ಮುಂಬೈ : ಕನ್ನಡ ಸೇರಿದಂತೆ ಬಹುಭಾಷೆಗಳಲ್ಲಿ ನಟಿಸಿರುವ ಜಾಸ್ಮಿನ್ ಭಾಸಿನ್ ಇದೀಗ ತೀವ್ರ ಕಣ್ಣಿನ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಈಗಾಗಲೇ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದು ತಮ್ಮ ನೋವು ತೋಡಿಕೊಂಡಿದ್ದಾರೆ. ದೃಷ್ಠಿ ಕಳೆದುಕೊಳ್ಳುವ ಹಂತಕ್ಕೆ ತಲುಪಿದ್ದು, ಚಿಕಿತ್ಸೆ ಮುಂದುವರಿದಿದೆ. ಲೆನ್ಸ್ ಧರಿಸುತ್ತಿದ್ದ ಜಾಸ್ಮಿನ್ ಭಾಸಿನ್ ಸರಿಯಾಗಿ ಧರಿಸದ ಕಾರಣ ನಟಿಯ ಕಾರ್ನಿಯಾ ಗಾಯಗೊಂಡು ಕಣ್ಣು ಊದಿಕೊಂಡಿತ್ತು. ಹೀಗಾಗಿ ದಿಢೀರ್ ಆಸ್ಪತ್ರೆ ದಾಖಲಾಗಿದೆ.
ಜುಲೈ 17 ರಂದು ನಟಿಗೆ ತೀವ್ರ ಕಣ್ಣಿನ ನೋವು ಕಾಣಿಸಿಕೊಂಡಿದೆ. ದೆಹಲಿಯ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಜಾಸ್ಮಿನ್ಗೆ ಕಣ್ಣಿನ ನೋವು ತೀವ್ರಗೊಂಡಿದೆ. ಆದರೆ ಸತತ ಕಾರ್ಯಕ್ರಮಗಳ ಕಾರಣ ವೈದ್ಯರನ್ನು ಬೇಟಿಯಾಗಿಲ್ಲ. ಹೀಗಾಗಿ ನೋವು ಉಲ್ಬಣಿಸಿದೆ. ಹೀಗಾಗಿ ಮುಂಬೈಗೆ ಮರಳಿದ ನಟಿ ದಿಢೀರ್ ವೈದ್ಯರ ಭೇಟಿಯಾಗಿದ್ದಾರೆ.
ತಪಾಸಣೆ ವೈದ್ಯರು ಆಸ್ಪತ್ರೆ ದಾಖಲಾಗಲು ಸೂಚಿಸಿದ್ದಾರೆ. ಸರಿಯಾಗಿ ಲೆನ್ಸ್ ಧರಿಸಿದ ಕಾರಣ ನಟಿ ಕಾರ್ನಿಯಾಗೆ ಹಾನಿಯಾಗಿದೆ. ಇದರಿಂದ ಕಣ್ಣುಗಳು ಊದಿಕೊಂಡು ನೋವು ಕಾಣಿಸಿಕೊಂಡಿದೆ. ತಕ್ಷಣವೇ ನಟಿಗೆ ಶಸ್ತ್ರಚಿಕಿತ್ಸೆ ನಡೆಸಲಾಗಿದೆ. ಸದ್ಯ ಎರಡೂ ಕಣ್ಣುಗಳಿಗೆ ಬ್ಯಾಂಡೇಜ್ ಹಾಕಲಾಗಿದೆ.ಚೇತರಿಕೆಗೆ ಕನಿಷ್ಠ 5 ರಿಂದ 6 ದಿನಗಳ ಅವಶ್ಯಕತೆ ಇದೆ. ಸದ್ಯ ಕಣ್ಣುಗಳಿಗೆ ಬ್ಯಾಂಡೇಜ್ ಹಾಕಿರುವ ಕಾರಣ ಕಣ್ಣು ಕಾಣುತ್ತಿಲ್ಲ ಎಂದು ನಟಿ ಹೇಳಿಕೊಂಡಿದ್ದಾರೆ.
