Featured

ಕಣ್ಣುಗಳಿಗೆ ಕುತ್ತು ತಂದ ಲೆನ್ಸ್ ; ಕಾರ್ನಿಯಾ ಗಾಯದಿಂದ ಶಸ್ತ್ರಚಿಕಿತ್ಸೆಗೆ ಒಳಗಾದ ನಟಿ – vishwanews24

ಕಣ್ಣುಗಳಿಗೆ ಕುತ್ತು ತಂದ ಲೆನ್ಸ್ ; ಕಾರ್ನಿಯಾ ಗಾಯದಿಂದ ಶಸ್ತ್ರಚಿಕಿತ್ಸೆಗೆ ಒಳಗಾದ ನಟಿ

ಮುಂಬೈ : ಕನ್ನಡ ಸೇರಿದಂತೆ ಬಹುಭಾಷೆಗಳಲ್ಲಿ ನಟಿಸಿರುವ ಜಾಸ್ಮಿನ್ ಭಾಸಿನ್ ಇದೀಗ ತೀವ್ರ ಕಣ್ಣಿನ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಈಗಾಗಲೇ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದು ತಮ್ಮ ನೋವು ತೋಡಿಕೊಂಡಿದ್ದಾರೆ. ದೃಷ್ಠಿ ಕಳೆದುಕೊಳ್ಳುವ ಹಂತಕ್ಕೆ ತಲುಪಿದ್ದು, ಚಿಕಿತ್ಸೆ ಮುಂದುವರಿದಿದೆ. ಲೆನ್ಸ್ ಧರಿಸುತ್ತಿದ್ದ ಜಾಸ್ಮಿನ್ ಭಾಸಿನ್ ಸರಿಯಾಗಿ ಧರಿಸದ ಕಾರಣ ನಟಿಯ ಕಾರ್ನಿಯಾ ಗಾಯಗೊಂಡು ಕಣ್ಣು ಊದಿಕೊಂಡಿತ್ತು. ಹೀಗಾಗಿ ದಿಢೀರ್ ಆಸ್ಪತ್ರೆ ದಾಖಲಾಗಿದೆ.

ಜುಲೈ 17 ರಂದು ನಟಿಗೆ ತೀವ್ರ ಕಣ್ಣಿನ ನೋವು ಕಾಣಿಸಿಕೊಂಡಿದೆ. ದೆಹಲಿಯ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಜಾಸ್ಮಿನ್‌ಗೆ ಕಣ್ಣಿನ ನೋವು ತೀವ್ರಗೊಂಡಿದೆ. ಆದರೆ ಸತತ ಕಾರ್ಯಕ್ರಮಗಳ ಕಾರಣ ವೈದ್ಯರನ್ನು ಬೇಟಿಯಾಗಿಲ್ಲ. ಹೀಗಾಗಿ ನೋವು ಉಲ್ಬಣಿಸಿದೆ. ಹೀಗಾಗಿ ಮುಂಬೈಗೆ ಮರಳಿದ ನಟಿ ದಿಢೀರ್ ವೈದ್ಯರ ಭೇಟಿಯಾಗಿದ್ದಾರೆ.

