ಮುಂಬೈ : ಕನ್ನಡ ಸೇರಿದಂತೆ ಬಹುಭಾಷೆಗಳಲ್ಲಿ ನಟಿಸಿರುವ ಜಾಸ್ಮಿನ್ ಭಾಸಿನ್ ಇದೀಗ ತೀವ್ರ ಕಣ್ಣಿನ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಈಗಾಗಲೇ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದು ತಮ್ಮ ನೋವು ತೋಡಿಕೊಂಡಿದ್ದಾರೆ. ದೃಷ್ಠಿ ಕಳೆದುಕೊಳ್ಳುವ ಹಂತಕ್ಕೆ ತಲುಪಿದ್ದು, ಚಿಕಿತ್ಸೆ ಮುಂದುವರಿದಿದೆ. ಲೆನ್ಸ್ ಧರಿಸುತ್ತಿದ್ದ ಜಾಸ್ಮಿನ್ ಭಾಸಿನ್ ಸರಿಯಾಗಿ ಧರಿಸದ ಕಾರಣ ನಟಿಯ ಕಾರ್ನಿಯಾ ಗಾಯಗೊಂಡು ಕಣ್ಣು ಊದಿಕೊಂಡಿತ್ತು. ಹೀಗಾಗಿ ದಿಢೀರ್ ಆಸ್ಪತ್ರೆ ದಾಖಲಾಗಿದೆ.
ಜುಲೈ 17 ರಂದು ನಟಿಗೆ ತೀವ್ರ ಕಣ್ಣಿನ ನೋವು ಕಾಣಿಸಿಕೊಂಡಿದೆ. ದೆಹಲಿಯ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಜಾಸ್ಮಿನ್ಗೆ ಕಣ್ಣಿನ ನೋವು ತೀವ್ರಗೊಂಡಿದೆ. ಆದರೆ ಸತತ ಕಾರ್ಯಕ್ರಮಗಳ ಕಾರಣ ವೈದ್ಯರನ್ನು ಬೇಟಿಯಾಗಿಲ್ಲ. ಹೀಗಾಗಿ ನೋವು ಉಲ್ಬಣಿಸಿದೆ. ಹೀಗಾಗಿ ಮುಂಬೈಗೆ ಮರಳಿದ ನಟಿ ದಿಢೀರ್ ವೈದ್ಯರ ಭೇಟಿಯಾಗಿದ್ದಾರೆ.
ತಪಾಸಣೆ ವೈದ್ಯರು ಆಸ್ಪತ್ರೆ ದಾಖಲಾಗಲು ಸೂಚಿಸಿದ್ದಾರೆ. ಸರಿಯಾಗಿ ಲೆನ್ಸ್ ಧರಿಸಿದ ಕಾರಣ ನಟಿ ಕಾರ್ನಿಯಾಗೆ ಹಾನಿಯಾಗಿದೆ. ಇದರಿಂದ ಕಣ್ಣುಗಳು ಊದಿಕೊಂಡು ನೋವು ಕಾಣಿಸಿಕೊಂಡಿದೆ. ತಕ್ಷಣವೇ ನಟಿಗೆ ಶಸ್ತ್ರಚಿಕಿತ್ಸೆ ನಡೆಸಲಾಗಿದೆ. ಸದ್ಯ ಎರಡೂ ಕಣ್ಣುಗಳಿಗೆ ಬ್ಯಾಂಡೇಜ್ ಹಾಕಲಾಗಿದೆ.ಚೇತರಿಕೆಗೆ ಕನಿಷ್ಠ 5 ರಿಂದ 6 ದಿನಗಳ ಅವಶ್ಯಕತೆ ಇದೆ. ಸದ್ಯ ಕಣ್ಣುಗಳಿಗೆ ಬ್ಯಾಂಡೇಜ್ ಹಾಕಿರುವ ಕಾರಣ ಕಣ್ಣು ಕಾಣುತ್ತಿಲ್ಲ ಎಂದು ನಟಿ ಹೇಳಿಕೊಂಡಿದ್ದಾರೆ.
