ದೋಹಾ : ಕತಾರ್ ನ ಮರೂನಾ ಬೀಚ್ ನಲ್ಲಿ ವಾರಾಂತ್ಯದ ವಿಹಾರಕ್ಕಾಗಿ ತೆರಳಿದ ಭಾರತೀಯ ಮೂಲದ ಮೂವರು ಸಮುದ್ರಪಾಲಾದ ದುರ್ಘಟನೆ ಶುಕ್ರವಾರ ನಡೆದಿದೆ.
ನೀರುಪಾಲಾದವರು ತಮಿಳುನಾಡು ಮೂಲದ ಬಾಲಾಜಿ ಬಲಗೂರು (38),ಪುತ್ರ ರಕ್ಷಣ್ (10),ನೆರೆಮನೆಯ ವರ್ಷಿಣಿ ವೈದ್ಯನಾಥನ್ (12) ಎಂದು ತಿಳಿದುಬಂದಿದೆ.
ಎರಡು ಕುಟುಂಬಗಳು ಒಟ್ಟಾಗಿ ಬೀಚ್ ಗೆ ವಿಹಾರಕ್ಕೆಂದು ತೆರಳಿದ ವೇಳೆ ಭಾರಿ ಅಲೆ ಅಪ್ಪಳಿಸಿ ಮೂವರು ನೀರುಪಾಲಾಗಿದ್ದಾರೆ ಎಂದು ಬಾಲಾಜಿ ಅವರ ಸಂಬಂಧಿ ಮಾಧ್ಯಮಗಳಿಗೆ ತಿಳಿಸಿದ್ದಾರೆ.
ಬಾಲಾಜಿ ಅವರು ಕುಂಭಕೋಣಂ ಜಿಲ್ಲೆಯವರಾಗಿದ್ದು, ಕೆಇಒ ಇಂಟರ್ನ್ಯಾಷನಲ್ ಕನ್ಸಲ್ಟೆಂಟ್ಸ್ ನಲ್ಲಿ ಹಿರಿಯ ಎಲೆಕ್ಟ್ರಿಕಲ್ ಇಂಜಿನಿಯರ್ ಆಗಿ ಕೆಲಸ ಮಾಡುತ್ತಿದ್ದರು. ವರ್ಷಿಣಿ ಅವರ ಕುಟುಂಬ ಚೆನ್ನೈ ಮೂಲದ್ದು ಎಂದು ತಿಳಿದು ಬಂದಿದೆ.
ಮೂವರ ಮೃತ ದೇಹಗಳನ್ನು ತರುವ ವ್ಯವಸ್ಥೆ ಮಾಡಲಾಗಿದ್ದು, ತಮಿಳುನಾಡಿನಲ್ಲಿ ಅಂತ್ಯಕ್ರಿಯೆ ನಡೆಯಲಿದೆ ಎಂದು ತಿಳಿದು ಬಂದಿದೆ.
ಶಾಸಕ ಗೂಳಿಹಟ್ಟಿ ಶೇಖರ್ ತಾಯಿ ಸೇರಿ 8 ಜನರು ಕ್ರೈಸ್ತ ಧರ್ಮದಿಂದ ಸ್ವಧರ್ಮಕ್ಕೆ ವಾಪಸ್.. Vishwanews24
ಉಡುಪಿ: ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ, ವಂಚನೆ ಪ್ರಕರಣ: ಪೋಕ್ಸೋ ಕಾಯಿದೆಯಡಿ ಇಬ್ಬರ ಬಂಧನ ಉಡುಪಿ: ಅಪ್ರಾಪ್ತ ಬಾಲಕಿಯೊಬ್ಬಳನ್ನು ಪ್ರೀತಿಯ…
ಹೆಜಮಾಡಿ ಕಾಂಗ್ರೆಸ್ ಗೆ ಭರವಸೆ ನಾಯಕ : ಪ್ರಭೋದ್ ಚಂದ್ರ ಹೆಜಮಾಡಿ ಕಾಪು: ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ…
ಉಡುಪಿ: ಟಯರ್ ಸ್ಫೋಟಗೊಂಡು ಮೀನು ಸಾಗಾಟದ ಲಾರಿ ಪಲ್ಟಿ ಉಡುಪಿ: ಉಡುಪಿಯಿಂದ ಕುಂದಾಪುರ ಕಡೆಗೆ ಸಾಗುತ್ತಿದ್ದ ಮೀನು ಸಾಗಾಟದ ಲಾರಿಯೊಂದು…
ಸತತ 4ನೇ ಬಾರಿ CNG ದರ ಏರಿಕೆ: ಪ್ರತಿ ಕೆಜಿಗೆ 2 ರೂ. ಹೆಚ್ಚಳ ನವದೆಹಲಿ: ಪೆಟ್ರೋಲ್, ಡೀಸೆಲ್ ಬಳಿಕ…
ದುಬೈನಲ್ಲಿ ರಸ್ತೆ ಅಪಘಾತ : ಕಿನ್ನಿಗೋಳಿಯ ಯುವತಿ ಸಾವು ಮಂಗಳೂರು: ದುಬೈನಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು, ಕಳೆದ ಕೆಲವು…
ಬಿಜೆಪಿ ಸಂಘಪರಿವಾರವು ದೇಶದ ಕಾನೂನಿಗೆ ವಿರುದ್ಧವಾಗಿದೆ: ರಿಯಾಝ್ ಫರಂಗಿಪೇಟೆ ಗಲಭೆಕೋರರ ವಿರುದ್ಧದ ಪ್ರಕರಣ ಹಿಂಪಡೆದ ಕ್ರಮಕ್ಕೆ SDPI ತೀವ್ರ ವಿರೋಧ…