ಕತಾರ್: ಕತಾರ್ ನ ರಾಜಧಾನಿ ದೋಹಾದಲ್ಲಿ ದಕ್ಷಿಣ ಭಾರತದ 8ನೇ ಅಂತರಾಷ್ಟ್ರೀಯ ವರ್ಣರಂಜಿತ ಸಮಾರಂಭ ನಡೆದಿದ್ದು 2019ರ ಸೈಮಾ ಪ್ರಶಸ್ತಿ ಘೋಷಣೆಯಾಗಿದೆ.
ಕೆಜಿಎಫ್ ಚಿತ್ರಕ್ಕೆ ಅತ್ಯುತ್ತಮ ನಟ ಪ್ರಶಸ್ತಿ ಗೆದ್ದುಕೊಂಡ ಯಶ್, ಕನ್ನಡ ಚಿತ್ರವೊಂದು ದೇಶದಾದ್ಯಂತ ಸುದ್ದಿ ಮಾಡಿದ್ದಕ್ಕೆ ಸಂಭ್ರಮಿಸಿದರು. ಕೆಜಿಎಫ್ ಚಿತ್ರಕ್ಕೆ ಅತ್ಯುತ್ತಮ ಸಂಗೀತ ನಿರ್ದೇಶನ ಪ್ರಶಸ್ತಿಯನ್ನು ರವಿ ಬಸ್ರೂರ್ ಸ್ವೀಕರಿಸಿದರೆ, ಭುವನ್ ಗೌಡ ಅತ್ಯುತ್ತಮ ಛಾಯಾಗ್ರಾಹಕ ಪ್ರಶಸ್ತಿ ಗೆದ್ದರು. ಕೆಜಿಎಫ್ ಚಿತ್ರದ “ಸಲಾಂ ರಾಖಿ ಭಾಯ್” ಚಿತ್ರದ ಸಮೂಹಗೀತೆಗಾಗಿ ವಿಜಯಪ್ರಕಾಶ್ ಮತ್ತಿತರರು ಪ್ರಶಸ್ತಿ ಪಡೆದರು.
ಟಗರು ಚಿತ್ರದ ಹಿನ್ನೆಲೆ ಗಾಯನಕ್ಕಾಗಿ ಅನುರಾಧಾ ಭಟ್, ಚೊಚ್ಚಲ ಚಿತ್ರದ ನಟನೆಗಾಗಿ ಡ್ಯಾನಿಶ್ ಸೇಠ್, ಅತ್ಯುತ್ತಮ ಚೊಚ್ಚಲ ಚಿತ್ರ ನಿರ್ದೇಶನಕ್ಕಾಗಿ “ಅಯೋಗ್ಯ” ಚಿತ್ರದ ಮಹೇಶ್ ಕುಮಾರ್ ಮತ್ತು ಅಯೋಗ್ಯ ಚಿತ್ರದ ಗೀತರಚೆನಗಾಗಿ ಚೇತನ್ ಕುಮಾರ್ ಪ್ರಶಸ್ತಿ ಗೆದ್ದು ವೇದಿಕೆಯಲ್ಲಿ ಸಂಭ್ರಮಿಸಿದರು. “ಆ ಕರಾಳ ರಾತ್ರಿ” ಚಿತ್ರದ ನಟನೆಗಾಗಿ ಅನುಪಮಾ ಗೌಡ ಪ್ರಶಸ್ತಿ ಗೆದ್ದರು.
ಅತ್ಯುತ್ತಮ ಸಿನಿಮಾ ಕೆಜಿಎಫ್
ಅತ್ಯುತ್ತಮ ನಟ ಯಶ್ (ಕೆಜಿಎಫ್)
ಅತ್ಯುತ್ತಮ ನಟಿ ರಚಿತಾ ರಾಮ್ (ಅಯೋಗ್ಯ)
ಅತ್ಯುತ್ತಮ ನಿರ್ದೇಶಕ ಪ್ರಶಾಂತ್ ನೀಲ್ (ಕೆಜಿಎಫ್)
ಅತ್ಯುತ್ತಮ ಖಳ ನಟ ಧನಂಜಯ್ (ಟಗರು)
ಅತ್ಯುತ್ತಮ ನವ ನಟಿ ಅನುಪಮ ಗೌಡ (ಆ ಕರಾಳ ರಾತ್ರಿ)
ಅತ್ಯುತ್ತಮ ನವ ನಿರ್ದೇಶಕ ಮಹೇಶ್ ಕುಮಾರ್ (ಅಯೋಗ್ಯ)
ಅತ್ಯುತ್ತಮ ಗೀತರಚನೆ ಚೇತನ್ ಕುಮಾರ್ (ಏನಮ್ಮಿ ಏನಮ್ಮಿ)
ಅತ್ಯುತ್ತಮ ಪೋಷಕ ನಟ ಪ್ರಕಾಶ್ ಕೆ ತುಮಿನಾಡು (ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಾಸರಗೋಡು)
ಅತ್ಯುತ್ತಮ ಪೋಷಕ ನಟಿ ಅರ್ಚನಾ (ಕೆಜಿಎಫ್)
ಅತ್ಯುತ್ತಮ ಗಾಯಕಿ ಅನನ್ಯ ಭಟ್ (ಹೋಲ್ಡನ್..ಹೋಲ್ಡನ್..)
ಅತ್ಯುತ್ತಮ ಛಾಯಾಗ್ರಾಹಕ ಭುವನ್ ಗೌಡ (ಕೆಜಿಎಫ್)
ಅತ್ಯುತ್ತಮ ಸಂಗೀತ ನಿರ್ದೇಶಕ ರವಿ ಬಸ್ರೂರ್ (ಕೆಜಿಎಫ್)
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…