೆರಂಪಳ್ಳಿ ನಿರೂಪಿಸಿದರು.
ಉಡುಪಿ: ಬಿಜೆಪಿ ಯುವ ಮೋರ್ಚಾದಿಂದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಗೋಬ್ಯಾಕ್ ಪ್ರತಿಭಟನೆ ಉಡುಪಿ: ಉಡುಪಿ ಜಿಲ್ಲೆಯನ್ನು ರಾಜ್ಯ ಕಾಂಗ್ರೆಸ್…
ಹಿಜಾಬ್ ನಿಷೇಧ ಹಿಂಪಡೆಯುವ ನಿರ್ಧಾರವನ್ನು ಸ್ವಾಗತಿಸಿದ ವಿಮೆನ್ ಇಂಡಿಯಾ ಮೂವ್ಮೆಂಟ್.. ಸುಪ್ರೀಂ ಕೋರ್ಟ್ನಲ್ಲಿ ಅಧಿಕೃತ ಕ್ರಮಗಳನ್ನು ಪೂರ್ಣಗೊಳಿಸಲು ಸರ್ಕಾರಕ್ಕೆ ಮನವಿ…
ಟ್ರ್ಯಾಕ್ಟರ್ - ಲಾರಿ ಅಪಘಾತದಲ್ಲಿ ಏಳು ಮಂದಿ ದುರ್ಮರಣ : ಮೃತರ ಕುಟುಂಬಸ್ಥರಿಗೆ ತಲಾ 5 ಲಕ್ಷ ಪರಿಹಾರ ಘೋಷಿಸಿದ…
ಡಿಕೆಶಿ ಮುಂದಿನ ಸಿಎಂ ಬ್ಯಾನರ್ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪ್ರತಿಕ್ರಿಯೆ ಉಡುಪಿ: ಮುಖ್ಯಮಂತ್ರಿ ಬದಲಾವಣೆ ಹೈಕಮಾಂಡ್ಗೆ ಬಿಟ್ಟ ವಿಚಾರ.…
ನಾನು ಮತ್ತೆ ಹೊಸದಾಗಿ ಪಕ್ಷ ಕಟ್ಟುತ್ತೇನೆ ; ಪಕ್ಷ ಬಿಟ್ಟು ಹೋಗುವವರು ಹೋಗಲಿ : ಮಮತಾ ಬ್ಯಾನರ್ಜಿ ಕೋಲ್ಕತ್ತಾ: ಇತರ…
ಉಡುಪಿ : ಮಲಬಾರ್ ಗೋಲ್ದ್ ನಲ್ಲಿ ಬ್ರಾಂಡ್ ವಾಚ್ಗಳ ವಿಶೇಷ ಪ್ರದರ್ಶನ-ಮಾರಾಟ ಮೇಳಕ್ಕೆ ಚಾಲನೆ ಉಡುಪಿ: ಮಲಬಾರ್ ಗೋಲ್ಡ್ ಅಂಡ್…