ಜಾಸ್ಮಿನ್ ಕನ್ನಡದಲ್ಲಿ ಕೋಮಲ್ಗೆ ನಾಯಕಿಯಾಗಿ ಕಾಣಿಸಿಕೊಂಡಿದ್ದಾರೆ. ತಮಿಳು, ತೆಲುಗು ಸೇರಿದಂತೆ ಹಲವು ಭಾಷೆಗಳಲ್ಲಿ ಜಾಸ್ಮಿನ್ ಭಾಸಿನ್ ಕಾಣಿಸಿಕೊಂಡಿದ್ದಾರೆ. 2011ರಲ್ಲಿ ತಮಿಳು ಚಿತ್ರ ವಾನಂ ಮೂಲಕ ಸಿನಿ ಕರಿಯರ್ ಆರಂಭಿಸಿದ ಜಾಸ್ಮಿನ್ ಟ್ವಿಂಕಲ್ ತನೇಜಾ, ತೆನೆ ಬನುಶಲಿ ದಿಲ್ ಸೆ ದಿಲ್ ತಕ್ ಸೇರಿದಂತೆ ಹಲವು ಜನಪ್ರಿಯ ಸಿನಿಮಾ ಹಾಗೂ ಸೀರಿಸ್ನಲ್ಲಿ ಕಾಣಿಸಿಕೊಂಡಿದ್ದಾರೆ. ಇನ್ನು ಖತ್ರೋ ಕಿ ಕಿಲಾಡಿ, ಹಿಂದಿ ಬಿಗ್ ಬಾಸ್ 14ರಲ್ಲೂ ಜಾಸ್ಮಿನ್ ಕಾಣಿಸಿಕೊಂಡು ಖ್ಯಾತಿ ಗಳಿಸಿದ್ದಾರೆ.
ಅಂತಾರಾಷ್ಟ್ರೀಯ ಕ್ರಿಕೆಟ್ಗೆ ವಿದಾಯ ಹೇಳಿದ ಕಿವೀಸ್ ಲೆಜೆಂಡ್ ಕೇನ್ ವಿಲಿಯಮ್ಸನ್ ನ್ಯೂಜಿಲೆಂಡ್ನ ಮಾಜಿ ನಾಯಕ ಕೇನ್ ವಿಲಿಯಮ್ಸನ್ ಅಂತರರಾಷ್ಟ್ರೀಯ ಕ್ರಿಕೆಟ್ಗೆ…
ಕೊಲ್ಲೂರು ಮೂಕಾಂಬಿಕೆಗೆ 1.6 ಕೆಜಿ ತೂಕದ ಬೆಳ್ಳಿ ಖಡ್ಗ ಅರ್ಪಿಸಿದ ತಮಿಳುನಾಡು ಸಿಎಂ ವಿಜಯ್ ಉಡುಪಿ: ತಮಿಳುನಾಡಿನ ಮುಖ್ಯಮಂತ್ರಿಯಾದ ಬಳಿಕ…
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ : ಸಿದ್ದರಾಮಯ್ಯ ಸ್ಪಷ್ಟನೆ ಬೆಂಗಳೂರು: ಕರ್ನಾಟಕದ ಹಿಂದುಳಿದ ವರ್ಗಗಳ ಇಲಾಖೆಯಿಂದ ಅನುದಾನ…
ಧರ್ಮಸ್ಥಳ ವಿಚಾರದಲ್ಲಿ ಸನ್ನಿಧಿಗೆ ಕಳಂಕ ತರುವ ಬಹಳ ದೊಡ್ಡ ಷಡ್ಯಂತ್ರ : ವಿಜಯೇಂದ್ರ ಆರೋಪ ಬೆಂಗಳೂರು: ಧರ್ಮಸ್ಥಳ ಶ್ರೀ ಮಂಜುನಾಥೇಶ್ವರ ಸ್ವಾಮಿಯ…
ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಆಗಮಿಸಿದ ವಿಜಯ್ ಕೊಲ್ಲೂರು : ತಮಿಳುನಾಡು ಮುಖ್ಯಮಂತ್ರಿ ವಿಜಯ್ ಅವರು ಇಂದು ಕೊಲ್ಲೂರು ಶ್ರೀ…
ಛಾಯಾಗ್ರಾಹಕ ಅನೀಶ್ ಕಾಪು ಅವರಿಗೆ ಕರ್ನಾಟಕ ಛಾಯಾರತ್ನ ಪ್ರಶಸ್ತಿ ಪ್ರಧಾನ ಸನ್ನಿಧಿ ಸ್ಟುಡಿಯೋ ಶ್ರೀಯುತ ಅನೀಶ್ ಕಾಪು ಇವರು ಫೋಟೋಗ್ರಫಿ…