ತಪಾಸಣೆ ವೈದ್ಯರು ಆಸ್ಪತ್ರೆ ದಾಖಲಾಗಲು ಸೂಚಿಸಿದ್ದಾರೆ. ಸರಿಯಾಗಿ ಲೆನ್ಸ್ ಧರಿಸಿದ ಕಾರಣ ನಟಿ ಕಾರ್ನಿಯಾಗೆ ಹಾನಿಯಾಗಿದೆ. ಇದರಿಂದ ಕಣ್ಣುಗಳು ಊದಿಕೊಂಡು ನೋವು ಕಾಣಿಸಿಕೊಂಡಿದೆ. ತಕ್ಷಣವೇ ನಟಿಗೆ ಶಸ್ತ್ರಚಿಕಿತ್ಸೆ ನಡೆಸಲಾಗಿದೆ. ಸದ್ಯ ಎರಡೂ ಕಣ್ಣುಗಳಿಗೆ ಬ್ಯಾಂಡೇಜ್ ಹಾಕಲಾಗಿದೆ.ಚೇತರಿಕೆಗೆ ಕನಿಷ್ಠ 5 ರಿಂದ 6 ದಿನಗಳ ಅವಶ್ಯಕತೆ ಇದೆ. ಸದ್ಯ ಕಣ್ಣುಗಳಿಗೆ ಬ್ಯಾಂಡೇಜ್ ಹಾಕಿರುವ ಕಾರಣ ಕಣ್ಣು ಕಾಣುತ್ತಿಲ್ಲ ಎಂದು ನಟಿ ಹೇಳಿಕೊಂಡಿದ್ದಾರೆ.

ಜಾಸ್ಮಿನ್ ಕನ್ನಡದಲ್ಲಿ ಕೋಮಲ್‌ಗೆ ನಾಯಕಿಯಾಗಿ ಕಾಣಿಸಿಕೊಂಡಿದ್ದಾರೆ. ತಮಿಳು, ತೆಲುಗು ಸೇರಿದಂತೆ ಹಲವು ಭಾಷೆಗಳಲ್ಲಿ ಜಾಸ್ಮಿನ್ ಭಾಸಿನ್ ಕಾಣಿಸಿಕೊಂಡಿದ್ದಾರೆ. 2011ರಲ್ಲಿ ತಮಿಳು ಚಿತ್ರ ವಾನಂ ಮೂಲಕ ಸಿನಿ ಕರಿಯರ್ ಆರಂಭಿಸಿದ ಜಾಸ್ಮಿನ್ ಟ್ವಿಂಕಲ್ ತನೇಜಾ, ತೆನೆ ಬನುಶಲಿ ದಿಲ್ ಸೆ ದಿಲ್ ತಕ್ ಸೇರಿದಂತೆ ಹಲವು ಜನಪ್ರಿಯ ಸಿನಿಮಾ ಹಾಗೂ ಸೀರಿಸ್‌ನಲ್ಲಿ ಕಾಣಿಸಿಕೊಂಡಿದ್ದಾರೆ. ಇನ್ನು ಖತ್ರೋ ಕಿ ಕಿಲಾಡಿ, ಹಿಂದಿ ಬಿಗ್ ಬಾಸ್ 14ರಲ್ಲೂ ಜಾಸ್ಮಿನ್ ಕಾಣಿಸಿಕೊಂಡು ಖ್ಯಾತಿ ಗಳಿಸಿದ್ದಾರೆ.

 

Vishwa News 24

Recent Posts

ಉಡುಪಿ: ಕಾಕ್ರೋಚ್ ಹೆಸರಿನಲ್ಲಿ ಯುವ ಸಮುದಾಯವನ್ನು ಪ್ರಚೋದಿಸುವ ಕೆಲಸ  ನಡೆಯುತ್ತಿದೆ: ಸುನಿಲ್ ಕುಮಾರ್ ಆರೋಪ – vishwanews24

ಉಡುಪಿ: ಕಾಕ್ರೋಚ್’ ಹೆಸರಿನಲ್ಲಿ ಯುವ ಸಮುದಾಯವನ್ನು ಪ್ರಚೋದಿಸುವ ಕೆಲಸ  ನಡೆಯುತ್ತಿದೆ: ಸುನಿಲ್ ಕುಮಾರ್ ಆರೋಪ ಉಡುಪಿ: ಚಳವಳಿಯ ಹೆಸರಿನಲ್ಲಿ ದೇಶದಲ್ಲಿ…