ಜಾಸ್ಮಿನ್ ಕನ್ನಡದಲ್ಲಿ ಕೋಮಲ್ಗೆ ನಾಯಕಿಯಾಗಿ ಕಾಣಿಸಿಕೊಂಡಿದ್ದಾರೆ. ತಮಿಳು, ತೆಲುಗು ಸೇರಿದಂತೆ ಹಲವು ಭಾಷೆಗಳಲ್ಲಿ ಜಾಸ್ಮಿನ್ ಭಾಸಿನ್ ಕಾಣಿಸಿಕೊಂಡಿದ್ದಾರೆ. 2011ರಲ್ಲಿ ತಮಿಳು ಚಿತ್ರ ವಾನಂ ಮೂಲಕ ಸಿನಿ ಕರಿಯರ್ ಆರಂಭಿಸಿದ ಜಾಸ್ಮಿನ್ ಟ್ವಿಂಕಲ್ ತನೇಜಾ, ತೆನೆ ಬನುಶಲಿ ದಿಲ್ ಸೆ ದಿಲ್ ತಕ್ ಸೇರಿದಂತೆ ಹಲವು ಜನಪ್ರಿಯ ಸಿನಿಮಾ ಹಾಗೂ ಸೀರಿಸ್ನಲ್ಲಿ ಕಾಣಿಸಿಕೊಂಡಿದ್ದಾರೆ. ಇನ್ನು ಖತ್ರೋ ಕಿ ಕಿಲಾಡಿ, ಹಿಂದಿ ಬಿಗ್ ಬಾಸ್ 14ರಲ್ಲೂ ಜಾಸ್ಮಿನ್ ಕಾಣಿಸಿಕೊಂಡು ಖ್ಯಾತಿ ಗಳಿಸಿದ್ದಾರೆ.
ಗ್ಯಾರಂಟಿ ಯೋಜನೆಗಳಿಂದ ಮಹಿಳಾ ಸಬಲೀಕರಣ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಬೆಂಗಳೂರು: ಮಹಿಳೆಯರನ್ನು ಸಬಲೀಕರಣ ಮಾಡುವ ಕೆಲಸವನ್ನು ನಮ್ಮ ಸರಕಾರ ಪ್ರಾಮಾಣಿಕವಾಗಿ…
ಒಣಗಿದ ದಾಸವಾಳ ನುಂಗಿ ಆರೂವರೆ ತಿಂಗಳ ಮಗು ಉಸಿರುಗಟ್ಟಿ ಸಾವು ಮೈಸೂರು: ಒಣಗಿದ ದಾಸವಾಳ ಹೂನುಂಗಿ ಮಗು ಉಸಿರುಗಟ್ಟಿ ಸಾವನ್ನಪ್ಪಿದ…
ಏ. 2ರಂದು ಕುಂದಾಪುರ ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳ ಉಡುಪಿ : ಜಿಲ್ಲಾಡಳಿತ, ಜಿಪಂ, ಕೌಶಲ್ಯಾಭಿವೃದ್ಧಿ, ಉದ್ಯಮ…
ಅಡುಗೆ ಅನಿಲದ ಅಭಾವ - ತಾತ್ಕಾಲಿಕವಾಗಿ ಸೌದೆ ಒಲೆ ಬಳಸುವಂತೆ ಸಚಿವ ಕೆ.ಹೆಚ್. ಮುನಿಯಪ್ಪ ಮನವಿ ಬೆಂಗಳೂರು : ಗಲ್ಫ್…
ತೊಕ್ಕೊಟ್ಟು : ಆರಿಫ್ ಕೊಲೆ ಪ್ರಕರಣ ; ಆರು ಆರೋಪಿಗಳು ಭಾಗಿ - ಸಿಸಿಬಿ ಎಸಿಪಿ ತಂಡದಿಂದ ಮುಂದಿನ ತನಿಖೆ…
ಕಾಪು : ಇಲಿ ಪಾಷಾಣ ಸೇವಿಸಿ ವ್ಯಕ್ತಿ ಆತ್ಮಹತ್ಯೆ ಕಾಪು: ಉಳಿಯಾರಗೋಳಿ ಗ್ರಾಮದ ನೀಲಾಧರ ಬಂಗೇರ (58) ಇಲಿ ಪಾಷಾಣ…