ತಿರುವನಂತಪುರಂ: 18 ತಿಂಗಳ ಮಗುವಿಗೆ ವೈದ್ಯರು ತುಟಿಯ ಶಸ್ತ್ರಚಿಕತ್ಸೆಗಾಗಿ ಅನಸ್ತೇಶಿಯಾ ನೀಡಿದ ನಂತರ ಮಗು ಪ್ರಜ್ಞೆ ಕಳೆದುಕೊಂಡು ಸಾವನ್ನಪ್ಪಿರುವ ಘಟನೆ ಕೇರಳದ ಕಣ್ಣೂರು ಆಸ್ಪತ್ರೆಯಲ್ಲಿ ನಡೆದಿರುವುದಾಗಿ ವರದಿ ತಿಳಿಸಿದೆ.
ಕಣ್ಣೂರಿನ ಎರಾಮಮ್-ಕುತ್ತೂರು ನಿವಾಸಿಗಳಾದ ಟಿ ಸೂರಜ್ ಮತ್ತು ವಿಜಿಶಾ ದಂಪತಿಯ ಏಕೈಕ ಪುತ್ರ ದೇವಾಂಶ್ ಶೌರ್ಯ ಜುಲೈ 5 ರಂದು ಮನೆಯ ಹೊರಗೆ ಆಟವಾಡುತ್ತಿದ್ದಾಗ ಬಿದ್ದು ತುಟಿ ಸೀಳು ಬಿಟ್ಟಿತ್ತು. ಪೋಷಕರು ಮಗುವನ್ನು ತಕ್ಷಣವೇ ಮತಾಮಂಗಲಂ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆದೊಯ್ದು ಪ್ರಥಮ ಚಕಿತ್ಸೆ ಕೊಡಿಸಿದ್ದರು.
ನಂತರ ಮಗುವನ್ನು ಪಯ್ಯನ್ನೂರು ಬೇಬಿ ಮೆಮೊರಿಯಲ್ ಆಸ್ಪತ್ರೆಗೆ ದಾಖಲಿಸಿದ್ದರು. ಅಲ್ಲಿ ಮಗುವಿಗೆ ಅನಸ್ತೇಶಿಯಾ ನೀಡಿ ಶಸ್ತ್ರಕ್ರಿಯೆ ನಡೆಸಿ ಹೊಲಿಗೆ ಹಾಕಿದ್ದು, ನಂತರ ಮಗು ಪ್ರಜ್ಞೆ ಕಳೆದುಕೊಂಡಿರುವುದಾಗಿ ಪೋಷಕರು ಆರೋಪಿಸಿದ್ದಾರೆ.
ಈ ಘಟನೆ ನಂತರ ಪೋಷಕರು ಮಗುವನ್ನು ಕಣ್ಣೂರು ಬೇಬಿ ಮೆಮೊರಿಯಲ್ ಆಸ್ಪತ್ರೆಗೆ ದಾಖಲಿಸಿದ್ದು, ಅಲ್ಲಿ ಶುಕ್ರವಾರ (ಜು.10) ರಾತ್ರಿ 9ಗಂಟೆಗೆ ಮಗು ಕೊನೆಯುಸಿರೆಳೆದಿರುವುದಾಗಿ ವರದಿ ವಿವರಿಸಿದೆ.
ಕಣ್ಣೂರು ಆಸ್ಪತ್ರೆಯ ವೈದ್ಯೆ ಅಂಜಲಿ ಪೊದುವಾಳ್ ನಿರ್ಲಕ್ಷ್ಯದಿಂದಲೇ ಮಗು ಸಾವನ್ನಪ್ಪಿರುವುದಾಗಿ ಮಗುವಿನ ಪೋಷಕರು ದೂರು ದಾಖಲಿಸಿದ್ದಾರೆ. ಆದರೆ ವೈದ್ಯರ ಪ್ರಕಾರ ಮಗು ಹೃದಯ ಸ್ತಂಭನದಿಂದ ಸಾವನ್ನಪ್ಪಿರುವುದಾಗಿ ಸಮಜಾಯಿಷಿ ನೀಡಿದ್ದಾರೆ. ವೈದ್ಯೆ ಅಂಜಲಿ ವಿರುದ್ಧ ಭಾರತೀಯ ನ್ಯಾಯ ಸಂಹಿತೆ ಕಲಂ 125 ಅಡಿ ಪ್ರಕರಣ ದಾಖಲಿಸಿಕೊಂಡಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
ವಿಟ್ಲ: ಕಾರು ಮತ್ತು ದ್ವಿಚಕ್ರ ವಾಹನ ಭೀಕರ ಅಪಘಾತ; ಸವಾರ ಮೃತ್ಯು ವಿಟ್ಲ: ಮಿತ್ತೂರು ಸಮೀಪದ ಪರ್ಲೋಟು ಎಂಬಲ್ಲಿ ಸಂಭವಿಸಿದ…
ಉಡುಪಿ: ಸೆ. 4ರಂದು ಶ್ರೀಕೃಷ್ಣ ಜನ್ಮಾಷ್ಟಮಿ ; ಸೆ.5ರಂದು ವಿಟ್ಲಪಿಂಡಿ ಉತ್ಸವ ಉಡುಪಿ: ಉಡುಪಿ ಶ್ರೀಕೃಷ್ಣಮಠ ಪರ್ಯಾಯ ಶಿರೂರು ಮಠದ…
ರೇಣುಕಾಸ್ವಾಮಿ ಕೊಲೆ ಪ್ರಕರಣ : ಪ್ರದೋಷ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್ ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ…
ಜವಾಬ್ದಾರಿಗಳನ್ನು ಹೊಸ ಪೀಳಿಗೆಗೆ ಹಸ್ತಾಂತರಿಸುವ ಸಮಯ ಬಂದಿದೆ : ನಿತಿನ್ ಗಡ್ಕರಿ ಮುಂಬೈ: ಈ ಹಿಂದೆ ಮಾಡುತ್ತಿದ್ದಷ್ಟು ಕೆಲಸವನ್ನು ಇನ್ನು…
ಹಬ್ಬಗಳ ಹಿನ್ನೆಲೆ : ದಕ್ಷಿಣ ಕನ್ನಡ ಪೊಲೀಸರ ಕಟ್ಟುನಿಟ್ಟಿನ ಮಾರ್ಗಸೂಚಿ ಬಿಡುಗಡೆ ರಾತ್ರಿ 11:30 ಗಂಟೆಯ ನಂತರ ಮೆರವಣಿಗೆ ,…
ಸೆ. 1 ರಿಂದ 10 ರವರೆಗೆ ಬೃಹತ್ ಪಾದಯಾತ್ರೆ : ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಬೆಂಗಳೂರು : ರಾಜ್ಯ ಸರ್ಕಾರದ…