6 hours ago

ಕಾಪು : ಉದ್ಯಮಿ ಸಖೇಂದ್ರ ಬಿ. ಸುವರ್ಣ ಹೃದಯಾಘಾತದಿಂದ ನಿಧನ – vishwanews24

ಕಾಪು : ಉದ್ಯಮಿ ಸಖೇಂದ್ರ ಬಿ. ಸುವರ್ಣ ಹೃದಯಾಘಾತದಿಂದ ನಿಧನ ಕಾಪು : ಕಾಪುವಿನ ಹಿರಿಯ ಉದ್ಯಮಿ, ಧಾರ್ಮಿಕ, ಸಾಮಾಜಿಕ…

6 hours ago

ಜು.29ರಂದು ಕಿನ್ನಿಮುಲ್ಕಿಯಲ್ಲಿ ಕಿದಿಯೂರು ಕ್ರೆಡಿಟ್ ಕೋ-ಆಪರೇಟಿವ್‌ನ ನೂತನ ಶಾಖೆ ಉದ್ಘಾಟನೆ – vishwanews24

ಜು.29ರಂದು ಕಿನ್ನಿಮುಲ್ಕಿಯಲ್ಲಿ ಕಿದಿಯೂರು ಕ್ರೆಡಿಟ್ ಕೋ-ಆಪರೇಟಿವ್‌ನ ನೂತನ ಶಾಖೆ ಉದ್ಘಾಟನೆ ಉಡುಪಿ: ನಗರದ ಕಿನ್ನಿಮುಲ್ಕಿಯ ಶಾಂತಾ ಬಿಲ್ಡಿಂಗ್‌ನಲ್ಲಿ ಕಿದಿಯೂರು ಕ್ರೆಡಿಟ್…

8 hours ago

ಪಡುಬಿದ್ರಿ : ಆ.1ರಂದು ಹೆಜಮಾಡಿ ಟೋಲ್ ವಿರುದ್ದ ಬೃಹತ್ ಹೋರಾಟ: ಪೋಸ್ಟರ್ ಬಿಡುಗಡೆ – vishwanews24

ಪಡುಬಿದ್ರಿ : ಆ.1ರಂದು ಹೆಜಮಾಡಿ ಟೋಲ್ ವಿರುದ್ದ ಬೃಹತ್ ಹೋರಾಟ: ಪೋಸ್ಟರ್ ಬಿಡುಗಡೆ ಪಡುಬಿದ್ರಿ : ಹೆಜಮಾಡಿ ಟೋಲ್ನಲ್ಲಿ ಸ್ಥಳೀಯ…

8 hours ago

ಲಾವಣ್ಯ ಹತ್ಯೆ ಪ್ರಕರಣ : ಆಸ್ಪತ್ರೆಯಿಂದ ಡಿಸ್ಚಾರ್ಜ್ ಬಳಿಕ ಆರೋಪಿ ಪೊಲೀಸ್ ವಶಕ್ಕೆ – vishwanews24

ಲಾವಣ್ಯ ಹತ್ಯೆ ಪ್ರಕರಣ : ಆಸ್ಪತ್ರೆಯಿಂದ ಡಿಸ್ಚಾರ್ಜ್ ಬಳಿಕ ಆರೋಪಿ ಪೊಲೀಸ್ ವಶಕ್ಕೆ ಮಂಗಳೂರು: ಬಿ.ಸಿ.ರೋಡಿನ ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣದಲ್ಲಿ ಜುಲೈ…

8 hours ago

ಮಂಗಳೂರು : ಮೀನುಗಾರ ಮುಖಂಡನ ಕೊಲೆ ಪ್ರಕರಣ: ನಾಲ್ವರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ – vishwanews24

ಮಂಗಳೂರು : ಮೀನುಗಾರ ಮುಖಂಡನ ಕೊಲೆ ಪ್ರಕರಣ: ನಾಲ್ವರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ ಮಂಗಳೂರು : ನಗರ ಹೊರವಲಯದ ಬೈಕಂಪಾಡಿಯ…

9 hours ago