ಮುಂಬೈ: ಮುಂಬೈನ ಮನ್ಖುರ್ದ್ ಪ್ರದೇಶದ ಹೌಸಿಂಗ್ ಸೊಸೈಟಿಯಲ್ಲಿ ಶುಕ್ರವಾರ 16 ವರ್ಷದ ಬಾಲಕಿ ಕಣ್ಣಾಮುಚ್ಚಾಲೆ ಆಡುತ್ತಿದ್ದಾಗ ಸಾವನ್ನಪ್ಪಿದ್ದಾಳೆ.
ಮೃತಳನ್ನು ರೇಷ್ಮಾ ಖಾರವಿ ಎಂದು ಗುರುತಿಸಲಾಗಿದೆ. ರೇಷ್ಮಾ ಆಕೆಯ ಸ್ನೇಹಿತರ ಜೊತೆ ಕಣ್ಣಾಮುಚ್ಚಾಲೆ ಆಡುತ್ತಿದ್ದಾಗ ಈ ದುರಂತ ಸಂಭವಿಸಿದೆ.
ಸ್ನೇಹಿತರು ಲಿಫ್ಟ್ ಒಳಗೆ ಅಡಗಿ ಕುಳಿತಿರಬಹುದೆಂದು ಲಿಫ್ಟ್ನಲ್ಲಿದ್ದ ಚಿಕ್ಕ ಕಿಟಕಿಯ ಒಳಗೆ ತನ್ನ ತಲೆ ತೂರಿಸಿ ನೋಡುವಾಗ ಮೇಲಿಂದ ಲಿಫ್ಟ್ ಬಂದಿದೆ. ಈ ವೇಳೆ ಲಿಫ್ಟ್ ರೇಷ್ಮಾಳ ತಲೆಗೆ ಬಡಿದಿದ್ದು, ಆಕೆ ಅಲ್ಲೇ ಸಾವನ್ನಪ್ಪಿದ್ದಾಳೆ.
ಮಂಗಳೂರು: ದ.ಕ. ಜಿಲ್ಲಾಧಿಕಾರಿಯಾಗಿ ರವಿಕುಮಾರ್ ಅಧಿಕಾರ ಸ್ವೀಕಾರ – Vishwanews24
ಈ ಘಟನೆಯಿಂದ ನೊಂದಿರುವ ರೇಷ್ಮಾಳ ಕುಟುಂಬಸ್ಥರು ಹೌಸಿಂಗ್ ಸೊಸೈಟಿಯ ಅಧಿಕಾರಿಗಳು ನಿರ್ಲಕ್ಷ್ಯ ವಹಿಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ. ಅಪಘಾತ ತಪ್ಪಿಸಲು ಹೌಸಿಂಗ್ ಸೊಸೈಟಿ ಅಧಿಕಾರಿಗಳು ಕಿಟಕಿಗೆ ಗಾಜು ಅಳವಡಿಸಬೇಕು ಎಂದು ಮೃತರ ತಂದೆ ರವಿ ಖಾರವಿ ಹೇಳಿದ್ದಾರೆ.
ಈ ಸಂಬಂಧ ಕುಟುಂಬಸ್ಥರು ಪೊಲೀಸರಿಗೆ ದೂರು ನೀಡಿದ್ದು, ಹೌಸಿಂಗ್ ಸೊಸೈಟಿ ಅಧ್ಯಕ್ಷ ಹಾಗೂ ಕಾರ್ಯದರ್ಶಿಯನ್ನು ಬಂಧಿಸಿ ವಿಚಾರಣೆ ನಡೆಸಲಾಗುತ್ತಿದೆ ಎಂದು ಮಂಖುರ್ದ್ ಪೊಲೀಸ್ ಠಾಣೆಯ ಹಿರಿಯ ಪೊಲೀಸ್ ನಿರೀಕ್ಷಕ ಮಹಾದೇವ ಕೋಳಿ ತಿಳಿಸಿದ್ದಾರೆ.
ಗ್ರಾಮಸ್ಥರ ವಿಜೃಂಭಣೆ ಆತ್ಮೀಯತೆ ಅದ್ಧೂರಿ ಸ್ವಾಗತಕ್ಕೆ ಭಾವುಕರಾದ ಗುಡ್ಡ ಪಾಣರ..
ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…
ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…
ಎಸ್ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…
ಅಕ್ರಮ ಎಸ್ಐಆರ್ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್ ಸಂಚು : ಶೋಭಾ ಕರಂದ್ಲಾಜೆ ಗಂಭೀರ…
ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…
ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…